AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಪರಿಣಾಮ: ಬೆಂಗಳೂರಿನ ಶೇ 30ರಷ್ಟು ಮಂದಿಯಲ್ಲಿ ಹೆಚ್ಚಾದ ಗೊರಕೆ ಸಮಸ್ಯೆ

ನಗರ ಪ್ರದೇಶದ ಜನರು ಹೆಚ್ಚಾಗಿ ವ್ಯಾಯಮ ಮತ್ತು ದೈಹಿಕ ಕಲಸ ಮಾಡುತ್ತಿಲ್ಲ. ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು ಇದರಿಂದ ಅಧಿಕ ತೂಕದಂಥ ಸಮಸ್ಯೆ ಎದುರಾಗುತ್ತಿದೆ. ಹೆಚ್ಚು ಧೂಮಪಾನ ಮಾಡುವುದು, ಮದ್ಯಪಾನ ಮಾಡುವುದರಿಂದ ಕೊರೊನಾ ನಂತರ ಗೊರಕೆ ಅಭ್ಯಾಸ ಹೆಚ್ಚಾಗುತ್ತಿದೆ ಎಂದೂ ವೈದ್ಯರು ಹೇಳಿದ್ದಾರೆ.

ಕೋವಿಡ್ ಪರಿಣಾಮ: ಬೆಂಗಳೂರಿನ ಶೇ 30ರಷ್ಟು ಮಂದಿಯಲ್ಲಿ ಹೆಚ್ಚಾದ ಗೊರಕೆ ಸಮಸ್ಯೆ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Jan 11, 2024 | 12:37 PM

Share

ಬೆಂಗಳೂರು, ಜನವರಿ 11: ಕೋವಿಡ್ ಸೋಂಕಿನ (Covid 19) ಪರಿಣಾಮ ಬೆಂಗಳೂರಿನ ಜನರಲ್ಲಿ ಗೊರಕೆ ಸಮಸ್ಯೆ (Snoring problem) ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಬಳಿಕ ರಾಜಧಾನಿ ಬೆಂಗಳೂರಿನ (Bengaluru) ಶೇ 30 ರಷ್ಟು ಜನರಲ್ಲಿ ಗೊರಕೆ ಸಮಸ್ಯೆ ಕಾಣಿಸಿದೆ. ಇದು ಗೊರಕೆಗಷ್ಟೇ ಸೀಮಿತವಾಗದೆ, ಹೃದಯ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಗೊರಕೆ ಸಮಸ್ಯೆ ಶುರುವಾದವರು ಅಥವಾ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಇದೀಗ ಗೊರಕೆ ಸಮಸ್ಯೆ ಆರಂಭವಾಗಿದ್ದರೆ ನಿರ್ಲಕ್ಷ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಹೆಚ್ಚು ಜನರು ನಿಂತಲ್ಲೇ, ಕುಳಿತಲ್ಲೇ ಗೊರಕೆ ಹೊಡೆಯುವುದು ಹಲವೆಡೆ ಕಂಡುಬಂದಿದೆ. ಬಸ್, ಟ್ರೈನ್, ವೈಟಿಂಗ್ ರೂಮ್, ಆಫೀಸ್, ಕ್ಲಾಸ್ ಹೀಗೆ ಜನರು ತಾವಿದ್ದಲ್ಲಿಯೇ ನಿದ್ದೆಗೆ ಜಾರುವುದು ಮತ್ತು ಗೊರಕೆ ಹೊಡೆಯುವುದು ಕಾಣಿಸುತ್ತಿದ್ದು, ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ವೈದ್ಯರು ಹೇಳಿದ್ದಾರೆ.

ಗ್ರಾಮೀಣ ಭಾಗಕ್ಕೆ ಹೋಲಿಕೆ ಮಾಡಿದರೆ ನಗರ ಪ್ರದೇಶದ ಜನರು ಹೆಚ್ಚು ಗೊರಕೆ ಸಮಸ್ಯೆ ಅನಭವಿಸುತ್ತಿದ್ದಾರೆ. ಎಷ್ಟೋ ಮಂದಿ ಇದನ್ನು ಸಾಮಾನ್ಯ ಗೊರಕೆ ಎಂದು ನಿರ್ಲಕ್ಷ್ಯ ವಹಿಸಿದ್ದು ನಿದ್ರೆಯ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗಿದೆ.

ನಗರ ಪ್ರದೇಶದ ಜನರು ಹೆಚ್ಚಾಗಿ ವ್ಯಾಯಮ ಮತ್ತು ದೈಹಿಕ ಕಲಸ ಮಾಡುತ್ತಿಲ್ಲ. ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು ಇದರಿಂದ ಅಧಿಕ ತೂಕದಂಥ ಸಮಸ್ಯೆ ಎದುರಾಗುತ್ತಿದೆ. ಹೆಚ್ಚು ಧೂಮಪಾನ ಮಾಡುವುದು, ಮದ್ಯಪಾನ ಮಾಡುವುದರಿಂದ ಗೊರಕೆ ಅಭ್ಯಾಸ ಹೆಚ್ಚಾಗುತ್ತಿದೆ ಎಂದೂ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ದೃಢ: ಒಟ್ಟು 974 ಜನರಲ್ಲಿ ಸೋಂಕು ಸಕ್ರಿಯ

ಗೊರಕೆ ಸಮಸ್ಯೆಯಿಂದ ಬೇಸತ್ತು ಸಾಕಷ್ಟು ಜನರು ಸ್ಲೀಪಿಂಗ್ ಕ್ಲಿನಿಕ್​ನಲ್ಲಿ ಚಿಕಿತ್ಸೆಗೆ ಮುಂದಾಗುತ್ತಿದ್ದಾರೆ. ಇನ್ನು ಗೊರಕೆಯಿಂದ ನೀದ್ರಾಹೀನತೆ, ನಿದ್ದೆಯ ಗುಣಮಟ್ಟ ಕಡಿಮೆಯಾಗುವ ಸಮಸ್ಯೆ ಎದುರಾಗುತ್ತಿದೆ. ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯದ ತೊಂದರೆಗಳು, ಚಯಾಪಚಯ ಕ್ರಿಯೆಯ ಕಾಯಿಲೆಗಳು, ಜೀವನ ಗುಣಮಟ್ಟ ಕುಸಿತದಂತಹ ಗಂಭೀರ ಸಮಸ್ಯೆಗಳು ಎದುರಾಗುತ್ತಿದ್ದು ನಿರ್ಲಕ್ಷ್ಯವಹಿಸದ್ದಂತೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು