AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಸಿಬ್ಬಂದಿ ಕೊವಿಡ್​ ರೋಗ ಲಕ್ಷಣ ರಹಿತರಾಗಿರಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ, ಶುಗರ್​, ಬಿಪಿ ಸಮಸ್ಯೆ ಇದ್ದರೆ ಅಂತಹ ಸಿಬ್ಬಂದಿ ಕಡ್ಡಾಯವಾಗಿ ಫೇಸ್​ ಶೀಲ್ಡ್​ ಧರಿಸಬೇಕು ಎಂದು ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 19, 2021 | 8:15 PM

Share

ಬೆಂಗಳೂರು: ವಿಧಾನಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗಿಯಾಗುವವರು ಮಾಸ್ಕ್​ ಧರಿಸಬೇಕು. ನಾಮಪತ್ರ ಸಲ್ಲಿಸುವಾಗ ಕೇವಲ ನಾಲ್ವರಿಗೆ ಮಾತ್ರ ಅವಕಾಶ ನೀಡಲಾಗಿದೆ. ನಾಮಪತ್ರ ಸಲ್ಲಿಸಲು ತೆರಳುವಾಗ 3 ವಾಹನ ಮಾತ್ರ ಬಳಸಬೇಕು. ಚುನಾವಣಾಧಿಕಾರಿ ಅಭ್ಯರ್ಥಿಗೆ ಸಮಯ ನಿಗದಿ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಚುನಾವಣಾ ಪ್ರಚಾರ ವೇಳೆ 500 ಜನ ಭಾಗಿ ಆಗಬಹುದು. ಪ್ರಚಾರದಲ್ಲಿ ಭಾಗಿ ಆಗುವವರು ಲಸಿಕೆ ತೆಗೆದುಕೊಂಡಿರಬೇಕು. 2 ಡೋಸ್​ ಲಸಿಕೆ ಪಡೆದಿರಬೇಕು. ದೊಡ್ಡ ಹಾಲ್​ಗಳಲ್ಲಿ ಪರಿಷತ್ ಚುನಾವಣಾ ಸಭೆ ನಡೆಸಬೇಕು. ಸಭೆಯ ಹಿಂದಿನ ದಿನ ಸಭಾಂಗಣ ಸ್ಯಾನಿಟೈಸ್ ಮಾಡಿರಬೇಕು. ಚುನಾವಣಾ ಸಿಬ್ಬಂದಿ ಕೂಡ 2 ಡೋಸ್ ಲಸಿಕೆ ಪಡೆದಿರಬೇಕು. ಸಿಬ್ಬಂದಿ ಕೊವಿಡ್​ ರೋಗ ಲಕ್ಷಣ ರಹಿತರಾಗಿರಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ, ಶುಗರ್​, ಬಿಪಿ ಸಮಸ್ಯೆ ಇದ್ದರೆ ಅಂತಹ ಸಿಬ್ಬಂದಿ ಕಡ್ಡಾಯವಾಗಿ ಫೇಸ್​ ಶೀಲ್ಡ್​ ಧರಿಸಬೇಕು ಎಂದು ಪರಿಷತ್​ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಡಿಸೆಂಬರ್ 13 ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 13 ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ಎಂದು ಮಾಹಿತಿ ನೀಡಲಾಗಿದೆ. ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಬೇಕು ಎನ್ನುವ ಬಗ್ಗೆ ಬಹಳ ಬೇಡಿಕೆ ಇತ್ತು. ಅದರಂತೆ ಈ ಬಾರಿ ಬೆಳಗಾವಿಯಲ್ಲಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಯಲಿರುವ ದಿನಾಂಕ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಎಸ್‌ಐಟಿ ತಂಡದಿಂದ 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ; ಐವರು ಆರೋಪಿಗಳ ಬಂಧನ

ಇದನ್ನೂ ಓದಿ: ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್