AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ
ನಕಲಿ ನೋಟು
TV9 Web
| Updated By: sandhya thejappa|

Updated on: Dec 26, 2021 | 8:46 AM

Share

ಬೆಂಗಳೂರು: ನಗರದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಕಿಡಿಗೇಡಿಗಳು ಜೆರಾಕ್ಸ್ ನೋಟ್ ನೀಡಿ ಜನರಿಗೆ ಯಾಮಾರಿಸುತ್ತಿದ್ದಾರೆ. ಕಾಟನ್​ಪೇಟೆಯಲ್ಲಿ ಜೆರಾಕ್ಸ್ ಮಾಡಿದ ನೋಟು ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಹೊರಗಿನಿಂದ ಬೆಂಗಳೂರಿಗೆ ಬಂದ ಕಿಡಿಗೇಡಿಗಳು ನೋಟನ್ನು ಜೆರಾಕ್ಸ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ. ಹೊರಗಿನಿಂದ ಬಂದು ಲಾಡ್ಜ್​ನಲ್ಲಿ ಉಳಿದುಕೊಂಡವರು ಈ ಕೃತ್ಯ ಎಸಗಿರಬುದು ಎಂಬ ಅನುಮಾನವಿದೆ. ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ ಮಾಡಿದ್ದಾರೆ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಿಜಬಣ್ಣ ಬಯಲಾಗಬೇಕಿದೆ.

ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರ ಸೆರೆ ಈ ಹಿಂದೆಯೂ ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದರು. ನಿಷೇಧಿತ ನೋಟು ಬದಲಾವಣೆ ಮಾಡುತ್ತೇವೆಂದು ಹೇಳಿ ಆರೋಪಿಗಳು ಮೋಸ ಮಾಡುತ್ತಿದ್ದರು. ನಿಷೇಧಿತ 1,000 ರೂ. ಮುಖಬೆಲೆಯ ನೋಟುಗಳ ಜೆರಾಕ್ಸ್ ಮಾಡಿ ವಂಚಿಸುತ್ತಿದ್ದರು. 5 ಕೋಟಿ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

Confession : ಅಭಿಜ್ಞಾನ ; ಪ್ರಗತಿ ಮತ್ತು ಪರಿಪೂರ್ಣತೆಗಳಿಗೆ ಅನಂತತೆಯಲ್ಲಿ ಯಾವ ಅರ್ಥವೂ ಇಲ್ಲ ದಿಕ್ಕೂ ಇಲ್ಲ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ