ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ. BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ […]

ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ
ಸಾಧು ಶ್ರೀನಾಥ್​

Updated on: Jun 28, 2020 | 8:46 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ.

BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ ಎಸಿಪಿ, ಡಿಸಿಪಿ ಹಾಗೂ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ದಂಪತಿಗೆ ಮನೆಯ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವಿರುವ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೂ ಸೋಂಕು ಹರಡುವ ಆತಂಕ ಶುರುವಾಗಿದೆ.

Published On - 4:58 pm, Sun, 28 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us