AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ವಾರಂಟ್ ಜಾರಿಮಾಡಲು ಕೋರ್ಟ್ ಆದೇಶ; ಡಿಕೆ ಶಿವಕುಮಾರ್​ಗೆ ಸಮನ್ಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಕೀಲರು ಹಾಜರಾಗಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಸಮನ್ಸ್ ಜಾರಿ ಮಾಡಲಾಗಿದೆ.

ವಿಚಾರಣೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ವಾರಂಟ್ ಜಾರಿಮಾಡಲು ಕೋರ್ಟ್ ಆದೇಶ; ಡಿಕೆ ಶಿವಕುಮಾರ್​ಗೆ ಸಮನ್ಸ್
ಡಿಕೆ ಶಿವಕುಮಾರ್​
TV9 Web
| Updated By: ganapathi bhat|

Updated on:Apr 13, 2022 | 8:21 PM

Share

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪ ಹಿನ್ನೆಲೆ ವಿಚಾರಣೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ವಾರಂಟ್ ಜಾರಿಗೆ ಕೋರ್ಟ್ ಆದೇಶ ನೀಡಿದೆ. ಜಾಮೀನು ರಹಿತ ವಾರಂಟ್ ಜಾರಿಗೆ ಕೋರ್ಟ್ ಆದೇಶ ನೀಡಿದೆ. ಈಶ್ವರ್ ಖಂಡ್ರೆ ಹಾಗೂ ಎನ್.ಎಸ್.ಮಂಜುನಾಥ್, ಬಸನಗೌಡ ಬಾದರ್ಲಿಗೆ ವಾರಂಟ್ ಜಾರಿಗೆ ಆದೇಶ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಕೀಲರು ಹಾಜರಾಗಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಸಮನ್ಸ್ ಜಾರಿ ಮಾಡಲಾಗಿದೆ. ಏಪ್ರಿಲ್​ 27ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಕೊಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಉಪ್ಪಾರಪೇಟೆ ಠಾಣೆ ಪೊಲೀಸರು ಈ ಮೊದಲು ದೂರು ನೀಡಿದ್ದರು.

ಸಂತೋಷ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲಿ; ಈಶ್ವರಪ್ಪರನ್ನು ಬಂಧಿಸಲಿ: ಡಿಕೆ ಶಿವಕುಮಾರ್

ಇತ್ತ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಂತೋಷ್ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ ಭೇಟಿಯಾಗಿ ಸಂತೋಷ್ ಪತ್ನಿ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ. ಭೇಟಿ ಬಳಿಕ ಕೈ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ಸಾವಿಗೆ ಕಾರಣವೇನು?, ಯಾರು ಕಾರಣವೆಂದೂ ಹೇಳಿದ್ದಾರೆ. ಸಂತೋಷ್‌ ತಾಯಿ, ಪತ್ನಿ ಈ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೂ ದೂರು ನೀಡಿದ್ದರೂ ಸಂತೋಷ್‌ಗೆ ನ್ಯಾಯ ಸಿಕ್ಕಿಲ್ಲ. ನಿಮಗೆ ನ್ಯಾಯ ಕೊಡಿಸುವುದಾಗಿ ನಾವು ಭರವಸೆ ನೀಡಿದ್ದೇವೆ. ಕೂಡಲೇ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಂಧಿಸಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭ್ರಷ್ಟಾಚಾರ ಕಾಯ್ದೆಯಡಿ ಕೇಸ್ ದಾಖಲಿಸಿ ಬಂಧಿಸಲು ಆಗ್ರಹ ವ್ಯಕ್ತಪಡಿಸಿದ್ದಾರೆ.

ಸಂತೋಷ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲಿ. ಸಂತೋಷ್ ಪತ್ನಿ ಜಯಶ್ರೀಗೆ ಸರ್ಕಾರಿ ನೌಕರಿ ಕೊಡಲಿ. ತಾತ್ಕಾಲಿಕವಾಗಿ ನಾವು ಜಯಶ್ರೀಗೆ ನೌಕರಿ ನೀಡುತ್ತೇವೆ. ಕೆಪಿಸಿಸಿಯಿಂದ ಸಂತೋಷ್‌ ಕುಟುಂಬಕ್ಕೆ 11 ಲಕ್ಷ ರೂ. ನೀಡ್ತೇವೆ. ಕೂಡಲೇ ಸಂತೋಷ್‌ ಮಾಡಿಸಿದ್ದ ಕಾಮಗಾರಿ ಬಿಲ್‌ ಪಾವತಿಸಲಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ ಮಾಡಿದ್ದಾರೆ.

ಕಿರುಕುಳದಿಂದಲೇ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ತುಂಬಾ ಧೈರ್ಯವಂತ, ಬಿಜೆಪಿಗೆ ಆಸ್ತಿಯಾಗಿದ್ದ. ಕಿರುಕುಳದಿಂದ ಬೇಸತ್ತು ಸಿಎಂ ಭೇಟಿಗೆ ಉಡುಪಿಗೂ ಹೋಗಿದ್ದ. ಕಿರುಕುಳದಿಂದಲೇ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿಕೆ ಸಾಕ್ಷಿ. ನಾವ್ಯಾರೂ ರಾಜಕೀಯ ಮಾಡುತ್ತಿಲ್ಲ, ಇದು ವಾಸ್ತವ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್​ಐಆರ್ ದಾಖಲು

ಇದನ್ನೂ ಓದಿ: ಈಶ್ವರಪ್ಪ ಜೊತೆ ಮುಖಾಮುಖಿ ಮಾತಾಡ್ತೀನಿ ಎಂದ ಸಿಎಂ, ಮುಖ್ಯಮಂತ್ರಿ ಕೇಳಿದರೆ ರಾಜೀನಾಮೆ ಕೊಡಬೇಕಾಗುತ್ತೆ ಎಂದ ಈಶ್ವರಪ್ಪ

Published On - 8:20 pm, Wed, 13 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ