AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮತ್ತೆ ಹೆಚ್ಚಿದ ಕೊರೊನಾ ಪ್ರಕರಣಗಳು; ಯಶವಂತಪುರದ 72 ಫ್ಲಾಟ್ ಸೀಲ್​ಡೌನ್

Covid19 Third Wave: ಧಾರವಾಡ, ದೆಹಲಿಗೆ ಪ್ರಯಾಣ ಮಾಡಿ ವಾಪಸ್ ಆದವರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. 16 ಮಂದಿಯಲ್ಲಿ ಕೊವಿಡ್ ಪತ್ತೆಯಾಗಿರುವುದರಿಂದ ಕೊರೋನಾ ಕ್ಲಸ್ಟರ್ ಎಂದು ಗುರುತಿಸಿ ಸಂಪೂರ್ಣ ಎ ಬ್ಲಾಕ್ 72 ಮನೆಗಳು ಸೀಲ್ ಡೌನ್ ಮಾಡಲಾಗಿದೆ.

Bengaluru: ಮತ್ತೆ ಹೆಚ್ಚಿದ ಕೊರೊನಾ ಪ್ರಕರಣಗಳು; ಯಶವಂತಪುರದ 72 ಫ್ಲಾಟ್ ಸೀಲ್​ಡೌನ್
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Jul 31, 2021 | 5:37 PM

Share

ಬೆಂಗಳೂರು: ನಗರದ ಯಶವಂತಪುರದಲ್ಲಿರುವ ಅಪಾರ್ಟ್‌ಮೆಂಟ್​ನಲ್ಲಿ 16 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅಪಾರ್ಟ್‌ಮೆಂಟ್‌ನ ಎ ಬ್ಲಾಕ್ ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ. ಅಪಾರ್ಟ್​ಮೆಂಟ್​ನ ಎ ಬ್ಲಾಕ್‌ನಲ್ಲಿ ಒಟ್ಟು 72 ಮನೆಗಳಿದ್ದು, 72 ಫ್ಲ್ಯಾಟ್​ ಕೂಡ ಸೀಲ್‌ಡೌನ್ ಮಾಡಲಾಗಿದೆ.

ಧಾರವಾಡ, ದೆಹಲಿಗೆ ಪ್ರಯಾಣ ಮಾಡಿ ವಾಪಸ್ ಆದವರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. 16 ಮಂದಿಯಲ್ಲಿ ಕೊವಿಡ್ ಪತ್ತೆಯಾಗಿರುವುದರಿಂದ ಕೊರೋನಾ ಕ್ಲಸ್ಟರ್ ಎಂದು ಗುರುತಿಸಿ ಸಂಪೂರ್ಣ ಎ ಬ್ಲಾಕ್ 72 ಮನೆಗಳು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆಯ ಆತಂಕ ಶುರುವಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಬೆಂಗಳೂರಿನ ಮಹದೇವಪುರದಲ್ಲಿರುವ ಅಪಾರ್ಟ್‌ಮೆಂಟ್ ಗೇಟ್ ಕ್ಲೋಸ್ ಮಾಡಲಾಗಿದೆ. ಸೋಂಕಿತರಿರುವ ಅಪಾರ್ಟ್‌ಮೆಂಟ್‌ನ ಗೇಟ್ ಕ್ಲೋಸ್ ಮಾಡಲಾಗಿದೆ. ಜೊತೆಗೆ, ಕೊರೊನಾ ಸೋಂಕಿತರಿರುವ ಫ್ಲ್ಯಾಟ್‌ ಕೂಡ ಕ್ಲೋಸ್ ಮಾಡಲಾಗಿದೆ.

ಕರ್ಫ್ಯೂ ಜಾರಿ ಸಾಧ್ಯತೆ ಐದು ಕೇಸ್ಗಳು ಪತ್ತೆಯಾಗುವ ಪ್ರದೇಶವನ್ನ ಸೀಲ್ ಡೌನ್ ಮಾಡಲಾಗುತ್ತದೆ. 10 ಕೇಸ್​ಗಳು ಪತ್ತೆಯಾಗುವ ಸ್ಟ್ರೀಟ್, ರಸ್ತೆಗಳನ್ನೇ ಸೀಲ್ ಡೌನ್ ಮಾಡುತ್ತೇವೆ. ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದೇವೆ. ಮಾರ್ಕೆಟ್​ಗಳಿಗೆ ಹೋಗಿ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಸರ್ಕಾರಕ್ಕೆ ನಮ್ಮ ವರದಿ ನೀಡಲಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾದರೆ ಸರ್ಕಾರದ ಹಂತದಲ್ಲಿ ಕರ್ಫ್ಯೂಗಳನ್ನ ಜಾರಿ ಮಾಡುವ ಸಾಧ್ಯತೆಯಿದೆ. ಜೊತೆಗೆ ಬೇರೆ ರೀತಿಯ ಕ್ರಮಕ್ಕೂ ಮುಂದಾಗಬಹುದು. ಅದನ್ನು ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್ ಇಂದು (ಜುಲೈ 31) ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ! ಒಂದೇ ಮನೆಯಲ್ಲಿ ಮೂರು ಸೋಂಕಿತರು ಪತ್ತೆಯಾದರೆ ಮನೆ ಸೀಲ್ ಡೌನ್; ಬಿಬಿಎಂಪಿ ನಿರ್ಧಾರ

(Covid19 Corona Cases in Bengaluru Apartment 72 Flat Sealdown)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!