AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್

ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಟೆಸ್ಟಿಂಗ್ ಮಾಡಿ ರಿಪೋರ್ಟ್ ಬಂದ ನಂತರವೇ ಅವರನ್ನು ಸಿಬ್ಬಂದಿಗಳು ಮನೆಗೆ ಕಳುಹಿಸುತ್ತಿದ್ದಾರೆ. ಈಗಾಗಲೇ ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಮೂರು ಪಾಳಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ.

ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: |

Updated on:Nov 28, 2021 | 8:40 AM

Share

ಬೆಂಗಳೂರು: ದೇಶದಲ್ಲೆಡೆ ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಹೀಗಾಗಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊಸ ರೂಪಾಂತರಿ ಕೊರೊನಾ ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. 10 ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ‌ ಹದ್ದಿನ ಕಣ್ಣು ಇಡಲಾಗಿದೆ. ಬೇರೆ ದೇಶಗಳಿಂದ ಬರುವ ಪ್ರಯಾಣಿಕರ 48 ಗಂಟೆಗಳ ಒಳಗಿನ ನೆಗಟಿವ್ ರಿಪೋರ್ಟ್ ಮತ್ತು ವಿಮಾನ ನಿಲ್ದಾಣದಲ್ಲೇ ಸ್ಕ್ರೀನಿಂಗ್ ಮಾಡಿ, ವಿಳಾಸ, ಪೋನ್ ನಂಬರ್ ಪಡೆದು ಸಿಬ್ಬಂದಿಗಳು ಕಳುಹಿಸುತ್ತಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಟೆಸ್ಟಿಂಗ್ ಮಾಡಿ ರಿಪೋರ್ಟ್ ಬಂದ ನಂತರವೇ ಅವರನ್ನು ಸಿಬ್ಬಂದಿಗಳು ಮನೆಗೆ ಕಳುಹಿಸುತ್ತಿದ್ದಾರೆ. ಈಗಾಗಲೇ ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಮೂರು ಪಾಳಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ.

ಕಲಬುರಗಿ: ಜಿಲ್ಲೆಯ ಗಡಿಯಲ್ಲಿ ಹೈ ಅಲರ್ಟ್​ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆ ಹಿನ್ನಲೆ ಕಲಬುರಗಿ ಜಿಲ್ಲೆಯ ಗಡಿಯಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವುದರಿಂದ ಈ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ ಚಕ್ ಪೋಸ್ಟ್​ನಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಪೋಲಿಸರು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲೆಯ ಹಿರೋಳ್ಳಿ, ಖಜೂರಿ, ಬಳ್ಳೂರಗಿ, ಚಕ್ ಪೋಸ್ಟ್​​ಗಳಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿದೆ. ಆರ್​ಟಿಪಿಸಿಆರ್​ ನೆಗಟಿವ್ ರಿಪೋರ್ಟ್ ನೋಡಿ ಸಿಬ್ಬಂದಿಗಳು ಗಡಿಯೊಳಗೆ ಬಿಡುತ್ತಿದ್ದಾರೆ.

ವಿದೇಶದಿಂದ ಬರುವ ಪ್ರಯಾಣಿಕರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಹೊಸ ರೂಪಾಂತರಿ ಕೊರೊನಾ ಭೀತಿ ಹಿನ್ನೆಲೆ, ವಿದೇಶದಿಂದ ಬರುವ ಪ್ರಯಾಣಿಕರಿಗಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ ರಿಪೋರ್ಟ್ ಬರುವವರೆಗೂ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಡಾಟಾ ಎಂಟ್ರಿ ಮತ್ತು ರಿಪೋರ್ಟ್​ಗಾಗಿ ಕಾಯುವ ಪ್ರಯಾಣಿಕರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಕೆಲ ಪ್ರಯಾಣಿಕರು ನೆಗಟಿವ್ ರಿಪೋರ್ಟ್ ಇಲ್ಲದೆ ಬರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಪ್ರತ್ಯೇಕ ಆಸನದ ವೈಟಿಂಗ್ ಹಾಲ್ ಮಾಡಲಾಗಿದೆ.

ಈಗಾಗಲೇ ದುಬೈ, ದಕ್ಷಿಣ ಆಫ್ರಿಕಾ, ಬ್ರೆಜಿಲ್‌ ಸೇರಿದಂತೆ ಸಾಕಷ್ಟು ಕಡೆಯಿಂದ ಪ್ರಯಾಣಿಕರು ಬರುತ್ತಿದ್ದಾರೆ. ಸರ್ಕಾರದ ಆದೇಶದಂತೆ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಇಂದು ಸರ್ಕಾರದ ಹೊಸ ಗೈಡ್ ಲೈನ್ಸ್ ಬಂದಲ್ಲಿ ಮತ್ತಷ್ಟು ನಿಗಾ ಹೆಚ್ಚಲಿದೆ. ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ನೇತೃತ್ವದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಗಾ ವಹಿಸಲಾಗಿದೆ.

ಇದನ್ನೂ ಓದಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಆತಂಕ; ಬೀದಿ ನಾಯಿಗಳ ಕಾಟಕ್ಕೆ ತತ್ತರಿಸಿದ ಪ್ರಯಾಣಿಕರು

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು; ಬೆಂಗಳೂರಿನ ಎರಡು ವಿದ್ಯಾ ಸಂಸ್ಥೆಗಳಲ್ಲಿ ಹೆಚ್ಚಾದ ಸೋಂಕಿತರು, ಅಧಿಕಾರಿಗಳಿಂದ ಖಡಕ್ ಸೂಚನೆ

Published On - 7:35 am, Sun, 28 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ