AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine: ಕರ್ನಾಟಕದಲ್ಲಿರುವ 31 ಲಕ್ಷ ಮಕ್ಕಳಿಗೆ ಕೊವಿಡ್ ಲಸಿಕೆ ಪಡೆಯಲು ಅರ್ಹತೆ

ಕರ್ನಾಟಕದಲ್ಲಿ 15ರಿಂದ 18 ವರ್ಷ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಕೊರೊನಾ ಲಸಿಕೆ ಪಡೆಯಲು ಇವರೆಲ್ಲರೂ ಅರ್ಹತೆ ಪಡೆದಿದ್ದಾರೆ.

Covid Vaccine: ಕರ್ನಾಟಕದಲ್ಲಿರುವ 31 ಲಕ್ಷ ಮಕ್ಕಳಿಗೆ ಕೊವಿಡ್ ಲಸಿಕೆ ಪಡೆಯಲು ಅರ್ಹತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 02, 2022 | 10:33 PM

Share

ಬೆಂಗಳೂರು: ಕರ್ನಾಟಕದಲ್ಲಿ 15ರಿಂದ 18 ವರ್ಷ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಕೊರೊನಾ ಲಸಿಕೆ (Covid Vaccine) ಪಡೆಯಲು ಇವರೆಲ್ಲರೂ ಅರ್ಹತೆ ಪಡೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಮೂಡಲಪಾಳ್ಯದ ಬಿಬಿಎಂಪಿ ಶಾಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ವಯೋಮಿತಿಯ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಮೊದಲ ಡೋಸ್ ಲಸಿಕೆ ಪಡೆದ 28 ದಿನಗಳ ನಂತರ ಇವರಿಗೆ 2ನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಬರಲಿದೆ.

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿ ತಾಲ್ಲೂಕಿನಲ್ಲಿ ಶಾಸಕರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳು ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದು, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂಯೋಜನೆಯಿಂದ ಕೆಲಸ ಮಾಡಲು ಬೇಕಿರುವ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಿದ್ಧತೆ ಪೂರ್ಣಗೊಳಿಸಿದ್ದಾರೆ.

ಮಕ್ಕಳಿಗೆ ಲಸಿಕೆ ಕೊಡುವ ಅಭಿಯಾನಕ್ಕೆ ಚಾಲನೆ ಸಿಗುವ ಸೋಮವಾರದಂದು ಸುಮಾರು 6 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುವುದು. ರಾಜ್ಯದಲ್ಲಿ ಪ್ರಸ್ತುತ 16 ಲಕ್ಷ ಕೊವ್ಯಾಕ್ಸಿನ್ ಡೋಸ್​ಗಳಿವೆ. ಶಾಲೆ ಮತ್ತು ಕಾಲೇಜು ಮಟ್ಟದಲ್ಲಿ ಲಸಿಕಾ ಅಭಿಯಾನಗಳು ನಡೆಯಲಿವೆ ಎಂದು ಸರ್ಕಾರ ತಿಳಿಸಿದೆ. ಈ ಸಂಸ್ಥೆಗಳು ಲಸಿಕಾ ಅಭಿಯಾನಕ್ಕೆ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಬೆಂಬಲ ನೀಡಲಿವೆ.

ಶಾಲೆಗಳಲ್ಲಿ ಲಸಿಕೆ ತೆಗೆದುಕೊಳ್ಳಲು ಸಾಧ್ಯವಾಗದ ಮಕ್ಕಳು ಸಮೀಪದ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ಕೊಮಾರ್ಬಿಡಿಟಿ ಲಕ್ಷಣಗಳಿರುವ ಮಕ್ಕಳಿಗೆ ಆಸ್ಪತ್ರೆಗಳಲ್ಲಿ ವೈದ್ಯರ ನಿಗಾವಣೆಯಲ್ಲಿ ಲಸಿಕೆ ನೀಡಲಾಗುವುದು. ಆನ್​ಲೈನ್ ಕ್ಲಾಸ್ ಮಾಡುತ್ತಿರುವ ಶಾಲೆಗಳು ಲಸಿಕಾ ಅಭಿಯಾನಕ್ಕಾಗಿ ದಿನ ನಿಗದಿ ಮಾಡಿಕೊಳ್ಳಬಹುದಾಗಿದೆ. ಔಪಚಾರಿಕ ಶಿಕ್ಷಣವನ್ನು ನಿಲ್ಲಿಸಿರುವ ಮಕ್ಕಳ ಸಮೀಪದ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1187 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು ಇದನ್ನೂ ಓದಿ: Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ