AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು

Karnataka Coronavirus Numbers: ಕರ್ನಾಟಕದಲ್ಲಿ ಪ್ರಸ್ತುತ 1,97,982 ಸಕ್ರಿಯ (Active Cases) ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 19.29 ಇದೆ.

Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 16, 2022 | 8:21 PM

Share

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ (ಜ.16) ಒಟ್ಟು 34,047 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು (Coronavirus Infection) ದೃಢಪಟ್ಟಿದೆ. 13 ಮಂದಿ ಸಾವನ್ನಪ್ಪಿದ್ದಾರೆ, 5902 ಜನರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,97,982 ಸಕ್ರಿಯ (Active Cases) ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 19.29 ಇದೆ. ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.03 ಇದೆ. ರಾಜ್ಯದಲ್ಲಿ ಈವರೆಗೆ ಕೊವಿಡ್​ನಿಂದ 38,431 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 32,20,087 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,83,645 ಜನರು ಚೇತರಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ 21,071 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 3978 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,46,200 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 14,16,807 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,54,153 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,453 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 136, ಬಳ್ಳಾರಿ 566, ಬೆಳಗಾವಿ 468, ಬೆಂಗಳೂರು ಗ್ರಾಮಾಂತರ 722, ಬೀದರ್ 178, ಚಾಮರಾಜನಗರ 146, ಚಿಕ್ಕಬಳ್ಳಾಪುರ 287, ಚಿಕ್ಕಮಗಳೂರು 135, ಚಿತ್ರದುರ್ಗ 184, ದಕ್ಷಿಣ ಕನ್ನಡ 782, ದಾವಣಗೆರೆ 244, ಧಾರವಾಡ 634, ಗದಗ 117, ಹಾಸನ 1171, ಹಾವೇರಿ 55, ಕಲಬುರಗಿ 562, ಕೊಡಗು 148, ಕೋಲಾರ 552, ಕೊಪ್ಪಳ 80, ಮಂಡ್ಯ 709, ಮೈಸೂರು 1892, ರಾಯಚೂರು 143, ರಾಮನಗರ 231, ಶಿವಮೊಗ್ಗ 287, ತುಮಕೂರು 1373, ಉಡುಪಿ 591, ಉತ್ತರ ಕನ್ನಡ 447, ವಿಜಯಪುರ 103, ಯಾದಗಿರಿ 33.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 2, ಹಾಸನ, ಕಲಬುರಗಿ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ವೈರಸ್ ಪತ್ತೆ; ಚೀನಾದಲ್ಲಿ ಸೂಪರ್ ಮಾರ್ಕೆಟ್​ಗಳು ಬಂದ್ ಇದನ್ನೂ ಓದಿ: Corona Review Meeting: ಕರ್ನಾಟಕದಲ್ಲಿ ವ್ಯಾಪಿಸುತ್ತಿರುವ ಕೊರೊನಾ: ತಜ್ಞರ ಸಮಿತಿಯೊಂದಿಗೆ ಜ.17ಕ್ಕೆ ಮುಖ್ಯಮಂತ್ರಿ ಸಭೆ

Published On - 8:20 pm, Sun, 16 January 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?