AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್

ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 25, 2022 | 7:57 AM

Share

ಬೆಂಗಳೂರು: ಆನ್‌ಲೈನ್​ನಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾಡುವ ಕಂಪನಿಗಳಿಂದ ಮಾಫಿಯಾ ಮಾಡಲಾಗುತ್ತಿದ್ದು ಬೆಂಗಳೂರಿನಲ್ಲಿ ನೂರಾರು ಆ್ಯಪ್ ಆಧಾರಿತ ಕಂಪನಿಗಳು ತಲೆ ಎತ್ತುತ್ತಿವೆ. ಮಾರುಕಟ್ಟೆಗೆ ಬರುವ ದಿನ ಬಳಕೆ ವಸ್ತುಗಳನ್ನ ಖರೀದಿಸಿ ಕಂಪನಿಗಳು ಸ್ಟಾಕ್ ಇಡುತ್ತಿವೆ. ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿ, ನಂತರ ಆನ್ ಲೈನ್​ನಲ್ಲಿ ಒನ್‌ಟು ಡಬಲ್​ಗೆ ಸೇಲ್ ಮಾಡಲಾಗುತ್ತಿದೆ. ನಗರದ ಹಲವೆಡೆ ಕಂಪನಿಗಳು ಗೋದಾಮು ಹೊಂದಿದ್ದು, ಅಗತ್ಯ ವಸ್ತುಗಳನ್ನ ಸ್ಟಾಕ್ ಇಟ್ಟು, ಮಾರುಕಟ್ಟೆಯಲ್ಲಿ ಅಭಾವ ಸೃಷ್ಟಿ ಮಾಡುತ್ತಿವೆ. ಎಪಿಎಂಸಿ ವರ್ತಕರಿಂದ ಮಾಫಿಯಾ ಕರಾಳ ಮುಖ ಬಯಲು ಮಾಡಲಾಗಿದೆ.

ಇದನ್ನೂ ಓದಿ: PSI Recruitment Scam: ಎಡಿಜಿಪಿ ಅಮ್ರಿತ್ ಪಾಲ್​ಗೆ 5 ಕೋಟಿ, ಅವ್ಯವಹಾರದ ಮಹತ್ವದ ಮಾಹಿತಿ ಸಿಐಡಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಟಿವಿ9 ಗೆ ಹೇಳಿಕೆ ನೀಡಿದ್ದು, ಎಪಿಎಂಸಿ ಕಾಯ್ದೆ ಬಂದ ನಂತರ ಇ-ಕಾರ್ಮಸ್ ಮಾಫಿಯಾ ತಲೆ ಎತ್ತಿದೆ. ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ. ಇದರಿಂದ ದಿನ ಬಳಕೆ ವಸ್ತುಗಳ ದರ ಏರಿಕೆಯಾಗುತ್ತಿದ್ದು, ಇದೂವರೆಗೂ ಆನ್ ಲೈನ್ ಅಂಗಡಿಗಳು ನೊಂದಣಿಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣ: ಆರೋಪಿಗಳ ತೀವ್ರ ವಿಚಾರಣೆ, ಮೂವರಿಗಾಗಿ ಮುಂದುವರಿದ ಶೋಧ

ಆಹಾರ ಮತ್ತು ಸರಬರಾಜು ಇಲಾಖೆಯ ಅಪರ ನಿರ್ದೇಶಕಿ ಸುಜಾತ ಹೇಳಿಕೆ ನೀಡಿದ್ದು, ಆನ್​​ ಲೈನ್​ನಲ್ಲಿ ಅಗತ್ಯ ವಸ್ತುಗಳನ್ನ ಮಾರಾಟ ಮಾಡುವ ಕಂಪನಿಗಳ ನೋಂದಣಿ ಇನ್ನೂ ಆರಂಭ ಆಗಿಲ್ಲ. ಕೇಂದ್ರ‌ಸರ್ಕಾರದಿಂದ ಗೈಡ್ ಲೈನ್ ಬರಬೇಕಿದೆ. ಬಂದ ಕೂಡಲೇ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ. ಯಾರು, ಎಷ್ಟು ಅಗತ್ಯ ವಸ್ತುಗಳನ್ನ ಸ್ಟಾಕ್ ಇಡಬೇಕು ಎಂಬ ಕಾನೂನು ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:52 am, Thu, 25 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ