AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದಿಢೀರನೆ ಹೃದಯಾಕಾರದ ಟ್ರಾಫಿಕ್ ದೀಪಗಳು ಗೋಚರಿಸುತ್ತಿವೆ! ಯಾಕೆ?

ಮಣಿಪಾಲ್ ಆಸ್ಪತ್ರೆ ಪ್ರಕಾರ, "ಬೆಂಗಳೂರು ಹೃದಯ ಸ್ಮಾರ್ಟ್ ಸಿಟಿ" ಎಂದು ಪ್ರೋತ್ಸಾಹಿಸಲು ವಿಶ್ವ ಹೃದಯ ದಿನದಂದು ಹೃದಯಾಕಾರದ ಟ್ರಾಫಿಕ್ ದೀಪಗಳನ್ನು ಅಳವಡಿಸಲಾಗಿದೆ. ನಗರದ 20 ಕ್ಕೂ ಹೆಚ್ಚು ಸ್ಥಳಗಳು ಸಂಚಾರ ದೀಪಗಳನ್ನು ಪಡೆದಿವೆ.

ಬೆಂಗಳೂರಿನಲ್ಲಿ ದಿಢೀರನೆ ಹೃದಯಾಕಾರದ ಟ್ರಾಫಿಕ್ ದೀಪಗಳು ಗೋಚರಿಸುತ್ತಿವೆ! ಯಾಕೆ?
ಬೆಂಗಳೂರಿನಲ್ಲಿ ದಿಢೀರನೆ ಹೃದಯಾಕಾರದ ಟ್ರಾಫಿಕ್ ದೀಪಗಳು ಗೋಚರಿಸುತ್ತಿವೆ! ಯಾಕೆ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 13, 2022 | 2:09 PM

ನಗರದ ಪ್ರಮುಖ ಭಾಗಗಳಲ್ಲಿ ಟ್ರಾಫಿಕ್ ಸಿಗ್ನಲ್​ ಐಲ್ಯಾಂಡ್​​ಗಳಲ್ಲಿ ಹೃದಯಾಕಾರದ ಟ್ರಾಫಿಕ್ ಲೈಟ್‌ಗಳು ಗೋಚರಿಸತೊಡಗಿವೆ. ಮಣಿಪಾಲ್ ಆಸ್ಪತ್ರೆ, ಬೆಂಗಳೂರು ಟ್ರಾಫಿಕ್ ಪೊಲೀಸ್ (ಬಿಟಿಪಿ -Bengaluru Traffic Police), ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ Bruhat Bengaluru Mahanagara Palike -BBMP) ಜಂಟಿ ಕಾರ್ಯಾಚರಣೆ ಪರಿಣಾಮವಾಗಿ ಇದು ಕಾಣತೊಡಗಿವೆ. ತುರ್ತು ಸಂದರ್ಭಗಳಲ್ಲಿ ಹೃದಯದ ಪ್ರಥಮ ಚಿಕಿತ್ಸೆಗಾಗಿ (CPR) ಟ್ರಾಫಿಕ್ ಸಿಗ್ನಲ್ ಗಳಲ್ಲಿ ತ್ವರಿತ ರಹದಾರಿ ಒದಗಿಸುತ್ತವೆ.

ಬೆಂಗಳೂರಿನ ಪ್ರಯಾಣಿಕರು ಇತ್ತೀಚೆಗೆ ನಗರದಾದ್ಯಂತ ಅನೇಕ ಟ್ರಾಫಿಕ್ ಲೈಟ್‌ಗಳಲ್ಲಿ ಹೃದಯ ಚಿಹ್ನೆಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಕೆಲವರು ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಾಜಧಾನಿಯಲ್ಲಿ ಕೆಂಪು ಕೆಂಪಾಗಿರುತ್ತಿದ್ದ ಟ್ರಾಫಿಕ್ ಲೈಟ್‌ಗಳು ಇದ್ದಕ್ಕಿದ್ದಂತೆ ಹೃದಯಾಕಾರದಲ್ಲಿ ಮಿನುಗಲು ಕಾರಣವೇನು ಎಂದು ಅನೇಕರು ಆಶ್ಚರ್ಯ ಪಟ್ಟಿದ್ದಾರೆ.

ಮಣಿಪಾಲ್ ಆಸ್ಪತ್ರೆಯ (Manipal Hospitals) ಪ್ರಕಾರ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಬಳಸಲು ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ ಜಂಕ್ಷನ್‌ಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಪೋಸ್ಟ್ ಮಾಡಲಾಗಿದೆ. ಆದ್ದರಿಂದ ಬೆಂಗಳೂರಿನ ನಿವಾಸಿಗಳು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ತುರ್ತು ಸೇವೆಗಳಿಗಾಗಿ ಗ್ರೀನ್ ಕಾರಿಡಾರ್ ರಹದಾರಿ ಪಡೆಯಲು ಸಾಧ್ಯವಾಗುತ್ತದೆ.

ಮಣಿಪಾಲ್ ಆಸ್ಪತ್ರೆ ಪ್ರಕಾರ, “ಬೆಂಗಳೂರು ಹೃದಯ ಸ್ಮಾರ್ಟ್ ಸಿಟಿ” ಎಂದು ಪ್ರೋತ್ಸಾಹಿಸಲು ವಿಶ್ವ ಹೃದಯ ದಿನದಂದು ಹೃದಯಾಕಾರದ ಟ್ರಾಫಿಕ್ ದೀಪಗಳನ್ನು ಅಳವಡಿಸಲಾಗಿದೆ. ನಗರದ 20 ಕ್ಕೂ ಹೆಚ್ಚು ಸ್ಥಳಗಳು ಸಂಚಾರ ದೀಪಗಳನ್ನು ಪಡೆದಿವೆ.

ಈ ಯೋಜನೆಯ ಅನುಸಾರ ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಆಡಿಯೋ ಸಂದೇಶಗಳನ್ನು ಸಹ ನಗರದಲ್ಲಿ ಪ್ಲೇ ಮಾಡಲಾಗಿದೆ. ಕ್ಯೂಆರ್ ಕೋಡ್‌ಗಳು ಬಳಕೆದಾರರಿಗೆ ತುರ್ತು ಸೇವೆಗಳನ್ನು ಡಯಲ್ ಮಾಡುವ ಬದಲು ಸುಲಭವಾಗಿ ಸಂಚರಿಸಲು ಅನುವು ಮಾಡಿಕೊಡುತ್ತದೆ ಎಂದು ಮಣಿಪಾಲ್ ಹಾಸ್ಪಿಟಲ್ಸ್ ಹೇಳಿದೆ. ಒಂದೇ ಕ್ಲಿಕ್‌ನಲ್ಲಿ, ಬಳಕೆದಾರರನ್ನು ಆಂಬ್ಯುಲೆನ್ಸ್ ಸೇವೆಗೆ ನಿರ್ದೇಶಿಸಲಾಗುತ್ತದೆ.

ಪ್ರತಿಯೊಂದು ಜೀವವೂ ಮುಖ್ಯ ಎಂಬುದನ್ನು ಸೂಚಿಸಲು ಹೃದಯ ಆಕಾರದ ಟ್ರಾಫಿಕ್ ಸಿಗ್ನಲ್ ಹಾಕಲಾಗಿದೆ ಎಂದು ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾರೊಬ್ಬರೂ ವೇಗವಾಗಿ ವಾಹನ ಸವಾರಿ ಮಾಡಬಾರದು ಅಥವಾ ಚಾಲನೆ ಮಾಡಬಾರದು ಮತ್ತು ಸಿಗ್ನಲ್‌ಗಳನ್ನು ಜಂಪ್ ಮಾಡಬಾರದು. ಜನರು ಜಾಗರೂಕರಾಗಿರಬೇಕು ಮತ್ತು ಟ್ರಾಫಿಕ್ ನಿಯಮಗಳನ್ನು ಅನುಸರಿಸಬೇಕು. ಇದರ ಹೊರತಾಗಿ, ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚಿಸುತ್ತದೆ ಎನ್ನುತ್ತಾರೆ ಆ ಅಧಿಕಾರಿ.

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ