AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಕೊವಿಡ್ ಇಳಿಕೆ ಬೆನ್ನಲ್ಲೇ ಬೆಂಗಳೂರು ಜನತೆ ಮಾಸ್ಕ್ ಮರೆತಿದ್ದರು. ಆದರೆ ಈಗ ಮತ್ತೆ ಮಾಸ್ಕ್ ಕಡ್ಡಾಯವಾಗಿದೆ. ಸದ್ಯ ನಮ್ಮ ಮೆಟ್ರೋ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 28, 2021 | 11:09 AM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇಂದಿನಿಂದ ಕಟ್ಟುನಿಟ್ಟಿನ ಕ್ರಮಕ್ಕೆ ನಮ್ಮ ಮೆಟ್ರೋ ಮುಂದಾಗಿದ್ದು, ಮಾಸ್ಕ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬೆಂಗಳೂರು ಮೆಟ್ರೋ ನಿಗಮ (BMRCL) ಮೆಟ್ರೋ ಸ್ಟೇಷನ್, ಮೆಟ್ರೋ ಬೋಗಿ ಒಳಗೆ ಮಾಸ್ಕ್ ಇಲ್ಲದೆ ಬರುವ ಪ್ರಯಾಣಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರೂಪಾಂತರಿ ಒಮಿಕ್ರಾನ್ ಆತಂಕದಿಂದ ಪ್ರಯಾಣಿಕರ ಮೇಲೆ ಮೆಟ್ರೋ ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ.

ಕೊವಿಡ್ ಇಳಿಕೆ ಬೆನ್ನಲ್ಲೇ ಬೆಂಗಳೂರು ಜನತೆ ಮಾಸ್ಕ್ ಮರೆತಿದ್ದರು. ಆದರೆ ಈಗ ಮತ್ತೆ ಮಾಸ್ಕ್ ಕಡ್ಡಾಯವಾಗಿದೆ. ಸದ್ಯ ನಮ್ಮ ಮೆಟ್ರೋ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮೆಟ್ರೋದಲ್ಲಿ ಕೊವಿಡ್ ನಿಯಮ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಂತೆ ಮೆಟ್ರೋ ಎಂ.ಡಿ ಅಂಜುಂ ಪರ್ವೇಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೀದರ್: ರೂಪಾಂತರಿ ಕೊರೊನಾ ವೈರಸ್ ಹಾವಳಿ ಹಿನ್ನೆಲೆ ಗಡಿಯಲ್ಲಿ ಕಟ್ಟೆಚ್ಚರ ಬೀದರ್ ಜಿಲ್ಲೆಯ ಕಮಲನಗರ ಮಹಾರಾಷ್ಟ್ರ ಚೆಕ್ ಪೋಸ್ಟ್, ಔರಾದ್​ನ ವನಮಾರಪಳ್ಳಿ ಚೆಕ್ ಪೋಸ್ಟ್, ಬೀದರ್ ತಾಲೂಕಿನ ದೇವದೇವ ವನದ ಬಳಿಯ ತೆಲಂಗಾಣ ಚೇಕ್ ಪೋಸ್ಟ್​ನಲ್ಲಿ ಕಟ್ಟೆಚರ ವಹಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು, ಪುರಸಭೆ ನಗರಸಭೆ ಸಿಬ್ಬಂದಿಗಳು ಬೀದರ್, ತೆಲಂಗಾಣ, ಮಹಾರಾಷ್ಟ್ರ ಗಡಿಯಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕೊವಿಡ್ ವಾಕ್ಸಿನ್ ಎರಡೂ ಡೋಸ್ ಪಡೆದವರಿಗಷ್ಟೇ ರಾಜ್ಯಕ್ಕೆ ಪ್ರವೇಶ ನೀಡುತ್ತಿದ್ದಾರೆ. ನಿನ್ನೆಯಿಂದ ಗಡಿಯಲ್ಲಿ ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿಗಳು ಬೀಡು ಬಿಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಡಳಿತ ಸೂಚನೆ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿಯ ಎಲ್ಲಾ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಕಳೆದ 16 ದಿನಗಳಲ್ಲಿ ಹೊರರಾಜ್ಯ, ಜಿಲ್ಲೆಗಳಿಂದ ಬಂದವರ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ 200 ಜನರ ಥ್ರೋಟ್ ಸ್ವ್ಯಾಬ್ ಸಂಗ್ರಹ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಸೇರಿ ಹೊರ ರಾಜ್ಯಗಳಿಂದ ಬೆಳಗಾವಿಗೆ ಒಟ್ಟು 293 ವಿದ್ಯಾರ್ಥಿಗಳು ಬೆಳಗಾವಿಯ ವಿವಿಧ ಶಿಕ್ಷಣ ಸಂಸ್ಥೆಗಳು, ಹಾಸ್ಟೇಲ್‌ಗೆ ಆಗಮಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್

ಗಡಿಭಾಗದಲ್ಲಿ ಕಟ್ಟೆಚ್ಚರ, ಮಾಸ್ಕ್, ಲಸಿಕೆ ಕಡ್ಡಾಯ, ಬೂಸ್ಟರ್ ಡೋಸ್; ಸಭೆಯ ಮುಖ್ಯ ತೀರ್ಮಾನಗಳ ಬಗ್ಗೆ ಆರ್ ಅಶೋಕ್ ಮಾಹಿತಿ

Published On - 10:57 am, Sun, 28 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ