AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು
ಕೊವಿಡ್-19
TV9 Web
| Updated By: Skanda|

Updated on: Aug 07, 2021 | 7:53 AM

Share

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ (Covid 19 Cases) ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಮೂರನೇ ಅಲೆಯ ಭೀತಿ ತಲೆದೋರಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕೆಲ ತಜ್ಞರು ಲಾಕ್​ಡೌನ್ (Lockdown)​ ಸಡಿಲಿಸಿದ ಕಾರಣ ಜನರ ಓಡಾಟ ಹೆಚ್ಚಾಗಿ ಎರಡನೇ ಅಲೆಯೇ ಉಲ್ಬಣಿಸಿದೆ. ಇದು ಮೂರನೇ ಅಲೆ ಅಲ್ಲ ಎಂದು ಹೇಳಿದ್ದಾರೆ. ಇತ್ತ ಸೋಂಕು ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ಘೋಷಿಸಿದ್ದು, ರಾಜ್ಯಾದ್ಯಂತ ನೈಟ್​ ಕರ್ಫ್ಯೂ (Night Curfew) ಜಾರಿ ಮಾಡಿದೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ (Delta Plus) ಕೊರೊನಾ ದೃಢವಾಗಿದ್ದು, ಸೋಂಕಿತರ ಪೈಕಿ ಓರ್ವ ವ್ಯಕ್ತಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ. ಜುಲೈ 14ರಂದು ವ್ಯಕ್ತಿಗೆ ಡೆಲ್ಟಾ ಪ್ಲಸ್ ಪಾಸಿಟಿವ್ ಇರುವ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಅವರು ಎಷ್ಟೇ ಹುಡುಕಾಡಿದರೂ ಪತ್ತೆಯಾಗದಿರುವುದು ಪೊಲೀಸರಿಗೆ ತಲೆನೋವಾಗಿದೆ. ಇದೀಗ ನಾಪತ್ತೆಯಾಗಿರುವ ಸೋಂಕಿತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೋಂಕಿತನ ಮಾಹಿತಿ ಕಲೆ ಹಾಕಿರುವ ಪೊಲೀಸರು, ಆತ ಎಲ್ಲಿಗೆ ತೆರಳಿರುವ ಸಾಧ್ಯತೆ ಇದೆ ಎಂದು ತಲೆ ಕೆಡಿಸಿಕೊಂಡಿದ್ದಾರೆ.

ವೀಕೆಂಡ್​ ಕರ್ಫ್ಯೂ ಜಾರಿಗೆ ವಿರೋಧ ಮೈಸೂರು: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೀಕೆಂಡ್ ಕರ್ಫ್ಯೂ ಆದೇಶದ ವಿರುದ್ಧ ವರ್ತಕರು, ಹೋಟೆಲ್ ಮಾಲೀಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳು ಧ್ವನಿಯೆತ್ತಿದ್ದು, ಗಡಿಗಳನ್ನು ಬಂದ್ ಮಾಡಿ‌, ನಗರವನ್ನು ಬಂದ್ ಮಾಡಬೇಡಿ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿರುವ ಅವರು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಬಂದ್​ ಮಾಡುವುದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವೀಕೆಂಡ್​ ಕರ್ಫ್ಯೂ: ಯಾವ ಯಾವ ಜಿಲ್ಲೆಗಳಲ್ಲಿ ಏನು ಕ್ರಮ? ಮನೆಯಿಂದ ಹೊರಬರುವ ಮುನ್ನ ಗಮನಿಸಿ 

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ

(Covid 19 Delta Plus infected person escaped in Bengaluru)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ