AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪಿ ಕೆಎಚ್​ಬಿ ಎಂಜಿನಿಯರ್ ನಂಜುಂಡಪ್ಪಗೆ ಲೋಕಾಯುಕ್ತದಲ್ಲೇ ಸಿಕ್ತು ಫಲವತ್ತಾದ ಪೋಸ್ಟಿಂಗ್​! ತೀವ್ರ ಆಕ್ಷೇಪ -ಮುಂದೇನು?

ಕಳಪೆ ಕಾಮಗಾರಿ, ಕರ್ತವ್ಯ ಲೋಪದಂತಹ ಆರೋಪ ಎದುರಿಸುತ್ತಿರುವ ಕೆ.ಎಚ್.ಬಿ. ಮುಖ್ಯ ಎಂಜಿನಿಯರ್ ನಂಜುಂಡಪ್ಪ ಅವರನ್ನು ಲೋಕಾಯುಕ್ತ ಮುಖ್ಯ ಎಂಜಿನಿಯರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವರ್ಗಾವಣೆ ಬಗ್ಗೆ ಆಕ್ಷೇಪವ್ಯಕ್ತಪಡಿಸಿ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಲಾಗಿದೆ.

ಭ್ರಷ್ಟಾಚಾರ ಆರೋಪಿ ಕೆಎಚ್​ಬಿ ಎಂಜಿನಿಯರ್ ನಂಜುಂಡಪ್ಪಗೆ ಲೋಕಾಯುಕ್ತದಲ್ಲೇ ಸಿಕ್ತು ಫಲವತ್ತಾದ ಪೋಸ್ಟಿಂಗ್​! ತೀವ್ರ ಆಕ್ಷೇಪ -ಮುಂದೇನು?
ಲೋಕಾಯುಕ್ತ
TV9 Web
| Edited By: |

Updated on:Mar 21, 2024 | 3:01 PM

Share

ಬೆಂಗಳೂರು, ಮಾರ್ಚ್​.21: ಕೆ.ಎಚ್.ಬಿ. ಬಡಾವಣೆಯಲ್ಲಿ ಕಳಪೆ ಕಾಮಗಾರಿ ಮಾಡಿದ್ದರೂ ಕ್ರಮ ವಹಿಸದೆ ಕರ್ತವ್ಯ ಲೋಪ ಮಾಡಿರುವ, ಉದ್ಯಾನವನ ಜಾಗ ಒತ್ತುವರಿ ಆಗಿದ್ದರೂ ತೆರವುಗೊಳಿಸದ, ನಮ್ಮ ಬಡಾವಣೆಯ ಒಂದೇ ಒಂದು ಉದ್ಯಾನವನ್ನೂ ಅಭಿವೃದ್ಧಿ ಮಾಡದೆ ಕರ್ತವ್ಯ ಲೋಪ ಎಸಗಿದ್ದ ಕೆ.ಎಚ್.ಬಿ. ಮುಖ್ಯ ಎಂಜಿನಿಯರ್ ನಂಜುಂಡಪ್ಪ (Nanjundappa) ವಿರುದ್ಧ ನೀಡಲಾಗಿರುವ ದೂರು ವಿಚಾರಣೆ ಹಂತದಲ್ಲಿರುವಾಗಲೇ ನಂಜುಂಡಪ್ಪ ಅವರು ಲೋಕಾಯುಕ್ತ (Lokayukta) ಮುಖ್ಯ ಎಂಜಿನಿಯರ್ ಆಗಿ ವರ್ಗಾವಣೆಯಾಗಿದ್ದಾರೆ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ನಂಜುಂಡಪ್ಪ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ದೂರು ಬಂದ ಹಿನ್ನೆಲೆಯಲ್ಲಿ ನಾಗರತ್ನ ಅವರು ಬಂದು ಸ್ಥಳಪರಿಶೀಲನೆ ಮಾಡಿ, ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿ ಆಗಿದೆ ಎಂಬುದನ್ನು ಉಲ್ಲೇಖಿಸಿ ತನಿಖಾ ವರದಿ ನೀಡಿದ್ದರು. ಈಗ ಅದೇ ನಂಜುಂಡಪ್ಪ ಅವರು ಲೋಕಾಯುಕ್ತ ಮುಖ್ಯ ಎಂಜಿನಿಯರ್ ಆಗಿ ವರ್ಗಾವಣೆಯಾಗಿದ್ದಾರೆ. ಈ ಬಗ್ಗೆ ಆಕ್ಷೇಪವ್ಯಕ್ತಪಡಿಸಿ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಯವರ ಹಾರ್ಟ್ ಆಪರೇಶನ್ ಯಶಸ್ವೀಯಾಗಿ ನಡೆದಿದೆ, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ: ಹೆಚ್ ಡಿ ರೇವಣ್ಣ

ಬೆಂಗಳೂರು ಕೆಂಗೇರಿ, ಬಂಡೇಮಠ ಕೆ.ಎಚ್.ಬಿ. ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸದೆ ಕರ್ತವ್ಯ ಲೋಪ ಎಸಗಿರುವ, ಡಾಂಬರು ರಸ್ತೆ ಅಭಿವೃದ್ಧಿಯಲ್ಲಿ ಕಳಪೆ ಕಾಮಗಾರಿ ಆಗಿದ್ದರೂ ಬಿಲ್ ಪಾವತಿಗೆ ಶಿಫಾರಸು ಮಾಡಿರುವ, ಹಲವು ದೂರು ನೀಡಿದರೂ ಮೂಲ ಸೌಕರ್ಯ ಕಲ್ಪಿಸದೆ, ಖಾಸಗಿ ಗೇಟೆಡ್ ಕಮ್ಯೂನಿಟಿಯವರು ಉದ್ಯಾನಕ್ಕೆ ಮೀಸಲಿಟ್ಟ ಜಾಗವನ್ನು ಒತ್ತುವರಿ ಮಾಡಿದ್ದರೂ ತೆರವು ಮಾಡಿಸುವಲ್ಲಿ ವಿಫಲವಾಗಿ ಕರ್ತವ್ಯಲೋಪ ಎಸಗಿರುವ ಆರೋಪಗಳು ನಂಜುಂಡಪ್ಪ ಅವರ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ವಿಚಾರಣಾ ಹಂತದಲ್ಲಿದೆ.

ಇನ್ನು ಕೆ.ಎಚ್.ಬಿ. ಬಂಡೇಮಠ ಬಡಾವಣೆಯನ್ನು 2022ರ ಆಗಸ್ಟ್ 03ರಿಂದ ಅನ್ವಯವಾಗುವಂತೆ ಬಿಬಿಎಂಪಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಬಡಾವಣೆಯ ಮೂಲಸೌಕರ್ಯ/ದುರಸ್ತಿಯನ್ನು ಬಿಬಿಎಂಪಿಯೇ ನಿರ್ವಹಿಸುತ್ತದೆ ಎಂದು ಲೋಕಾಯುಕ್ತಕ್ಕೆ ಸುಳ್ಳು ಹೇಳಿಕೆ ನೀಡಿ ದಾರಿತಪ್ಪಿಸುವ ಕಾರ್ಯವನ್ನು ನಂಜುಡಪ್ಪ ಮಾಡಿದ್ದರು. ಆದರೆ ವಾಸ್ತವವಾಗಿ ಈ ಬಡಾವಣೆ ಬಿಬಿಎಂಪಿಗೆ ಹಸ್ತಾಂತರ ಆಗಿದ್ದು 6 ತಿಂಗಳ ನಂತರ 2023ರ ಫೆಬ್ರವರಿ 27ರಂದು. ಅಂದರೆ ನಂಜುಂಡಪ್ಪನವರು ಲೋಕಾಯುಕ್ತವನ್ನೇ ದಾರಿತಪ್ಪಿಸುವ ಕೆಲಸ ಮಾಡಿದ್ದರು. ಇಷ್ಟೆಲ್ಲಾ ಅಕ್ರಮ ಎಸಗಿದ್ದರೂ ಅವರ ಮೇಲಿನ ಆರೋಪ ತನಿಖೆ ಹಂತದಲ್ಲಿದ್ದರೂ ನಂಜುಂಡಪ್ಪ ಅವರನ್ನು ಲೋಕಾಯುಕ್ತಕ್ಕೆ ಇಂಜಿನಿಯರ್​ ಆಗಿ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬಡಾವಣೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:53 pm, Thu, 21 March 24

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ