AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಹಣಕ್ಕೆ ಬೇಡಿಕೆ; ಆರೋಪಿ ಬಂಧನ

ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ. ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಒತ್ತಾಯಿಸಿದ್ದ. ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಿದ್ದ ಮಹಿಳೆಯನ್ನು ಬಳಿಕ ಬ್ಲ್ಯಾಕ್​ಮೇಲ್ ಮಾಡಿದ್ದ ಎಂದು ತಿಳಿದುಬಂದಿದೆ.

Crime News: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಹಣಕ್ಕೆ ಬೇಡಿಕೆ; ಆರೋಪಿ ಬಂಧನ
ಆರೋಪಿ ಪ್ರಶಾಂತ್
TV9 Web
| Edited By: |

Updated on: Mar 04, 2022 | 9:30 AM

Share

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ 50 ಸಾವಿರ ರೂಪಾಯಿ ಪಡೆದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಪ್ರಶಾಂತ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕಿರುಕುಳ ತಾಳಲಾರದೆ ಮಹಿಳೆ ಒಬ್ಬರು ಕೇಂದ್ರ ವಿಭಾಗದ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ದೂರು ಆಧರಿಸಿ ವಿಜಯಪುರ ಮೂಲದ ಆರೋಪಿ ಪ್ರಶಾಂತ್ ಬಂಧಿಸಲಾಗಿದೆ.

ಅಪರಿಚಿತ ವ್ಯಕ್ತಿ ಮೆಸೇಜ್​ಗೆ ಪ್ರತಿಕ್ರಿಯಿಸಿ ಮಹಿಳೆ ಸಂಕಷ್ಟ ತಂದುಕೊಂಡಿದ್ದರು. ಮೆಸೇಜ್ ಮೂಲಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಈ ನಡುವೆ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಅಸಾಮಿ, ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ. ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಒತ್ತಾಯಿಸಿದ್ದ. ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಿದ್ದ ಮಹಿಳೆಯನ್ನು ಬಳಿಕ ಬ್ಲ್ಯಾಕ್​ಮೇಲ್ ಮಾಡಿದ್ದ ಎಂದು ತಿಳಿದುಬಂದಿದೆ.

ಬ್ಲಾಕ್ ಮೇಲ್​ಗೆ ಹೆದರಿ 50 ಸಾವಿರ ಹಣ ಕಳಿಸಿದ್ದ ಮಹಿಳೆ, ಬಳಿಕ ಆರೋಪಿ ಮತ್ತಷ್ಟು ಹಣಕ್ಕೆ ಡಿಮಾಂಡ್ ಮಾಡಿದ್ದ. ಆತನ ಕಾಟ ತಾಳಲಾರದೆ ಕೊನೆಗೆ ಕೇಂದ್ರ ವಿಭಾಗ ಸಿಇಎನ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆ ವಿಜಯಪುರ ಮೂಲದ ಪ್ರಶಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ:

ಬೆಂಗಳೂರು: ರೇವಾ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ವಂಚಿಸಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತ್ತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ (೨೪), ಚೇತನ್(೨೭) ಇಬ್ಬರೂ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ‌ ೨೮ ರಂದು ರಾಜೇಶ್ವರ್ ಎಂಬಾತನನ್ನು ಬಂಧಿಸಿದ್ದ ಪೊಲೀಸರು, ಅದೇ ಕೇಸ್​ನಲ್ಲಿ ಭಾಗಿಯಾಗಿದ್ದ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಯುವತಿಗೆ ೧.೨೭ ಲಕ್ಷ ಹಣ ಪಡೆದು ವಂಚನೆ ಮಾಡಿದ್ರು. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಸಾಮಿಗಳು ಎಸ್ಕೇಪ್ ಆಗಿದ್ದರು.

ಏರ್ ಟೆಲ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಹರ್ಷ ಮತ್ತು ಚೇತನ್, ಜನರನ್ನು ಮೋಸ ಮಾಡಲು ಇವರು ಮಾಡಿಕೊಳ್ತಿದ್ದ ಪ್ಲಾನ್ ಭಯಾನಕವಾಗಿತ್ತು.  ಸಿಮ್ ಖರೀದಿಸಲು ಬರುವವರ ಬಳಿ ಒಂದಕ್ಕಿಂತಿ ಹೆಚ್ಚು ಫಾರ್ಮ್ ಗೆ ಸಹಿ ಮಾಡಿಸಿಕೊಳ್ಳುತ್ತಿದ್ದರು, ಒಂದಕ್ಕಿಂತ ಹೆಚ್ಚು ಫೋಟೊ ಮತ್ತು ಒಂದಕ್ಕಿಂತ ಹೆಚ್ಚು ಬೆರಳು ಮುದ್ರೆ ಪಡೆದುಕೊಳ್ಳುತ್ತಿದ್ದರು. ಒಂದು ಸಿಮ್ ಕಾರ್ಡ್ ಗ್ರಾಹಕರಿಗೆ ನೀಡಿ, ಉಳಿದ ಸಿಮ್ ಕಾರ್ಡ್ ಸೈಬರ್ ವಂಚಕರಿಗೆ ಕೊಡುತ್ತಿದ್ದರು. ಈಶಾನ್ಯ ವಿಭಾಗ ಸಿಇಎನ್ ಪೊಲೀಸರ ಕಾರ್ಯಾಚರಣೆಯಿಂದ ಸದ್ಯ ಬಂಧಿತರಿಂದ ೭ ಲಕ್ಷ ನಗದು,೧೨೦ ಗ್ರಾಂ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ

ಇದನ್ನೂ ಓದಿ: ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಛತ್ತಿಸಗಢದ ವೈದ್ಯಕೀಯ ವಿದ್ಯಾರ್ಥಿನಿ, ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಸಾವು

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್