AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ: ಬಿಬಿಎಂಪಿ ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಯಾಗಿದ್ದ ಕೃಷ್ಣೇಗೌಡ ಅವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್​ ಕೋರ್ಟ್ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ: ಬಿಬಿಎಂಪಿ ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ
ಬಿಬಿಎಂಪಿ
ವಿವೇಕ ಬಿರಾದಾರ
|

Updated on:Jun 17, 2023 | 7:45 PM

Share

ಬೆಂಗಳೂರು: ಬಿಬಿಎಂಪಿ (BBMP) ಸಹಾಯಕ ಕಂದಾಯ ಅಧಿಕಾರಿಯಾಗಿದ್ದ (ARO) ಕೃಷ್ಣೇಗೌಡ ಅವರಿಗೆ 3 ವರ್ಷ ಕಠಿಣ ಜೈಲು (Jail) ಶಿಕ್ಷೆ ವಿಧಿಸಿ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್​ ಕೋರ್ಟ್ ಆದೇಶ ಹೊರಡಿಸಿದೆ. 2016ರ ಮೇ 11ರಂದು ಕೊತ್ತನೂರು, ಹುಳಿಮಾವು ಬಳಿ ಆಸ್ತಿ ಜಂಟಿ ಖಾತೆ ಮಾಡಿಕೊಡಲು 20,000 ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದರು. ಇದೀಗ ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ 3 ವರ್ಷ ಕಠಿಣ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಲಾಗಿದೆ.

ಪ್ರದೀಪ್‌ ಎಂಬುವರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಎಸಿಬಿ ಪೊಲೀಸರು, ಲಂಚ ಸ್ವೀಕರಿಸುತ್ತಿದ್ದ ಕೃಷ್ಣೇಗೌಡರನ್ನು ಬಂಧಿಸಿದ್ದರು. ಕೊತ್ತನೂರು, ಹುಳಿಮಾವು ಬಳಿ ಆಸ್ತಿ ಜಂಟಿ ಖಾತೆ ಮಾಡಿಕೊಡಲು ಕೃಷ್ಣೇಗೌಡ ಅವರು 20 ಸಾವಿರ ರೂ. ಲಂಚ ಕೇಳಿದ್ದರು. ಈ ಸಂಬಂಧ ಪ್ರದೀಪ್‌ ಎಸಿಬಿಗೆ ದೂರು ನೀಡಿದ್ದರು.

ಕಾಮಗಾರಿ ನಡೆಸದೇ 118 ಕೋಟಿ ರೂ. ನಕಲಿ ಬಿಲ್ ಸೃಷ್ಟಿ

2019-20ರಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೇ 118 ಕೋಟಿ ರೂಪಾಯಿ ನಕಲಿ ಬಿಲ್ ಸೃಷ್ಟಿಸಿದ ಆರೋಪದ ಮೇಲೆ 11 ಬಿಬಿಎಂಪಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಕಳಪೆ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್ ದೂರು ನೀಡಿದ್ದರು.

ಇದನ್ನೂ ಓದಿ: ಸ್ಟೇ ಹಿನ್ನಲೆ ತೆರವು ಕಾರ್ಯಚರಣೆಗೆ ತಾತ್ಕಲಿಕ ಸ್ಥಗಿತಗೊಳಿಸಿದ ಬಿಬಿಎಂಪಿ: ಸೋಮವಾರಕ್ಕೆ ಮುಂದೂಡಿಕೆ

ಈ ಹಿನ್ನಲೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ 9 ಬಿಬಿಎಂಪಿ ಇಂಜಿನಿಯರ್​, ಓರ್ವ ಅಧೀಕ್ಷಕ, ಓರ್ವ ಉಪ ನಿರ್ದೇಶಕ ಸೇರಿದಂತೆ ಒಟ್ಟು 11 ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೇ ಹಗರಣದ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದೆ.

ಅಮಾನತ್ತುಗೊಂಡ ಅಧಿಕಾರಿಗಳು

  1. ದೊಡ್ಡಯ್ಯ- ಮುಖ್ಯ ಇಂಜಿನಿಯರ್ ಟಿವಿಸಿಸಿ ವಿಭಾಗ
  2. ಸತೀಶ್- ಸಹಾಯಕ ಕಾರ್ಯಪಾಲಕ ಇಂಜಿನಿಯರ್​, ಟಿವಿಸಿಸಿ ವಿಭಾಗ
  3. ವಿಜಯ್ ಕುಮಾರ್- ಮುಖ್ಯ ಇಂಜಿನಿಯರ್ ಆರ್​ಆರ್​ ನಗರ ವಲಯ
  4. ಶಿಲ್ಪಾ- ಸಹಾಯಕ ಇಂಜಿನಿಯರ್ ಆರ್​ಆರ್​ ವಲಯ
  5. ಮೋಹನ್- ಮುಖ್ಯ ಇಂಜಿನಿಯರ್ ಯೋಜನಾ ವಿಭಾಗ ಆರ್​ಆರ್ ವಲಯ
  6. ಭಾರತಿ- ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಯೋಜನಾ ವಿಭಾಗ ಆರ್​ಆರ್ ವಲಯ
  7. ಬಸವರಾಜ್- ಕಾರ್ಯಪಾಲಕ ಇಂಜಿನಿಯರ್ ಆರ್​ಆರ್​ ನಗರ ವಲಯ
  8. ಸಿದ್ದಯ್ಯ-ಸಹಾಯಕ ಇಂಜಿನಿಯರ್ ವಾರ್ಡ್​ ನಂ-129 ಮತ್ತು 160
  9. ಉಮೇಶ್​ -ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲಗ್ಗೆರೆ
  10. ಅನಿತಾ- ಸೂಪರಿಡೆಂಟ್, ಕ್ಯಾರಿಯರ್ ಆರ್​ಆರ್​ ನಗರ ವಲಯ
  11. ಗೂಳಿಗೌಡ-ಡೆಪ್ಯುಟಿ ಮ್ಯಾನೇರ್ ಆರ್​ಆರ್​ ನಗರ ವಲಯ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 7:45 pm, Sat, 17 June 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?