AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧ ತಾಯಿಯ ಅಸ್ಥಿ ತೆಗೆದುಕೊಂಡು ಹೋಗುತ್ತಿದ್ದ ಕಾರಿಗೂ ತಡೆ; ಕಾರು ಬಿಡಲು ಸಾಧ್ಯವಿಲ್ಲ ಅಂತಾ ವಾಪಸ್ ಕೈ ಮುಗಿದ ಪೊಲೀಸರು

ಪೊಲೀಸರು ಅಸ್ಥಿ ತೆಗೆದುಕೊಂಡು ಹೋಗಲು ಸಹ ಬಿಡುತ್ತಿಲ್ಲ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಕಾರಿಗೆ ತಡೆಯೊಡ್ಡಿರುವ ಪ್ರಸಂಗ ನಡೆದಿದೆ. ವೃದ್ದ ತಾಯಿಯ ಮಕ್ಕಳು ಅವರ ಅಸ್ಥಿಯನ್ನು ಕೈಯ್ಯಲ್ಲೇ ಹಿಡಿದುಕೊಂಡು ಪೊಲೀಸರಿಗೆ ಕೈ ಮುಗಿದು ಕೇಳಿಕೊಳ್ಳುತ್ತಿದ್ದಾರೆ.

ವೃದ್ಧ ತಾಯಿಯ ಅಸ್ಥಿ ತೆಗೆದುಕೊಂಡು ಹೋಗುತ್ತಿದ್ದ ಕಾರಿಗೂ ತಡೆ; ಕಾರು ಬಿಡಲು ಸಾಧ್ಯವಿಲ್ಲ ಅಂತಾ ವಾಪಸ್ ಕೈ ಮುಗಿದ ಪೊಲೀಸರು
ವೃದ್ಧ ತಾಯಿಯ ಅಸ್ಥಿ ತೆಗೆದುಕೊಂಡು ಹೋಗುತ್ತಿದ್ದ ಕಾರಿಗೂ ತಡೆ; ಕಾರು ಬಿಡಲು ಸಾಧ್ಯವಿಲ್ಲ ಅಂತಾ ವಾಪಸ್ ಕೈ ಮುಗಿದ ಪೊಲೀಸರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2021 | 3:18 PM

Share

ಬೆಂಗಳೂರು: ಕೊವಿಡ್ ರಾಕ್ಷಸನನ್ನು ಹೆಡೆಮುರಿಗೆ ಕಟ್ಟಲು ರಾಜ್ಯ ಸರ್ಕಾರ ಪೊಲೀಸರಿಗೆ ಖಡಕ್ ಆದೇಶ ನೀಡಿದೆ. 10 ಗಂಟೆ ನಂತರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಆಗಿದೆ. ಅದಕ್ಕೂ ಮುನ್ನ ಹತ್ತು ಗಂಟೆಗೆ ಹತ್ತು ನಿಮಿಷ ಬಾಕಿ ಇದ್ದರೂ ವಾಹನಗಳ ಓಡಾಟ ನಿಂತಿಲ್ಲ. ಜನರಿನ್ನೂ ಪರಿಸ್ಥಿತಿಯ ಗಂಭೀರತೆ ಅರಿತುಕೊಳ್ಳದೆ ಕೊನೆಯ ಕ್ಷಣದಲ್ಲಿ ತಮ್ಮ ಅವಸರಕ್ಕೆ ಬೇಕಾದಂತೆ ಸಂಚಾರ ಮಾಡುತ್ತಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಕೃಪಾ ನಿಧಿ ಸರ್ಕಲ್ ನಲ್ಲಿ ಲಾಕ್ ಡೌನ್ ಉಲ್ಲಂಘನೆ ಮಾಡಿದವರಿಗೆ ಡಿಸಿಪಿ ಶ್ರೀನಾಥ್ ಜೋಶಿ ಅವರು ಪ್ರಮಾಣವಚನೆ ಭೋಧಿಸುತ್ತಿದ್ದಾರೆ. ಕೊವಿಡ್ ನಿಯಮ ಉಲ್ಲಂಘನೆ ಇನ್ನು ಮುಂದೆ ಮಾಡುವುದಿಲ್ಲ ಎಂಬುದು ಪ್ರಮಾಣ ವಚನದ ಸಾರಾಂಶವಾಗಿದೆ. ಈ ಮಧ್ಯೆ ಖೇದಕರ ಸಂಗತಿಯೊದು ನಡೆದಿದೆ.

ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಅಸ್ಥಿ ತೆಗೆದುಕೊಂಡು ಹೋಗುತ್ತಿದ್ದ ಕುಟುಂಬವೊಂದರ ಕಾರಿಗೂ ತಡೆಯೊಡ್ಡಲಾಗಿದೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಮೈಸೂರಿನ ಮಹಿಳೆಯೊಬ್ಬರು (ವೃದ್ಧ ತಾಯಿ) ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಹಾಗಾಗಿ ಮೃತರ ಅಸ್ಥಿಯನ್ನು ಮೈಸೂರಿಗೆ ತೆಗೆದುಕೊಂಡು ಹೋಗುವಾಗ ಈ ಖೇದಕರ ಪ್ರಸಂಗ ನಡೆದಿದೆ.

Covid Curfew bengaluru police not allow ashes of a covid patient to be transported to mysore

ವೃದ್ಧ ತಾಯಿಯ ಅಸ್ಥಿ ತೆಗೆದುಕೊಂಡು ಹೋಗುತ್ತಿದ್ದ ಕಾರಿಗೂ ತಡೆ

ಮೃತ ಮಹಿಳೆಯ ಕುಟುಂಬಸ್ಥರು ತಮ್ಮ ಮನೆ ಮೈಸೂರಿನಲ್ಲಿ ಇದೆ. ಹಾಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದರೂ ಪೊಲೀಸರು ಕೇಳುತ್ತಿಲ್ಲ. ಪೊಲೀಸರು ಅಸ್ಥಿ ತೆಗೆದುಕೊಂಡು ಹೋಗಲು ಸಹ ಬಿಡುತ್ತಿಲ್ಲ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಕಾರಿಗೆ ತಡೆಯೊಡ್ಡಿರುವ ಪ್ರಸಂಗ ನಡೆದಿದೆ. ವೃದ್ದ ತಾಯಿಯ ಮಕ್ಕಳು ಅವರ ಅಸ್ಥಿಯನ್ನು ಕೈಯ್ಯಲ್ಲೇ ಹಿಡಿದುಕೊಂಡು ಪೊಲೀಸರಿಗೆ ಕೈ ಮುಗಿದು ಕೇಳಿಕೊಳ್ಳುತ್ತಿದ್ದಾರೆ. ಕಾರನ್ನು ಬಿಡಲು ಸಾಧ್ಯವಿಲ್ಲ ಅಂತಾ ಪೊಲೀಸರು ವಾಪಸ್ ಕೈ ಮುಗಿದು ಬೇಡಿಕೊಳ್ತಿರೋ ದೃಶ್ಯ ಕಂಡುಬಂದಿದೆ.

(Covid Curfew bengaluru police not allow ashes of a covid patient to be transported to mysore)

ನನ್ನಿಂದಲೇ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಬಂತು; ಕ್ಷಮಿಸು ಮಾರಿಕಾಂಬ ದೇವಿ ಎಂದು ಡೆತ್​ ನೋಟು ಬರೆದು ಆತ್ಮಹತ್ಯೆಗೆ ಶರಣು

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು