AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ....

ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ
ಆರೋಗ್ಯ ಸಚಿವ ಡಾ ಕೆ ಸುಧಾಕರ್
TV9 Web
| Updated By: ಆಯೇಷಾ ಬಾನು|

Updated on:Dec 08, 2021 | 9:55 AM

Share

ಬೆಂಗಳೂರು: ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೆ ನಿಖರವಾಗಿ ಸಮಯ ಹೇಳುವುದಕ್ಕೆ ಈಗ ಆಗಲ್ಲ. ರಾಜ್ಯಕ್ಕೆ 3, 4ನೇ ಅಲೆ ಬಂದರೂ ದೊಡ್ಡ ಪರಿಣಾಮವಾಗಲ್ಲ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ. ಶಾಲಾ-ಕಾಲೇಜಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದ ಜನ ಕೂಡ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ತಡೆಗೆ ಕೈಗೊಂಡ ಕ್ರಮಗಳು ಸಮಯೋಚಿತವಾಗಿದೆ. ನಾವು ಕೈಕೊಂಡ ಕ್ರಮಗಳನ್ನು ಇತರರು ಅನುಸರಿಸಬೇಕು. ಒಮಿಕ್ರಾನ್ ಬಗ್ಗೆ ಯಾರೂ ಉದಾಸೀನ ಮಾಡಬಾರದು. ಇದು ಹೊಸ ಪ್ರಭೇದವಾಗಿದ್ದು ತಕ್ಷಣಕ್ಕೆ ಗೊತ್ತಾಗಲ್ಲ ಅಧ್ಯಯನ ಬೇಕು. ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ ಮೊದಲ ಹಾಗೂ ಎರಡನೇ ಅಲೆಯೇ ಹೆಚ್ಚು ಅಪಾಯವಾಗಿರುತ್ತೆ. ಮೂರನೇ ಅಲೆಯಲ್ಲಿ ದೊಡ್ಡ ದುಷ್ಪರಿಣಾಮ ಯಾವುದು ಆಗೋದಿಲ್ಲ ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು ಎಂದು ರಾಜ್ಯದ ಜನತೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಹೊಸವರ್ಷ, ಕ್ರಿಸ್‌ಮಸ್ ಆಚರಣೆಗೆ ಗೈಡ್‌ಲೈನ್ಸ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು, ಈ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಎಂದು ಸುಮ್ಮನಾದ್ರು.

ಇದನ್ನೂ ಓದಿ: ‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

Published On - 9:42 am, Wed, 8 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ