AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಜೆಪಿ‌ ನಗರದಲ್ಲಿ ಪೋಲಿ‌ ಅಲಿಯುತ್ತಿದ್ದವ ಒಬ್ಬನ ತಲೆಯನ್ನೇ ಸೀಳಿದ, ಮೊಬೈಲ್ ರಿಪೇರಿಗೆ ಹಣ ಇಲ್ಲವೆಂದು ಯುವಕ ಆತ್ಮಹತ್ಯೆ

ಬಾಬಾ ವೈನ್ಸ್ ನಲ್ಲಿ ಕುಡಿದು ಮೂರು ಸಾವಿರ ರೂಪಾಯಿ ಬಿಲ್ ಮಾಡಿದ್ದ. ಹಣ ಕೇಳಿದ್ದಕ್ಕೆ ಐದು ನಿಮಿಷ ಬರ್ತಿನಿ ಎಂದು ಪಕ್ಕದ ಗುರು ಬಾರ್ ಹತ್ರ ಬಂದಿದ್ದ. ಅಲ್ಲಿ ಜಾಗ ಬಿಡೊ ವಿಚಾರಕ್ಕೆ ಮತ್ತೋರ್ವ ವ್ಯಕ್ತಿ ಜೊತೆ ಕಿರಿಕ್ ತೆಗೆದಿದ್ದ. ಅದಕ್ಕೆ ಕೋಪಗೊಂಡು ಫರ್ವೇಜ್ ಖಾನ್ ಎಂಬಾತನ ತಲೆಗೆ ಎಣ್ಣೆ ಬಾಟಲಿಯಿಂದ ಹೊಡೆದಿದ್ದಾನೆ ಅನಿಲ.

Crime: ಜೆಪಿ‌ ನಗರದಲ್ಲಿ ಪೋಲಿ‌ ಅಲಿಯುತ್ತಿದ್ದವ ಒಬ್ಬನ ತಲೆಯನ್ನೇ ಸೀಳಿದ, ಮೊಬೈಲ್ ರಿಪೇರಿಗೆ ಹಣ ಇಲ್ಲವೆಂದು ಯುವಕ ಆತ್ಮಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jan 06, 2022 | 1:58 PM

Share

ಬೆಂಗಳೂರು: ಬೆಂಗಳೂರು ಜನ ಗಾಬರಿಗೆ ಬೀಳುವಂತೆ ಅಲ್ಲಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಜೆಪಿ‌ ನಗರ ಏರಿಯಾದಲ್ಲಿ ಪೋಲಿ‌ ಅಲಿಯುತ್ತಿದ್ದ ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯ ತಲೆಯನ್ನೇ ಸೀಳಿರುವ ಘಟನೆ ನಡೆದಿದೆ. ಜೆಪಿ‌ ನಗರ ಸಿದ್ದೇಶ್ವರ ಚಿತ್ರ ಮಂದಿರದ ಬಳಿಯರುವ ಗುರು ಬಾರ್ ನಲ್ಲಿ ಈ ಘಟನೆ ನಡೆದಿದೆ. ಕುಡಿದು ಏರಿಯಾದಲ್ಲೆಲ್ಲ ಕಿರಿಕ್ ಮಾಡಿಕೊಳ್ತಿದ್ದ ಅನಿಲ್ ಎಂಬ ಆಸಾಮಿ ಬಾರ್ ನಲ್ಲಿ ಹುಡುಗರ ಗುಂಪು ಕಟ್ಟಿಕೊಂಡು ಕುಡಿದು ಹಣ ಕೊಡದೇ ಎಸ್ಕೇಪ್ ಆಗಿಬಿಡ್ತಿದ್ದ. ಬಾರ್ ನವ್ರು ಹಣ ಕೇಳಿದ್ರೆ ಐದು ನಿಮಿಷಕ್ಕೆ ಬರ್ತಿನಿ‌ ಎಂದು ಯಾಮಾರಿಸುತ್ತಿದ್ದ. ಕ್ರೆಡಿಟ್​ ಕಾರ್ಡ್ ಕೊಡ್ತೀನಿ ಇರ್ರಿ ಎಂದೂ ಬಿಲ್ಡಪ್ ಕೊಡ್ತಿದ್ದ ಅನಿಲ್​.

ಲೇಟೆಸ್ಟ್ ಪ್ರಕರಣದಲ್ಲಿ… ಬಾಬಾ ವೈನ್ಸ್ ನಲ್ಲಿ ಕುಡಿದು ಮೂರು ಸಾವಿರ ರೂಪಾಯಿ ಬಿಲ್ ಮಾಡಿದ್ದ. ಹಣ ಕೇಳಿದ್ದಕ್ಕೆ ಐದು ನಿಮಿಷ ಬರ್ತಿನಿ ಎಂದು ಪಕ್ಕದ ಗುರು ಬಾರ್ ಹತ್ರ ಬಂದಿದ್ದ. ಅಲ್ಲಿ ಜಾಗ ಬಿಡೊ ವಿಚಾರಕ್ಕೆ ಮತ್ತೋರ್ವ ವ್ಯಕ್ತಿ ಜೊತೆ ಕಿರಿಕ್ ತೆಗೆದಿದ್ದ. ಅದಕ್ಕೆ ಕೋಪಗೊಂಡು ಫರ್ವೇಜ್ ಖಾನ್ ಎಂಬಾತನ ತಲೆಗೆ ಎಣ್ಣೆ ಬಾಟಲಿಯಿಂದ ಹೊಡೆದಿದ್ದಾನೆ ಅನಿಲ. ಆರೋಪಿ ಅನಿಲನನ್ನು ಬಂಧಿಸಿ, ಪುಟ್ಟೇನಹಳ್ಳಿ ಪೊಲೀಸರು ಜೈಲಿಗೆ ಕಳಿಸಿಕೊಟ್ಟಿದ್ದಾರೆ.

ನೀರಿಗೆ ಬಿದ್ದು ಕೆಟ್ಟುಹೋದ ಮೊಬೈಲ್, ರಿಪೇರಿಗೆ ಹಣ ಇಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ!

ಮೈಸೂರು: ನೀರಿಗೆ ಬಿದ್ದು ಕೆಟ್ಟುಹೋದ ಮೊಬೈಲ್ ಮತ್ತು ಅದರ ರಿಪೇರಿಗೆ ಹಣ ಇಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರಿನ ಯರಗನಹಳ್ಳಿಯ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮಹೇಂದ್ರ( 22) ಮೃತ ದುರ್ದೈವಿ ಯುವಕ. ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರನ ಮೊಬೈಲ್ ನೀರಿನಲ್ಲಿ ಬಿದ್ದು ಕೆಟ್ಟುಹೋಗಿತ್ತು. ಆದರೆ ಆರ್ಥಿಕ ಸಮಸ್ಯೆಯಲ್ಲಿದ್ದ ಮಹೇಂದ್ರನಿಗೆ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದ ಮಾನಸಿಕವಾಗಿ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:48 pm, Thu, 6 January 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ