AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು
ಕೊವಿಡ್-19
TV9 Web
| Edited By: |

Updated on: Aug 07, 2021 | 7:53 AM

Share

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ (Covid 19 Cases) ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಮೂರನೇ ಅಲೆಯ ಭೀತಿ ತಲೆದೋರಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕೆಲ ತಜ್ಞರು ಲಾಕ್​ಡೌನ್ (Lockdown)​ ಸಡಿಲಿಸಿದ ಕಾರಣ ಜನರ ಓಡಾಟ ಹೆಚ್ಚಾಗಿ ಎರಡನೇ ಅಲೆಯೇ ಉಲ್ಬಣಿಸಿದೆ. ಇದು ಮೂರನೇ ಅಲೆ ಅಲ್ಲ ಎಂದು ಹೇಳಿದ್ದಾರೆ. ಇತ್ತ ಸೋಂಕು ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ಘೋಷಿಸಿದ್ದು, ರಾಜ್ಯಾದ್ಯಂತ ನೈಟ್​ ಕರ್ಫ್ಯೂ (Night Curfew) ಜಾರಿ ಮಾಡಿದೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ (Delta Plus) ಕೊರೊನಾ ದೃಢವಾಗಿದ್ದು, ಸೋಂಕಿತರ ಪೈಕಿ ಓರ್ವ ವ್ಯಕ್ತಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ. ಜುಲೈ 14ರಂದು ವ್ಯಕ್ತಿಗೆ ಡೆಲ್ಟಾ ಪ್ಲಸ್ ಪಾಸಿಟಿವ್ ಇರುವ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಅವರು ಎಷ್ಟೇ ಹುಡುಕಾಡಿದರೂ ಪತ್ತೆಯಾಗದಿರುವುದು ಪೊಲೀಸರಿಗೆ ತಲೆನೋವಾಗಿದೆ. ಇದೀಗ ನಾಪತ್ತೆಯಾಗಿರುವ ಸೋಂಕಿತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೋಂಕಿತನ ಮಾಹಿತಿ ಕಲೆ ಹಾಕಿರುವ ಪೊಲೀಸರು, ಆತ ಎಲ್ಲಿಗೆ ತೆರಳಿರುವ ಸಾಧ್ಯತೆ ಇದೆ ಎಂದು ತಲೆ ಕೆಡಿಸಿಕೊಂಡಿದ್ದಾರೆ.

ವೀಕೆಂಡ್​ ಕರ್ಫ್ಯೂ ಜಾರಿಗೆ ವಿರೋಧ ಮೈಸೂರು: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೀಕೆಂಡ್ ಕರ್ಫ್ಯೂ ಆದೇಶದ ವಿರುದ್ಧ ವರ್ತಕರು, ಹೋಟೆಲ್ ಮಾಲೀಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳು ಧ್ವನಿಯೆತ್ತಿದ್ದು, ಗಡಿಗಳನ್ನು ಬಂದ್ ಮಾಡಿ‌, ನಗರವನ್ನು ಬಂದ್ ಮಾಡಬೇಡಿ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿರುವ ಅವರು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಬಂದ್​ ಮಾಡುವುದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವೀಕೆಂಡ್​ ಕರ್ಫ್ಯೂ: ಯಾವ ಯಾವ ಜಿಲ್ಲೆಗಳಲ್ಲಿ ಏನು ಕ್ರಮ? ಮನೆಯಿಂದ ಹೊರಬರುವ ಮುನ್ನ ಗಮನಿಸಿ 

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ

(Covid 19 Delta Plus infected person escaped in Bengaluru)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು