Covid 19 Karnataka Update: 20 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, 1 ಲಕ್ಷದ ಸನಿಹಕ್ಕೆ ಸಕ್ರಿಯ ಪ್ರಕರಣಗಳು
ಕರ್ನಾಟಕದ ಪಾಸಿಟಿವಿಟಿ ಪ್ರಮಾಣ ಶೇ 10.96 ಮುಟ್ಟಿದ್ದು, ಸೋಂಕಿನಿಂದ ಸಾಯುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಪ್ರಸ್ತುತ 93,099 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ಕರ್ನಾಟಕದ ವಿವಿಧೆಡೆ ಬುಧವಾರ (ಜ.12) ಒಟ್ಟು 21,390 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 10.96 ಮುಟ್ಟಿದ್ದು, ಸೋಂಕಿನಿಂದ ಸಾಯುವವರ ಪ್ರಮಾಣ ಶೇ 0.04 ಇದೆ. ಇಂದು 1541 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ 30,99,519 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 29,68,002 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 38,389 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಸ್ತುತ 93,099 ಸಕ್ರಿಯ ಪ್ರಕರಣಗಳಿವೆ.
ಎಂದಿನಂತೆ ಬೆಂಗಳೂರು ನಗರದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಕೊವಿಡ್ ಸೋಂಕು ಮತ್ತು ಸಾವಿನ ಸಂಖ್ಯೆಗಳು ವರದಿಯಾಗಿವೆ. ನಗರದಲ್ಲಿ ಜ.12ರಂದು ಒಟ್ಟು 15,617 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 874 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 6 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 16,433 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಪ್ರಸ್ತುತ 73,654 ಸಕ್ರಿಯ ಪ್ರಕರಣಗಳಿವೆ. ಈವರೆಗೆ 13,34,957 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,44,869 ಮಂದಿ ಚೇತರಿಸಿಕೊಂಡಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 13, ಬಳ್ಳಾರಿ 180, ಬೆಳಗಾವಿ 269, ಬೆಂಗಳೂರು ಗ್ರಾಮಾಂತರ 310, ಬೆಂಗಳೂರು ನಗರ 15,617, ಬೀದರ್ 111, ಚಾಮರಾಜನಗರ 106, ಚಿಕ್ಕಬಳ್ಳಾಪುರ 141, ಚಿಕ್ಕಮಗಳೂರು 87, ಚಿತ್ರದುರ್ಗ 86, ದಕ್ಷಿಣ ಕನ್ನಡ 519, ದಾವಣಗೆರೆ 137, ಧಾರವಾಡ 264, ಗದಗ 43, ಹಾಸನ 409, ಹಾವೇರಿ 14, ಕಲಬುರಗಿ 188, ಕೊಡಗು 69, ಕೋಲಾರ 282, ಕೊಪ್ಪಳ 47, ಮಂಡ್ಯ 319, ಮೈಸೂರು 524, ರಾಯಚೂರು 91, ರಾಮನಗರ 135, ಶಿವಮೊಗ್ಗ 201, ತುಮಕೂರು 594, ಉಡುಪಿ 361, ಉತ್ತರ ಕನ್ನಡ 199, ವಿಜಯಪುರ 64, ಯಾದಗಿರಿ 10.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ಗ್ರಾಮಾಂತರ 6, ಬಳ್ಳಾರಿ, ದಕ್ಷಿಣ ಕನ್ನಡ, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದಿನ 12/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/jQRBw7JvJG @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nal0XhlOO8
— K’taka Health Dept (@DHFWKA) January 12, 2022
ಇದನ್ನೂ ಓದಿ: ಕೊರೊನಾ ಸೋಂಕು ಹೆಚ್ಚಳ: ಧಾರವಾಡ, ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಇದನ್ನೂ ಓದಿ: ಕರ್ನಾಟಕದಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ: ಬಿಸಿ ನಾಗೇಶ್ ಸ್ಪಷ್ಟನೆ
Published On - 8:34 pm, Wed, 12 January 22