AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್

ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 25, 2022 | 7:57 AM

Share

ಬೆಂಗಳೂರು: ಆನ್‌ಲೈನ್​ನಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾಡುವ ಕಂಪನಿಗಳಿಂದ ಮಾಫಿಯಾ ಮಾಡಲಾಗುತ್ತಿದ್ದು ಬೆಂಗಳೂರಿನಲ್ಲಿ ನೂರಾರು ಆ್ಯಪ್ ಆಧಾರಿತ ಕಂಪನಿಗಳು ತಲೆ ಎತ್ತುತ್ತಿವೆ. ಮಾರುಕಟ್ಟೆಗೆ ಬರುವ ದಿನ ಬಳಕೆ ವಸ್ತುಗಳನ್ನ ಖರೀದಿಸಿ ಕಂಪನಿಗಳು ಸ್ಟಾಕ್ ಇಡುತ್ತಿವೆ. ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿ, ನಂತರ ಆನ್ ಲೈನ್​ನಲ್ಲಿ ಒನ್‌ಟು ಡಬಲ್​ಗೆ ಸೇಲ್ ಮಾಡಲಾಗುತ್ತಿದೆ. ನಗರದ ಹಲವೆಡೆ ಕಂಪನಿಗಳು ಗೋದಾಮು ಹೊಂದಿದ್ದು, ಅಗತ್ಯ ವಸ್ತುಗಳನ್ನ ಸ್ಟಾಕ್ ಇಟ್ಟು, ಮಾರುಕಟ್ಟೆಯಲ್ಲಿ ಅಭಾವ ಸೃಷ್ಟಿ ಮಾಡುತ್ತಿವೆ. ಎಪಿಎಂಸಿ ವರ್ತಕರಿಂದ ಮಾಫಿಯಾ ಕರಾಳ ಮುಖ ಬಯಲು ಮಾಡಲಾಗಿದೆ.

ಇದನ್ನೂ ಓದಿ: PSI Recruitment Scam: ಎಡಿಜಿಪಿ ಅಮ್ರಿತ್ ಪಾಲ್​ಗೆ 5 ಕೋಟಿ, ಅವ್ಯವಹಾರದ ಮಹತ್ವದ ಮಾಹಿತಿ ಸಿಐಡಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಟಿವಿ9 ಗೆ ಹೇಳಿಕೆ ನೀಡಿದ್ದು, ಎಪಿಎಂಸಿ ಕಾಯ್ದೆ ಬಂದ ನಂತರ ಇ-ಕಾರ್ಮಸ್ ಮಾಫಿಯಾ ತಲೆ ಎತ್ತಿದೆ. ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ. ಇದರಿಂದ ದಿನ ಬಳಕೆ ವಸ್ತುಗಳ ದರ ಏರಿಕೆಯಾಗುತ್ತಿದ್ದು, ಇದೂವರೆಗೂ ಆನ್ ಲೈನ್ ಅಂಗಡಿಗಳು ನೊಂದಣಿಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣ: ಆರೋಪಿಗಳ ತೀವ್ರ ವಿಚಾರಣೆ, ಮೂವರಿಗಾಗಿ ಮುಂದುವರಿದ ಶೋಧ

ಆಹಾರ ಮತ್ತು ಸರಬರಾಜು ಇಲಾಖೆಯ ಅಪರ ನಿರ್ದೇಶಕಿ ಸುಜಾತ ಹೇಳಿಕೆ ನೀಡಿದ್ದು, ಆನ್​​ ಲೈನ್​ನಲ್ಲಿ ಅಗತ್ಯ ವಸ್ತುಗಳನ್ನ ಮಾರಾಟ ಮಾಡುವ ಕಂಪನಿಗಳ ನೋಂದಣಿ ಇನ್ನೂ ಆರಂಭ ಆಗಿಲ್ಲ. ಕೇಂದ್ರ‌ಸರ್ಕಾರದಿಂದ ಗೈಡ್ ಲೈನ್ ಬರಬೇಕಿದೆ. ಬಂದ ಕೂಡಲೇ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ. ಯಾರು, ಎಷ್ಟು ಅಗತ್ಯ ವಸ್ತುಗಳನ್ನ ಸ್ಟಾಕ್ ಇಡಬೇಕು ಎಂಬ ಕಾನೂನು ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:52 am, Thu, 25 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ