AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ! ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ
ನಕಲಿ ನೋಟು
TV9 Web
| Edited By: sandhya thejappa|

Updated on: Dec 26, 2021 | 8:46 AM

Share

ಬೆಂಗಳೂರು: ನಗರದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಕಿಡಿಗೇಡಿಗಳು ಜೆರಾಕ್ಸ್ ನೋಟ್ ನೀಡಿ ಜನರಿಗೆ ಯಾಮಾರಿಸುತ್ತಿದ್ದಾರೆ. ಕಾಟನ್​ಪೇಟೆಯಲ್ಲಿ ಜೆರಾಕ್ಸ್ ಮಾಡಿದ ನೋಟು ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಹೊರಗಿನಿಂದ ಬೆಂಗಳೂರಿಗೆ ಬಂದ ಕಿಡಿಗೇಡಿಗಳು ನೋಟನ್ನು ಜೆರಾಕ್ಸ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ಯಾಮಾರಿದ್ದಾರೆ. ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದಾರೆ. ಹೊರಗಿನಿಂದ ಬಂದು ಲಾಡ್ಜ್​ನಲ್ಲಿ ಉಳಿದುಕೊಂಡವರು ಈ ಕೃತ್ಯ ಎಸಗಿರಬುದು ಎಂಬ ಅನುಮಾನವಿದೆ. ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ ಮಾಡಿದ್ದಾರೆ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಿಜಬಣ್ಣ ಬಯಲಾಗಬೇಕಿದೆ.

ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರ ಸೆರೆ ಈ ಹಿಂದೆಯೂ ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದರು. ನಿಷೇಧಿತ ನೋಟು ಬದಲಾವಣೆ ಮಾಡುತ್ತೇವೆಂದು ಹೇಳಿ ಆರೋಪಿಗಳು ಮೋಸ ಮಾಡುತ್ತಿದ್ದರು. ನಿಷೇಧಿತ 1,000 ರೂ. ಮುಖಬೆಲೆಯ ನೋಟುಗಳ ಜೆರಾಕ್ಸ್ ಮಾಡಿ ವಂಚಿಸುತ್ತಿದ್ದರು. 5 ಕೋಟಿ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

Confession : ಅಭಿಜ್ಞಾನ ; ಪ್ರಗತಿ ಮತ್ತು ಪರಿಪೂರ್ಣತೆಗಳಿಗೆ ಅನಂತತೆಯಲ್ಲಿ ಯಾವ ಅರ್ಥವೂ ಇಲ್ಲ ದಿಕ್ಕೂ ಇಲ್ಲ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ