AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರು ಮೆಟ್ರೋದಲ್ಲಿ ತಪ್ಪಿದ ದೊಡ್ಡ ಅನಾಹುತ, ರಹಸ್ಯವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ BMRCL

ನಾಯಂಡಹಳ್ಳಿ- ಕೆಂಗೇರಿಗೆ ಹೋಗುವ ನೇರಳೆ ಬಣ್ಣದ ಮೆಟ್ರೋ ಮಾರ್ಗದ, ಪಟ್ಟಣಗೆರೆ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Namma Metro: ಬೆಂಗಳೂರು ಮೆಟ್ರೋದಲ್ಲಿ ತಪ್ಪಿದ ದೊಡ್ಡ ಅನಾಹುತ, ರಹಸ್ಯವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ BMRCL
ಬೆಂಗಳೂರು ನಮ್ಮ ಮೆಟ್ರೋ
TV9 Web
| Updated By: ವಿವೇಕ ಬಿರಾದಾರ|

Updated on:Feb 07, 2023 | 2:57 PM

Share

ಬೆಂಗಳೂರು: ರಾಜಧಾನಿ ಜನರ ವೇಗದ ಸಂಪರ್ಕ ಸಾಧನ ನಮ್ಮ ಮೆಟ್ರೋದಲ್ಲಿ (Namma Metro) ಭಾರಿ ಅನಾಹುತವೊಂದು ತಪ್ಪಿದೆ. ಸ್ವಲ್ಪ ಯಾಮಾರಿದ್ದರೂ ದೊಡ್ಡ ಅನಾಹುತ ಆಗುತ್ತಿತ್ತು. ನಾಯಂಡಹಳ್ಳಿಯಿಂದ ಕೆಂಗೇರಿಗೆ ಹೋಗುವ ನೇರಳೆ ಬಣ್ಣದ (Purple line) ಮೆಟ್ರೋ ಮಾರ್ಗದ, ಪಟ್ಟಣಗೆರೆ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳಿ ಬಿರುಕು ಕಾಣಿಸಿಕೊಂಡಿದ್ದನ್ನು ರೈಲು ಚಾಲಕ ಮತ್ತು ಕೆಳಮಟ್ಟದ ಸಿಬ್ಬಂದಿ ಗಮನಿಸಿದ್ದಾರೆ. ರೈಲು ಪ್ರಯಾಣದ ವೇಳೆ ಕೇಳಿ ಬರುವ ಶಬ್ದದಲ್ಲಿ ವ್ಯತ್ಯಾಸ ಕೇಳಿಬಂದಿದ್ದರಿಂದ ಮೆಟ್ರೋ ಸ್ಪೀಡ್​ನಲ್ಲಿ ಬದಲಾವಣೆ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೆ ವಿಷಯವನ್ನು ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದರಿಂದ ಇಡೀ ದಿನ ಮತ್ತೊಂದು ಟ್ರ್ಯಾಕ್​ನಲ್ಲಿ ಮೆಟ್ರೋ ಓಡಾಟ ನಡೆಸಿದೆ. ಬಳಿಕ ಮೆಟ್ರೋ ಟೀಮ್ ಕೂಡಲೇ ಎಚ್ಚೆತ್ತು ದುರಸ್ಥಿ ಮಾಡಿದ್ದಾರೆ. ಟ್ರ್ಯಾಕ್ ಸರಿಪಡಿಸಿದ ನಂತರ ಎರಡು ಹಳಿಯಲ್ಲಿ‌ ಎಂದಿನಂತೆ ಮೆಟ್ರೋ ಓಡಾಟ ಶುರು ಮಾಡಿಕೊಂಡಿದೆ.

ಇದನ್ನೂ ಓದಿ: ವಿಚಾರಣೆ ವೇಳೆ ಅವೈಜ್ಞಾನಿಕ ಕಾಮಗಾರಿ ನಿರ್ಲಕ್ಷ್ಯವನ್ನು ಒಪ್ಪಿಕೊಳ್ಳದ ಅಧಿಕಾರಿಗಳು

ಮೆಟ್ರೋ ಹಳಿ ಬಿರುಕಿಗೆ ಸಾರ್ವಜನಿಕರ ಆಕ್ರೋಶ

ಮೆಟ್ರೋ ಹಳಿ ಬಿರುಕುಗೊಂಡಿರುವುದರ ಬಗ್ಗೆ ಜನರು ಆಕ್ರೋಶಗೊಂಡಿದ್ದು, ಟ್ರ್ಯಾಕ್ ಹಾಕಿದ 3 ವರ್ಷದೊಳಗೆ ಹಳಿಯಲ್ಲಿ ಬಿರುಕು ಕಂಡಿದ್ದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ. ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಕಾಮಗಾರಿಯಲ್ಲಿ ಲೋಪವಾಯ್ತೆ? ಹೊಸದಾಗಿ ನಿರ್ಮಿಸಿದ ಟ್ರ್ಯಾಕ್ ಬಿರುಕು ಬೀಳಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪಿಲ್ಲರ್ ದುರಂತ: IISc ತಜ್ಞರಿಂದ BMRCL ಎಂಜಿನಿಯರ್​​ಗಳಿಗೆ ಸ್ಪೆಷಲ್ ಸಿವಿಲ್ ಎಂಜಿನಿಯರಿಂಗ್ ಕ್ಲಾಸ್!

ಇನ್ನು BMRCL ಸಿಬ್ಬಂದಿಗಳು ನಿಗೂಢವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ್ದು, ಇಲ್ಲಿಯವರೆಗೆ ಲೋಪವನ್ನು ಏಕೆ ಬಹಿರಂಗ ಪಡಿಸಿಲ್ಲ? ಲೋಪ ಆದರೂ ಇಲ್ಲಿಯವರಿಗೆ BMRCL ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳದೆ ಸೈಲೆಂಟ್ ಆಗಿರುವುದು ಏಕೆ ಎಂದು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಮೂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Tue, 7 February 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ