Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ
ಹೈಕೋರ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Dec 01, 2021 | 2:50 PM

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಮೌಲ್ಯಮಾಪನಕ್ಕೆ ಆದೇಶ ಹೊರಡಿಸಲಾಗಿದೆ. ಯೋಜನೆಯ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ಸಿಕ್ಕಿದ್ದು 40 ವರ್ಷಗಳಿಂದ ಬಾಕಿಯಿರುವ ರೈಲು ಯೋಜನೆ ಪ್ರಶ್ನಿಸಿ ಕೆಲ ಪರಿಸರ ಸಂರಕ್ಷಣಾ ಸಂಘಗಳು ಪಿಐಎಲ್ ಸಲ್ಲಿಸಿದ್ದವು. ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೇ ಸಲ್ಲಿಸಲಾಗಿತ್ತು. ಅಂದಿನಿಂದಲೂ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣಹೋಮವಾಗುತ್ತದೆ.

ರೈಲು ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದೆ. ಒಂದು ವೇಳೆ ಯೋಜನೆಗೆ ಅನುಮೋದನೆ ದೊರೆತರೆ ಅಳಿವಿನಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರಲಿದೆ. ಅಲ್ಲದೇ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಇದು ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂಬುದು ಪರಿಸರವಾದಿಗಳು ಮತ್ತು ವನ್ಯಜೀವಿ ಪ್ರಿಯರ ವಾದವಾಗಿದೆ. ಹೀಗಾಗಿ ಈ ಯೋಜನೆ ಬಗ್ಗೆ ವಿರೋಧವಿತ್ತು. ಸದ್ಯ ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಅಪ್ಪು​ ಇಲ್ಲದೆ ಮಂಕಾಗಿದೆ ಈ ದಿನ

Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?