AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕೊರೊನಾ ಕಂಟಕ; ಮುಂದಿನ 2 ವಾರದಲ್ಲಿ ಕೊವಿಡ್ ಪೀಕ್​ಗೆ, ಮಾಕ್ ಡ್ರಿಲ್​ಗೆ ಸೂಚನೆ

ಮುಂದಿನ 2 ವಾರದಲ್ಲಿ ಕೊವಿಡ್ ಕೇಸ್​ಗಳು ಪೀಕ್​ಗೆ ತಲುಪಲಿವೆ. ಹೀಗಾಗಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ಗೆ ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ.

ಕರ್ನಾಟಕಕ್ಕೆ ಕೊರೊನಾ ಕಂಟಕ; ಮುಂದಿನ 2 ವಾರದಲ್ಲಿ ಕೊವಿಡ್ ಪೀಕ್​ಗೆ, ಮಾಕ್ ಡ್ರಿಲ್​ಗೆ ಸೂಚನೆ
ಕೊರೊನಾವೈರಸ್Image Credit source: IndiaToday
ಆಯೇಷಾ ಬಾನು
|

Updated on:Apr 10, 2023 | 2:13 PM

Share

ಬೆಂಗಳೂರು: ರಾಜ್ಯದಲ್ಲಿ ಕೊವಿಡ್​ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಮುಂದಿನ 2 ವಾರದಲ್ಲಿ ಕೊವಿಡ್ ಕೇಸ್​ಗಳು ಪೀಕ್​ಗೆ ತಲುಪಲಿವೆ. ಹೀಗಾಗಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ಗೆ ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಮಾಕ್​ ಡ್ರಿಲ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಆಕ್ಸಿಜನ್​ ಘಟಕ, ಆಕ್ಸಿಜನ್ ಜನರೇಟರ್, ಕೊವಿಡ್ ಉಪಕರಣಗಳ ಕಾರ್ಯನಿರ್ವಹಣೆ ಪರಿಶೀಲನೆಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಹಾಗೂ ವ್ಯವಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆಯೇ ಪರಿಶೀಲಿಸಲು ಕೇಂದ್ರ ಆರೋಗ್ಯ ಇಲಾಖೆಯ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಲಹೆಯಂತೆ ಮತ್ತೆ ಸಿದ್ಧತೆಗೆ ಆಸ್ಪತ್ರೆಗಳು ಮುಂದಾಗಿವೆ. ಮುಂದಿನ ಎರಡು ವಾರಗಳಲ್ಲಿ ಕೊವಿಡ್ ಏರಿಕೆಯ ಆತಂಕ ಶುರುವಾಗಿದೆ. ರಾಜ್ಯ ಸೇರಿ ದೇಶದಲ್ಲಿ ಕೊವಿಡ್ ಏರಿಕೆ ಹಿನ್ನಲೆ ವಿವಿಧ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಯುತ್ತಿದೆ. ಈಗಾಲೇ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳ ಕೊವಿಡ್ ಏರಿಕೆ ನಿಯಂತ್ರಣಕ್ಕೆ ಸೂಚನೆ ನೀಡಿದ್ದು ರಾಜ್ಯ ಆರೋಗ್ಯ ಇಲಾಖೆ ಸಿದ್ಧತೆ ಶುರುಮಾಡಿದೆ. ಮತ್ತೆ ರಾಜ್ಯದಲ್ಲಿ ಕೊವಿಡ್ ಏರಿಕೆಯ ಆತಂಕ ಶುರುವಾಗಿದೆ.

ಇದನ್ನೂ ಓದಿ: ಕೊರೊನಾ ನಂತರ ಬೆಂಗಳೂರಲ್ಲಿ ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆಯತ್ತ: 2022ರಲ್ಲಿ 248 ಸಾವು

ದೆಹಲಿಯಲ್ಲಿ 700 ಹೊಸ ಕೇಸ್ ಪತ್ತೆ, ನಾಲ್ವರು ಸಾವು

ಇನ್ನು ಮತ್ತೊಂದೆಡೆ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 5,880 ಹೊಸ ಕೊವಿಡ್ ಕೇಸ್​ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 788 ಕೊವಿಡ್ ಕೇಸ್ ಪತ್ತೆ, ಒಬ್ಬರು ಸಾವು. ದೆಹಲಿಯಲ್ಲಿ 700 ಹೊಸ ಕೇಸ್ ಪತ್ತೆ, ನಾಲ್ವರು ಸಾವು. ದೇಶದಲ್ಲಿ ಕೊವಿಡ್ ಸೋಂಕಿತರ ಪ್ರಮಾಣ ಶೇಕಡಾ 6.91ರಷ್ಟಿದೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 35,199ಕ್ಕೇರಿಕೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:13 pm, Mon, 10 April 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್