AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿಯಂದು ದೇವಾಲಯಕ್ಕೆ 50 ಜನರ ಪ್ರವೇಶಕ್ಕೆ ಮಾತ್ರ ಅವಕಾಶ; ಕೊರೊನಾ ತಡೆಗೆ ಕಠಿಣ ಕ್ರಮ

Bengaluru News: ಟ್ರಯಾಜಿಂಗ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಿದ ನಂತರ ಅವ್ರಿಗೆ ಮುಂದಿನ ಚಿಕಿತ್ಸೆ ಕುರಿತು ಮಾಹಿತಿ ನೀಡಲಾಗುವುದು. ಆಸ್ಪತ್ರೆಗೆ ದಾಖಲಾಗಬೇಕು ಅಂದ್ರೆ ಫಿಜಿಕಲ್ ಟ್ರಯಾಜಿಂಗ್ ಸೆಂಟರ್ ಸರ್ಟಿಫಿಕೇಟ್ ಕಡ್ಡಾಯ ಎಂದು ತಿಳಿಸಿದ್ದಾರೆ.

ವೈಕುಂಠ ಏಕಾದಶಿಯಂದು ದೇವಾಲಯಕ್ಕೆ 50 ಜನರ ಪ್ರವೇಶಕ್ಕೆ ಮಾತ್ರ ಅವಕಾಶ; ಕೊರೊನಾ ತಡೆಗೆ ಕಠಿಣ ಕ್ರಮ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 11, 2022 | 2:38 PM

Share

ಬೆಂಗಳೂರು: ವೈಕುಂಠ ಏಕಾದಶಿಯಂದು 50 ಜನರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗುವುದು. ದೇವಸ್ಥಾನಕ್ಕೆ 50 ಜನರು ಮಾತ್ರ ತೆರಳಲು ಅವಕಾಶವಿದೆ. ಇದನ್ನು ಪಾಲಿಸಬೇಕು, ಹೆಚ್ಚು ಜನರು ಸೇರಬಾರದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡುವುದು ಸೂಕ್ತವಾಗಿದೆ. ಪರಿಸ್ಥಿತಿಗೆ ತಕ್ಕಂತೆ ವಿಸ್ತರಣೆ ಮಾಡೋದು ಸೂಕ್ತ. ಕೊವಿಡ್ ಕೇಸ್ ಕಡಿಮೆ ಆಗದಿದ್ದರೆ ಕಠಿಣ ರೂಲ್ಸ್ ಜಾರಿ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಫಿಜಿಕಲ್ ಟ್ರಯಾಜಿಂಗ್ ಸೆಂಟರ್ ಆರಂಭಕ್ಕೆ ಸಿದ್ಧತೆ ಮಾಡಲಾಗಿದೆ. ಸೋಂಕಿತರು ವಾಕಿಂಗ್ ಮೂಲಕ ಈ ಫಿಜಿಕಲ್ ಟ್ರಯಾಜಿಂಗ್ ಸೆಂಟರ್​ಗೆ ಬರಬಹುದು. ಆಸ್ಪತ್ರೆಗೆ ದಾಖಲಾಗುವ ಮೊದಲು ಫಿಜಿಕಲ್ ಟ್ರಯಾಜಿಂಗ್ ಸೆಂಟರ್​​ಗೆ ವಿಸಿಟ್ ಮಾಡಲೇಬೇಕು. ಟ್ರಯಾಜಿಂಗ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಿದ ನಂತರ ಅವ್ರಿಗೆ ಮುಂದಿನ ಚಿಕಿತ್ಸೆ ಕುರಿತು ಮಾಹಿತಿ ನೀಡಲಾಗುವುದು. ಆಸ್ಪತ್ರೆಗೆ ದಾಖಲಾಗಬೇಕು ಅಂದ್ರೆ ಫಿಜಿಕಲ್ ಟ್ರಯಾಜಿಂಗ್ ಸೆಂಟರ್ ಸರ್ಟಿಫಿಕೇಟ್ ಕಡ್ಡಾಯ ಎಂದು ತಿಳಿಸಿದ್ದಾರೆ.

ಫಿಜಿಕಲ್ ಟ್ರಯಾಜಿಂಗ್ ಸೆಂಟರ್ ಯಾಕೆ? ಮನೆ ಮನೆಗೂ ಹೋಗಿ ಮೊಬೈಲ್ ಫಿಜಿಕಲ್ ಟ್ರಯಾಜಿಂಗ್ ಮಾಡಲಾಗುವುದು. ವಿನಾಕಾರಣ ಆಸ್ಪತ್ರೆಗೆ ದಾಖಲಾಗುವುದು ಕಡಿಮೆಯಾಗುವುದು. ಪ್ರತಿ ದಿನ ಸೋಂಕಿನ ಕುರಿತು ಮಾನಿಟರ್ ಮಾಡಲಾಗುವುದು. ಎಷ್ಟು ಜನ ದಾಖಲಾಗ್ತಿದ್ದಾರೆ, ಐಸಿಯು ಸೇರುತ್ತಿದ್ದಾರೆ ಅನ್ನೋದರ ಮಾನಿಟರ್ ಮಾಡಲಾಗುವುದು. ಫಿಜಿಕಲ್ ಟ್ರಯಾಜಿಂಗ್ ಸೆಂಟರ್ ನಲ್ಲೂ ಬೆಡ್ ಬುಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡುವುದು ಸೂಕ್ತವಾಗಿದೆ. ಪರಿಸ್ಥಿತಿ ಗೆ ತಕ್ಕಂತೆ ವಿಸ್ತರಣೆ ಮಾಡೋದು ಅಗತ್ಯವಾಗಿದೆ. ಜೀವಕ್ಕೆ ಆತಂಕ ಬರುತ್ತೆ ಅಂತ ಅಂದ್ರೆ ಲಾಕ್ ಡೌನ್ ನಂಥಹ ಕಠಿಣ ಕ್ರಮ ಅನಿವಾರ್ಯ. ಕೇಸ್ ಕಡಿಮೆ ಆಗಲಿಲ್ಲ ಅಂದ್ರೆ ಇನ್ನಷ್ಟು ಕಠಿಣ ನಿಯಮ ಅನಿವಾರ್ಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ತಪಾಸಣೆ ಮಾಡುವ ಅಗತ್ಯವಿಲ್ಲ; ಹೊಸ ಮಾರ್ಗಸೂಚಿ ಪ್ರಕಟಿಸಿದ ಐಸಿಎಂಆರ್​

ಇದನ್ನೂ ಓದಿ: ದೇಶದಲ್ಲಿಂದು 1,68,063 ಕೊರೊನಾ ಕೇಸ್​ ದಾಖಲು; ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆ, 277 ಮಂದಿ ಸಾವು

Follow Us
Web contact
Web contact

TV9 Kannada

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ