AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಒಂದೇ ದಿನ 48 ಸಾವಿರ ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 22 ಜನರು ಸಾವು

Covid 19: ಕರ್ನಾಟಕದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ಏರಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ತುಸು ಕಡಿಮೆಯಾಗಿದ್ದು, ಶೇ 19.23ಕ್ಕೆ ಬಂದಿದೆ.

Covid 19 Karnataka Update: ಒಂದೇ ದಿನ 48 ಸಾವಿರ ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 22 ಜನರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 21, 2022 | 8:40 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಂಕು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶುಕ್ರವಾರ (ಜ.21) ಒಟ್ಟು 48,049 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 22 ಜನರು ಸಾವನ್ನಪ್ಪಿದ್ದಾರೆ. 18,115 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ಏರಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ತುಸು ಕಡಿಮೆಯಾಗಿದ್ದು, ಶೇ 19.23ಕ್ಕೆ ಬಂದಿದೆ. ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 34,25,002 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 30,63,292 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,537 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ ಶುಕ್ರವಾರ 29,068 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. 7,116 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ 15,42,092 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 13,02,027 ಜನರು ಸಾವಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 2,23,580 ಸಕ್ರಿಯ ಪ್ರಕರಣಗಳಿವೆ. ಈವರೆಗೆ ನಗರದಲ್ಲಿ ಒಟ್ಟು 16,484 ಜನರು ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 29,068, ಬಾಗಲಕೋಟೆ 85, ಬಳ್ಳಾರಿ 767, ಬೆಳಗಾವಿ 518, ಬೆಂಗಳೂರು ಗ್ರಾಮಾಂತರ 1036, ಬೀದರ್ 351, ಚಾಮರಾಜನಗರ 576, ಚಿಕ್ಕಬಳ್ಳಾಪುರ 772, ಚಿಕ್ಕಮಗಳೂರು 319, ಚಿತ್ರದುರ್ಗ 438, ದಕ್ಷಿಣ ಕನ್ನಡ 897, ದಾವಣಗೆರೆ 249, ಧಾರವಾಡ 373, ಗದಗ 336, ಹಾಸನ 1889, ಹಾವೇರಿ 143, ಕಲಬುರಗಿ 1164, ಕೊಡಗು 317, ಕೋಲಾರ 645, ಕೊಪ್ಪಳ 324, ಮಂಡ್ಯ 1506, ಮೈಸೂರು 915, ರಾಯಚೂರು 367, ರಾಮನಗರ 330, ಶಿವಮೊಗ್ಗ 500, ತುಮಕೂರು 2021, ಉಡುಪಿ 1018, ಉತ್ತರ ಕನ್ನಡ 682, ವಿಜಯಪುರ 327, ಯಾದಗಿರಿ 116.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 6, ಉಡುಪಿ 4, ಮೈಸೂರು 3, ಹಾವೇರಿ 2, ರಾಮನಗರ, ಶಿವಮೊಗ್ಗ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ 1.

ಇದನ್ನೂ ಓದಿ: ಜನರ ಜೀವ, ಜೀವನ ಗಮನದಲ್ಲಿಟ್ಟುಕೊಂಡು ಹೊಸ ಕೊವಿಡ್ ಮಾರ್ಗಸೂಚಿಯ ತೀರ್ಮಾನ: ಆರ್ ಅಶೋಕ್ ಇದನ್ನೂ ಓದಿ: ಜ್ವರ ಮತ್ತು ಸ್ನಾಯು ದೌರ್ಬಲ್ಯ ಕೊವಿಡ್ ಮೂರನೇ ಅಲೆಯಲ್ಲಿ ಕಂಡು ಬರುವ ಸಾಮಾನ್ಯ ರೋಗ ಲಕ್ಷಣಗಳು: ಕೇಂದ್ರ

Published On - 8:38 pm, Fri, 21 January 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?