AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಸಿಬ್ಬಂದಿ ಕೊವಿಡ್​ ರೋಗ ಲಕ್ಷಣ ರಹಿತರಾಗಿರಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ, ಶುಗರ್​, ಬಿಪಿ ಸಮಸ್ಯೆ ಇದ್ದರೆ ಅಂತಹ ಸಿಬ್ಬಂದಿ ಕಡ್ಡಾಯವಾಗಿ ಫೇಸ್​ ಶೀಲ್ಡ್​ ಧರಿಸಬೇಕು ಎಂದು ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 19, 2021 | 8:15 PM

Share

ಬೆಂಗಳೂರು: ವಿಧಾನಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗಿಯಾಗುವವರು ಮಾಸ್ಕ್​ ಧರಿಸಬೇಕು. ನಾಮಪತ್ರ ಸಲ್ಲಿಸುವಾಗ ಕೇವಲ ನಾಲ್ವರಿಗೆ ಮಾತ್ರ ಅವಕಾಶ ನೀಡಲಾಗಿದೆ. ನಾಮಪತ್ರ ಸಲ್ಲಿಸಲು ತೆರಳುವಾಗ 3 ವಾಹನ ಮಾತ್ರ ಬಳಸಬೇಕು. ಚುನಾವಣಾಧಿಕಾರಿ ಅಭ್ಯರ್ಥಿಗೆ ಸಮಯ ನಿಗದಿ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಚುನಾವಣಾ ಪ್ರಚಾರ ವೇಳೆ 500 ಜನ ಭಾಗಿ ಆಗಬಹುದು. ಪ್ರಚಾರದಲ್ಲಿ ಭಾಗಿ ಆಗುವವರು ಲಸಿಕೆ ತೆಗೆದುಕೊಂಡಿರಬೇಕು. 2 ಡೋಸ್​ ಲಸಿಕೆ ಪಡೆದಿರಬೇಕು. ದೊಡ್ಡ ಹಾಲ್​ಗಳಲ್ಲಿ ಪರಿಷತ್ ಚುನಾವಣಾ ಸಭೆ ನಡೆಸಬೇಕು. ಸಭೆಯ ಹಿಂದಿನ ದಿನ ಸಭಾಂಗಣ ಸ್ಯಾನಿಟೈಸ್ ಮಾಡಿರಬೇಕು. ಚುನಾವಣಾ ಸಿಬ್ಬಂದಿ ಕೂಡ 2 ಡೋಸ್ ಲಸಿಕೆ ಪಡೆದಿರಬೇಕು. ಸಿಬ್ಬಂದಿ ಕೊವಿಡ್​ ರೋಗ ಲಕ್ಷಣ ರಹಿತರಾಗಿರಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ, ಶುಗರ್​, ಬಿಪಿ ಸಮಸ್ಯೆ ಇದ್ದರೆ ಅಂತಹ ಸಿಬ್ಬಂದಿ ಕಡ್ಡಾಯವಾಗಿ ಫೇಸ್​ ಶೀಲ್ಡ್​ ಧರಿಸಬೇಕು ಎಂದು ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಡಿಸೆಂಬರ್ 13 ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 13 ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ಎಂದು ಮಾಹಿತಿ ನೀಡಲಾಗಿದೆ. ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಬೇಕು ಎನ್ನುವ ಬಗ್ಗೆ ಬಹಳ ಬೇಡಿಕೆ ಇತ್ತು. ಅದರಂತೆ ಈ ಬಾರಿ ಬೆಳಗಾವಿಯಲ್ಲಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಯಲಿರುವ ದಿನಾಂಕ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಎಸ್‌ಐಟಿ ತಂಡದಿಂದ 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ; ಐವರು ಆರೋಪಿಗಳ ಬಂಧನ

ಇದನ್ನೂ ಓದಿ: ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್