AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತನ್ನ ಮಕ್ಕಳಿಗೆ ಕಿರುಕುಳ ನೀಡಿದ ಮಹಿಳೆ ಮತ್ತು ಲಿವ್-ಇನ್ ಸಂಗಾತಿಗೆ 5 ವರ್ಷ ಜೈಲು ಶಿಕ್ಷೆ

ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಮಹಿಳೆ ಮತ್ತು ಈಕೆಯ ಲೀವ್ ಇನ್ ಸಂಗಾತಿಗೆ ಬೆಂಗಳೂರಿನ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದ ಹಿಂದೆ ಸ್ಥಳೀಯರು ಮಹಾನ್ ಕಾರ್ಯವೂ ಇದೆ. ಮಕ್ಕಳು ಕಿರುಕುಳ ಅನುಭವಿಸುತ್ತಿರುವುದನ್ನು ನೋಡಿದ ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ಸ್ವತಃ ಪೊಲೀಸರಿಗೆ ದೂರು ನೀಡಿ ಸಾಕ್ಷ್ಯ ನುಡಿದಿದ್ದರು.

ಬೆಂಗಳೂರು: ತನ್ನ ಮಕ್ಕಳಿಗೆ ಕಿರುಕುಳ ನೀಡಿದ ಮಹಿಳೆ ಮತ್ತು ಲಿವ್-ಇನ್ ಸಂಗಾತಿಗೆ 5 ವರ್ಷ ಜೈಲು ಶಿಕ್ಷೆ
ತನ್ನ ಮಕ್ಕಳಿಗೆ ಕಿರುಕುಳ ನೀಡಿದ ಮಹಿಳೆ ಮತ್ತು ಲಿವ್-ಇನ್ ಸಂಗಾತಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರಿನ ಸ್ಥಳೀಯ ನ್ಯಾಯಾಲಯ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Sep 07, 2023 | 7:37 AM

Share

ಬೆಂಗಳೂರು, ಸೆ.7: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಮಹಿಳೆ ಮತ್ತು ಈಕೆಯ ಲೀವ್ ಇನ್ ಸಂಗಾತಿಗೆ ಬೆಂಗಳೂರಿನ (Bengaluru) ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದ ಹಿಂದೆ ಸ್ಥಳೀಯರು ಮಹಾನ್ ಕಾರ್ಯವೂ ಇದೆ. ಮಕ್ಕಳು ಕಿರುಕುಳ ಅನುಭವಿಸುತ್ತಿರುವುದನ್ನು ನೋಡಿದ ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ಸ್ವತಃ ಪೊಲೀಸರಿಗೆ ದೂರು ನೀಡಿ ಸಾಕ್ಷ್ಯ ನುಡಿದಿದ್ದರು.

ಏಪ್ರಿಲ್ 2021 ರಲ್ಲಿ ವರದಿಯಾದ ಪ್ರಕರಣದ ವಿಚಾರಣೆಯ ನಂತರ, ವಿಶೇಷ ನ್ಯಾಯಾಧೀಶ ಕೆ.ಎನ್.ರೂಪಾ ಅವರು ಅಪರಾಧಿಗಳಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸೆಪ್ಟೆಂಬರ್ 2 ರಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಈ ವೇಳೆ ಆರೋಪಿಗಳು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಇದನ್ನೂ ಓದಿ: ತುಮಕೂರು: ಮಗಳನ್ನು ಹತ್ಯೆಗೈದಿದ್ದ ತಂದೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

2021 ಏಪ್ರಿಲ್ 1 ರಂದು ಆರ್​ಆರ್​ ನಗರದ ಸ್ಥಳೀಯ ನಿವಾಸಿಗಳು ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ, ತಮ್ಮ ನೆರೆಹೊರೆಯ ಇಬ್ಬರು ಹೆಣ್ಣು ಮಕ್ಕಳಿಗೆ ಅವರ ತಾಯಿಯ ಸ್ನೇಹಿತ ಕಿರುಕುಳ ನೀಡಿ ಗಾಯಗೊಳಿಸಿದ್ದಾಗಿ ದೂರು ನೀಡಿದ್ದರು.

ಪಕ್ಕದ ಅಂಗಡಿಯಿಂದ ಸಿಗರೇಟುಗಳನ್ನು ಖರೀದಿಸಲು ಹೆಣ್ಣು ಮಕ್ಕಳನ್ನು ಕಳುಹಿಸುತ್ತಿದ್ದರು. ಈ ವೇಳೆ ಅಂಗಡಿ ಮಾಲೀಕರು ಬಾಲಕಿಯರ ಕಾಲುಗಳ ಮೇಲೆ ಸುಟ್ಟ ಗಾಯಗಳನ್ನು ಗಮನಿಸಿ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯರು ಮಾಹಿತಿ ಆಧರಿಸಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ -2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮಹಿಳೆ ಮತ್ತು ಆಕೆಯ ಲೀವ್ ಇನ್ ಸಂಗಾತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ನ್ಯಾಯಾಲಯದ ಮುಂದೆ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು