AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ: ಸುಧಾಕರ್

ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ವಿಮಾನ ನಿಲ್ದಾಣದಲ್ಲಿ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ: ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್​
TV9 Web
| Edited By: |

Updated on:Dec 22, 2022 | 5:18 PM

Share

ಬೆಂಗಳೂರು: ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಾಹಾಮಾರಿ ಕೊರೋನಾ ವೈರಸ್(Coronavirus) ಉಲ್ಬಣಗೊಂಡಿದೆ. ಇದರ ಬೆನ್ನಲ್ಲೆ ಕರ್ನಾಟಕ ಸರ್ಕಾರವು ಸಹ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು((ಡಿ.22) ಬೆಳಗಾವಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಸಿದರು. ಸಭೆಯಲ್ಲಿ ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ ಸೇರಿದಂತೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಸುವರ್ಣಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Sudhakar)​ ಮಾಹಿತಿ ನೀಡಿದ್ದಾರೆ.

ಮಾಸ್ಕ್ ಕಡಾಯ: ಡಾ. ಕೆ.ಸುಧಾಕರ್ 

ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ದೇಶದಿಂದ ಬರುವ ಶೇ.3ರಷ್ಟು ಜನರಿಗೆ ವಿಮಾನ ನಿಲ್ದಾಣದಲ್ಲಿ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು ರಾಜ್ಯದಲ್ಲಿ ಸದ್ಯ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕೋವಿಡ್ ಟೆಸ್ಟ್​ ಪ್ರಮಾಣ ಹೆಚ್ಚಿಸುತ್ತೇವೆ. ಕೊರೊನಾ ರೂಪಾಂತರಿ ತಳಿ ವೇಗವಾಗಿ ಹರಡುವ ಮಾಹಿತಿಯಿದೆ. ಮತ್ತಷ್ಟು ವರದಿ ಬಂದ ನಂತರ ಅಧ್ಯಯನ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ: ಕೊವಿಡ್ ನಿಯಮ ಜಾರಿಗೆ ಹೋಟೆಲ್ ಮಾಲೀಕರ ಸಂಘ ವಿರೋಧ

ಆದಷ್ಟು ಬೇಗ ಎಲ್ಲರೂ ಬೂಸ್ಟರ್​ ಡೋಸ್ ತೆಗೆದುಕೊಳ್ಳಬೇಕು

ಆದಷ್ಟು ಬೇಗ ಎಲ್ಲರೂ ಬೂಸ್ಟರ್​ ಡೋಸ್ ತೆಗೆದುಕೊಳ್ಳಬೇಕು. ಜಿಲ್ಲಾಸ್ಪತ್ರೆಗಳಲ್ಲಿ ಕೊವಿಡ್​ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಲಸಿಕೆ ಪಡೆಯಲು ಮೀನಮೇಷ ಮಾಡಬಾರದು. ಎಲ್ಲರೂ ಬೂಸ್ಟರ್​ ಡೋಸ್​​​ ಪಡೆಯಬೇಕು. ಶೇಕಡಾ 20ರಷ್ಟು ಜನರು ಮಾತ್ರ ಬೂಸ್ಟರ್​ ಡೋಸ್ ಪಡೆದಿದ್ದಾರೆ. ಎಲ್ಲಾ ಕಡೆ ಕ್ಯಾಂಪ್​ ಮಾಡಿ ಬೂಸ್ಟರ್​ ಡೋಸ್ ನೀಡಲು ನಿರ್ಧಾರ ಮಾಡಲಾಗಿದೆ.

ಬೂಸ್ಟರ್​ ಡೋಸ್ ಲಸಿಕೆ ಪಡೆದರೆ ಯಾವುದೇ ಅಪಾಯ ಆಗುವುದಿಲ್ಲ. ಸೈಡ್​ ಎಫೆಕ್ಟ್​​ಗೂ ಲಸಿಕೆಗೂ ಯಾವುದೇ ಸಂಬಂಧ ಇಲ್ಲ. ಇನ್ನು ಹೊಸ ವರ್ಷ, ಕ್ರಿಸ್​​ಮಸ್​ ಆಚರಣೆಗೆ ಅನುಮತಿ ನೀಡುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆಯೊಳಗೆ ಸ್ಪಷ್ಟವಾದ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಗೈಡ್​ಲೈನ್ಸ್​ ಕುರಿತು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್? ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು

ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಡಾ.ಸುಧಾಕರ್​ 

ಹೊಸ ವರ್ಷ ಹಾಗೂ ಕ್ರಿಸ್ ಮಸ್ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆವೊಳಗೆ ಸ್ಪಷ್ಟವಾದ ಮಾರ್ಗಸೂಚಿ ಮಾಡುತ್ತೇವೆ. ಸದ್ಯ ಅದರ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಒಳಾಂಗಣದಲ್ಲಿ ಮಾಸ್ಕ್ ಧರಿಸಬೇಕು ಎಂದರು. ಭಾರತ್​ ಜೋಡೋ ಯಾತ್ರೆ ತಡೆಯಲು ಕೋವಿಡ್ ನೆಪ ಆರೋಪ ಮಾಡಿದ್ದು, ಕಳೆದ 3 ತಿಂಗಳಿಂದ ಕೋವಿಡ್ ಬಗ್ಗೆ ಯಾವುದೇ ಮಾತನಾಡಿಲ್ಲ. ಚೀನಾ, ಅಮೆರಿಕ ಸೇರಿದಂತೆ ಹಲವು ದೇಶದಲ್ಲಿ ಜಾಸ್ತಿಯಾಗುತ್ತಿದೆ. ಅಲ್ಲೆಲ್ಲ ನಾವು ಕೊರೊನಾ ಪ್ರಕರಣ ಹೆಚ್ಚಿಸಿದ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಸಚಿವ ಡಾ.ಸುಧಾಕರ್​ ಟಾಂಗ್​ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:59 pm, Thu, 22 December 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ