Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು

Karnataka Coronavirus Numbers: ಕರ್ನಾಟಕದಲ್ಲಿ ಪ್ರಸ್ತುತ 1,97,982 ಸಕ್ರಿಯ (Active Cases) ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 19.29 ಇದೆ.

Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 16, 2022 | 8:21 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ (ಜ.16) ಒಟ್ಟು 34,047 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು (Coronavirus Infection) ದೃಢಪಟ್ಟಿದೆ. 13 ಮಂದಿ ಸಾವನ್ನಪ್ಪಿದ್ದಾರೆ, 5902 ಜನರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,97,982 ಸಕ್ರಿಯ (Active Cases) ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 19.29 ಇದೆ. ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.03 ಇದೆ. ರಾಜ್ಯದಲ್ಲಿ ಈವರೆಗೆ ಕೊವಿಡ್​ನಿಂದ 38,431 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 32,20,087 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,83,645 ಜನರು ಚೇತರಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ 21,071 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 3978 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,46,200 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 14,16,807 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,54,153 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,453 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 136, ಬಳ್ಳಾರಿ 566, ಬೆಳಗಾವಿ 468, ಬೆಂಗಳೂರು ಗ್ರಾಮಾಂತರ 722, ಬೀದರ್ 178, ಚಾಮರಾಜನಗರ 146, ಚಿಕ್ಕಬಳ್ಳಾಪುರ 287, ಚಿಕ್ಕಮಗಳೂರು 135, ಚಿತ್ರದುರ್ಗ 184, ದಕ್ಷಿಣ ಕನ್ನಡ 782, ದಾವಣಗೆರೆ 244, ಧಾರವಾಡ 634, ಗದಗ 117, ಹಾಸನ 1171, ಹಾವೇರಿ 55, ಕಲಬುರಗಿ 562, ಕೊಡಗು 148, ಕೋಲಾರ 552, ಕೊಪ್ಪಳ 80, ಮಂಡ್ಯ 709, ಮೈಸೂರು 1892, ರಾಯಚೂರು 143, ರಾಮನಗರ 231, ಶಿವಮೊಗ್ಗ 287, ತುಮಕೂರು 1373, ಉಡುಪಿ 591, ಉತ್ತರ ಕನ್ನಡ 447, ವಿಜಯಪುರ 103, ಯಾದಗಿರಿ 33.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 2, ಹಾಸನ, ಕಲಬುರಗಿ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ವೈರಸ್ ಪತ್ತೆ; ಚೀನಾದಲ್ಲಿ ಸೂಪರ್ ಮಾರ್ಕೆಟ್​ಗಳು ಬಂದ್ ಇದನ್ನೂ ಓದಿ: Corona Review Meeting: ಕರ್ನಾಟಕದಲ್ಲಿ ವ್ಯಾಪಿಸುತ್ತಿರುವ ಕೊರೊನಾ: ತಜ್ಞರ ಸಮಿತಿಯೊಂದಿಗೆ ಜ.17ಕ್ಕೆ ಮುಖ್ಯಮಂತ್ರಿ ಸಭೆ

Published On - 8:20 pm, Sun, 16 January 22

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ