AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ

ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ.

ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 04, 2022 | 11:04 PM

Share

ಬೆಂಗಳೂರು: ಕೊರೊನಾ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಂಗಳವಾರ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ. ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಟಿಸಿ, ಕೆಎಸ್​ಆರ್​ಟಿಸಿ ಮತ್ತು ರೈಲು ಪ್ರಯಾಣದ ಬಗ್ಗೆ ಆಯಾ ನಿಗಮಗಳ ಮುಖ್ಯಸ್ಥರು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದರು.

ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಅನ್ವಯವೇ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯವ್ಯಾಪಿ ಕರ್ಫ್ಯೂ ನಿಯಮಗಳು ಚಾಲ್ತಿಯಲ್ಲಿರುತ್ತವೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕೆಲಸ ಮಾಡುತ್ತವೆ. ಸರ್ಕಾರಿ ಕಚೇರಿಗಳಲ್ಲಿ ಅರ್ಧದಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 10, 11 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳಿಗೆ 50:50 ನಿಯಮ ಜಾರಿ; ಕೊರೊನಾ ಮಾರ್ಗಸೂಚಿಯ ವಿವರ ಇಲ್ಲಿದೆ ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,