AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Blast: ತಡರಾತ್ರಿ ಬೆಂಗಳೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಾಯ

ಹಂಪಿನಗರದ ಎರಡು ಅಂತಸ್ತಿನ ಮನೆಯೊಂದರ ಮೊದಲ ಮಹಡಿಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮಗೆ ಗಾಯಗಳಾಗಿದ್ದು ಗಾಯಾಳು ವೃದ್ಧ ದಂಪತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Bengaluru Blast: ತಡರಾತ್ರಿ ಬೆಂಗಳೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಾಯ
ತಡರಾತ್ರಿ ಬೆಂಗಳೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ
TV9 Web
| Edited By: |

Updated on:Aug 16, 2021 | 7:36 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಭಾರಿ ನಿಗೂಢ ಸ್ಫೋಟವಾಗಿದ್ದು ದಂಪತಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಡರಾತ್ರಿ 12.45ರ ಸುಮಾರಿಗೆ 2 ಮಹಡಿ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ಸ್ಫೋಟ ಸಂಭವಿಸಿದೆ.

ಹಂಪಿನಗರದ ಎರಡು ಅಂತಸ್ತಿನ ಮನೆಯೊಂದರ ಮೊದಲ ಮಹಡಿಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮಗೆ ಗಾಯಗಳಾಗಿದ್ದು ಗಾಯಾಳು ವೃದ್ಧ ದಂಪತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಹಾಗೂ ಅಕ್ಕಪಕ್ಕದ ಮನೆ ಗಾಜುಗಳು ಪುಡಿ, ಪುಡಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ.

ನಿಗೂಢ ಸ್ಫೋಟದಿಂದ 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿದೆ. ಸುಮಾರು 1 ಕಿ.ಮೀ.ವರೆಗೂ ಸ್ಫೋಟದ ಸದ್ದು ಕೇಳಿಸಿದೆ. ಸದ್ಯ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮನೆಯ ಡೋರ್, ಗ್ರಿಲ್ ಛಿದ್ರ ಛಿದ್ರವಾಗಿದೆ. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ತಕ್ಷಣ ಏರಿಯಾದಲ್ಲಿ ಕರೆಂಟ್ ಕಟ್ ಆಗಿ ಕತ್ತಲೇ ಆವರಿಸಿದೆ.ಘಟನೆ ಸಂಭವಿಸಿದ ಮೊದ ಮೊದಲು ಸಿಲಿಂಡರ್ ಸ್ಫೋಟ ಎಂದು ಹೇಳಲಾಗಿತ್ತು. ಆದರೆ ಮನೆಯಲ್ಲಿದ್ದ 2 ಸಿಲಿಂಡರ್ಗಳು ಸೇಫ್ ಆಗಿವೆ. ಇತ್ತೀಚೆಗೆ ಸೂರ್ಯನಾರಾಯಣ ಶೆಟ್ಟಿ ದಂಪತಿ ಪುತ್ರ ದಿನೇಶ್ ಒಂದು ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದ. ಅದರ ಬ್ಯಾಟರಿ ಏನಾದ್ರು ಬ್ಲಾಸ್ಟ್ ಆಗಿದ್ಯಾ ಎಂಬ ಶಂಕೆ ಉಂಟಾಗಿ ಪರಿಶೀಲನೆ ನಡೆಸಿದ್ರು. ಆದರೆ ಬ್ಯಾಟರಿ ಕೂಡ ಸೇಫ್ ಆಗಿದೆ. ಮನೆಯಲ್ಲಿ ಯಾವ ವಸ್ತುವಿನಿಂದ ಸ್ಫೋಟವಾಗಿದೆ ಎಂಬುವುದೇ ತಿಳಿಯುತ್ತಿಲ್ಲ.

bengaluru blast

ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ

ಇದನ್ನೂ ಓದಿ:ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ 

Published On - 6:48 am, Mon, 16 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!