AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ....

ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ
ಆರೋಗ್ಯ ಸಚಿವ ಡಾ ಕೆ ಸುಧಾಕರ್
TV9 Web
| Edited By: |

Updated on:Dec 08, 2021 | 9:55 AM

Share

ಬೆಂಗಳೂರು: ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೆ ನಿಖರವಾಗಿ ಸಮಯ ಹೇಳುವುದಕ್ಕೆ ಈಗ ಆಗಲ್ಲ. ರಾಜ್ಯಕ್ಕೆ 3, 4ನೇ ಅಲೆ ಬಂದರೂ ದೊಡ್ಡ ಪರಿಣಾಮವಾಗಲ್ಲ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ. ಶಾಲಾ-ಕಾಲೇಜಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದ ಜನ ಕೂಡ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ತಡೆಗೆ ಕೈಗೊಂಡ ಕ್ರಮಗಳು ಸಮಯೋಚಿತವಾಗಿದೆ. ನಾವು ಕೈಕೊಂಡ ಕ್ರಮಗಳನ್ನು ಇತರರು ಅನುಸರಿಸಬೇಕು. ಒಮಿಕ್ರಾನ್ ಬಗ್ಗೆ ಯಾರೂ ಉದಾಸೀನ ಮಾಡಬಾರದು. ಇದು ಹೊಸ ಪ್ರಭೇದವಾಗಿದ್ದು ತಕ್ಷಣಕ್ಕೆ ಗೊತ್ತಾಗಲ್ಲ ಅಧ್ಯಯನ ಬೇಕು. ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ ಮೊದಲ ಹಾಗೂ ಎರಡನೇ ಅಲೆಯೇ ಹೆಚ್ಚು ಅಪಾಯವಾಗಿರುತ್ತೆ. ಮೂರನೇ ಅಲೆಯಲ್ಲಿ ದೊಡ್ಡ ದುಷ್ಪರಿಣಾಮ ಯಾವುದು ಆಗೋದಿಲ್ಲ ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು ಎಂದು ರಾಜ್ಯದ ಜನತೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಹೊಸವರ್ಷ, ಕ್ರಿಸ್‌ಮಸ್ ಆಚರಣೆಗೆ ಗೈಡ್‌ಲೈನ್ಸ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು, ಈ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಎಂದು ಸುಮ್ಮನಾದ್ರು.

ಇದನ್ನೂ ಓದಿ: ‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

Published On - 9:42 am, Wed, 8 December 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ