AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ; ಜಾತ್ರೆ ನಡೆಯುವ ಸ್ಥಳದಲ್ಲಿಯೇ ಕೊರೊನಾ ಟೆಸ್ಟಿಂಗ್, ವ್ಯಾಕ್ಸಿನೇಷನ್​ಗೆ ಸಿದ್ಧತೆ

ಒಮಿಕ್ರಾನ್ ರೂಪಾಂತರಿ ತಳಿ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ದೇಶದಲ್ಲಿ ಇದುವರೆಗೂ ಈ ಹೊಸ ತಳಿಯ ಕೇಸ್ ಪತ್ತೆಯಾಗದೇ ಇದ್ರೂ, ಈ ರೂಪಾಂತರಿಯ ಕ್ರೌರ್ಯಕ್ಕೆ ಜಗತ್ತೆ ಬೆಚ್ಚಿ ಬಿದ್ದಿದೆ. ಹೀಗಾಗಿ ದೇವಾಸ್ಥಾನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ; ಜಾತ್ರೆ ನಡೆಯುವ ಸ್ಥಳದಲ್ಲಿಯೇ ಕೊರೊನಾ ಟೆಸ್ಟಿಂಗ್, ವ್ಯಾಕ್ಸಿನೇಷನ್​ಗೆ ಸಿದ್ಧತೆ
ಕಡಲೆಕಾಯಿ ಪರಿಷೆ (ಸಾಂದರ್ಭಿಕ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Nov 28, 2021 | 1:23 PM

Share

ಬೆಂಗಳೂರು: ನಗರದ ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ ಆರಂಭವಾಗಿದೆ. ಪರಿಷೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸುವ ಹಿನ್ನೆಲೆಯಲ್ಲಿ ಜಾತ್ರೆ ನಡೆಯುವ ಸ್ಥಳದಲ್ಲಿಯೇ ಕೊರೊನಾ ಟೆಸ್ಟಿಂಗ್ ಹಾಗೂ ವ್ಯಾಕ್ಸಿನೇಷನ್‌ ನೀಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ನವೆಂಬರ್ 29ರಿಂದ ಡಿಸೆಂಬರ್ 1ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತದಿಗಳು ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದೇವಸ್ಥಾನದಲ್ಲಿ ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಒಮಿಕ್ರಾನ್ ರೂಪಾಂತರಿ ತಳಿ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ದೇಶದಲ್ಲಿ ಇದುವರೆಗೂ ಈ ಹೊಸ ತಳಿಯ ಕೇಸ್ ಪತ್ತೆಯಾಗದೇ ಇದ್ರೂ, ಈ ರೂಪಾಂತರಿಯ ಕ್ರೌರ್ಯಕ್ಕೆ ಜಗತ್ತೆ ಬೆಚ್ಚಿ ಬಿದ್ದಿದೆ. ಹೀಗಾಗಿ ದೇವಾಸ್ಥಾನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಜಾತ್ರೆ ನಡೆಯುವ ಸ್ಥಳದಲ್ಲಿಯೇ ಟೆಸ್ಟಿಂಗ್ ಸೆಂಟರ್ ಹಾಗೂ ವ್ಯಾಕ್ಸಿನೇಷನ್‌ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಸದ್ಯ ಕಡಿಲೆಕಾಯಿ ಪರಿಷೆ ಸಿದ್ದತೆ ಬಗ್ಗೆ ವಿಶೇಷ ಆಯುಕ್ತೆ ತುಳುಸಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಕಡೆ ವ್ಯಾಕ್ಸಿನ್ ಸೆಂಟರ್​ಗಳಿವೆ, ಎಷ್ಟು ಶೌಚಾಲಯಗಳಿವೆ, ಎಷ್ಟು ಜನ ವ್ಯಾಪಾರಸ್ಥರಿದ್ದಾರೆ, ಮುಜುರಾಯಿ ಇಲಾಖೆಯಿಂದ ಏನೆಲ್ಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಡಲೇಕಾಯಿಯ ತಾಯಿಬೇರು ಯಾವ ದೇಶದಲ್ಲಿದೆ ಗೊತ್ತಾ? ಪರಿಷೆಯ ನೆಪದಲ್ಲಿ ಮೂಲ ಕೆದಕಿದಾಗ..

Published On - 12:22 pm, Sun, 28 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ