AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ
ನಕಲಿ ನೋಟು
TV9 Web
| Edited By: sandhya thejappa|

Updated on: Dec 26, 2021 | 8:46 AM

Share

ಬೆಂಗಳೂರು: ನಗರದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಕಿಡಿಗೇಡಿಗಳು ಜೆರಾಕ್ಸ್ ನೋಟ್ ನೀಡಿ ಜನರಿಗೆ ಯಾಮಾರಿಸುತ್ತಿದ್ದಾರೆ. ಕಾಟನ್​ಪೇಟೆಯಲ್ಲಿ ಜೆರಾಕ್ಸ್ ಮಾಡಿದ ನೋಟು ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಹೊರಗಿನಿಂದ ಬೆಂಗಳೂರಿಗೆ ಬಂದ ಕಿಡಿಗೇಡಿಗಳು ನೋಟನ್ನು ಜೆರಾಕ್ಸ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ. ಹೊರಗಿನಿಂದ ಬಂದು ಲಾಡ್ಜ್​ನಲ್ಲಿ ಉಳಿದುಕೊಂಡವರು ಈ ಕೃತ್ಯ ಎಸಗಿರಬುದು ಎಂಬ ಅನುಮಾನವಿದೆ. ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ ಮಾಡಿದ್ದಾರೆ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಿಜಬಣ್ಣ ಬಯಲಾಗಬೇಕಿದೆ.

ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರ ಸೆರೆ ಈ ಹಿಂದೆಯೂ ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದರು. ನಿಷೇಧಿತ ನೋಟು ಬದಲಾವಣೆ ಮಾಡುತ್ತೇವೆಂದು ಹೇಳಿ ಆರೋಪಿಗಳು ಮೋಸ ಮಾಡುತ್ತಿದ್ದರು. ನಿಷೇಧಿತ 1,000 ರೂ. ಮುಖಬೆಲೆಯ ನೋಟುಗಳ ಜೆರಾಕ್ಸ್ ಮಾಡಿ ವಂಚಿಸುತ್ತಿದ್ದರು. 5 ಕೋಟಿ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

Confession : ಅಭಿಜ್ಞಾನ ; ಪ್ರಗತಿ ಮತ್ತು ಪರಿಪೂರ್ಣತೆಗಳಿಗೆ ಅನಂತತೆಯಲ್ಲಿ ಯಾವ ಅರ್ಥವೂ ಇಲ್ಲ ದಿಕ್ಕೂ ಇಲ್ಲ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ