AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿದ ಕ್ರೈಂ: ಮನೆ ಬಾಡಿಗೆ ಕೊಡಲು ಬೇಡಿಕೆಗಳ ಪಟ್ಟಿಯಿಟ್ಟ ಬೆಂಗಳೂರಿನ ಮನೆ ಮಾಲೀಕರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಮಹಾಲಕ್ಷ್ಮೀ ಕೊಲೆ ಪ್ರಕರಣದಿಂದ ಸಿಲಿಕಾನ್ ಸಿಟಿ ಮನೆ ಮಾಲೀಕರು ಬೆಚ್ಚಿಬಿದ್ದಿದ್ದಾರೆ. ಯಾರಿಗೆ ಮನೆ ಕೊಡಬೇಕು? ಯಾರಿಗೆ ಮನೆ ಕೊಡಬಾರದು ಎನ್ನುವ ಟೆನ್ಷನ್ ಶುರುವಾಗಿಬಿಟ್ಟಿದೆ. ಈ ಹಿನ್ನಲೆ ಮನೆ ಬಾಡಿಗೆ ಕೊಡಲು ಕೆಲ ಬೇಡಿಕೆಗಳ ಪಟ್ಟಿಯಿಟ್ಟಿದ್ದಾರೆ. ಏನದು ಅಂತೀರಾ? ಈ ಸ್ಟೋರಿ ಓದಿ.

ಹೆಚ್ಚಿದ ಕ್ರೈಂ: ಮನೆ ಬಾಡಿಗೆ ಕೊಡಲು ಬೇಡಿಕೆಗಳ ಪಟ್ಟಿಯಿಟ್ಟ ಬೆಂಗಳೂರಿನ ಮನೆ ಮಾಲೀಕರು
ಮನೆ ಬಾಡಿಗೆ ಕೊಡಲು ಬೇಡಿಕೆಗಳ ಪಟ್ಟಿಯಿಟ್ಟ ಬೆಂಗಳೂರಿನ ಮನೆ ಮಾಲೀಕರು
Kiran Surya
| Edited By: |

Updated on: Sep 27, 2024 | 10:05 PM

Share

ಬೆಂಗಳೂರು, ಸೆ.27: ವೈಯಾಲಿಕಾವಲ್​ನಲ್ಲಿ ನಡೆದ ಮಹಾಲಕ್ಷ್ಮೀಯ ಭೀಕರ ಕೊಲೆಯಿಂದ ಸಿಲಿಕಾನ್ ಸಿಟಿ ಮಂದಿ ಬೆಚ್ಚಿ ಬಿದ್ದಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ ಆತಂಕಕ್ಕೊಳಗಾಗಿರುವುದು ಬೆಂಗಳೂರಿನ(Bengaluru) ಮನೆ ಮಾಲೀಕರು. ಹೌದು, ಕೊಲೆ ಸುದ್ದಿ ಕೇಳಿದ ಮನೆ ಮಾಲೀಕರಿಗೆ ಢವಢವ ಶುರುವಾಗಿದ್ದು, ನಾವ್ ಬ್ಯಾಚುಲರ್​ಗಳಿಗೆ ಮನೆ ಕೊಡಲ್ಲ ಅಂತಿದ್ದಾರೆ. ಆಧಾರ್ ಕಾರ್ಡ್, ವೋಟಾರ್ ಐಡಿ ಕಾಪಿ ತಗೊಂಡರೂ ವೇಸ್ಟ್ ಆಗ್ಬಿಟ್ಟಿದ್ಯಂತೆ. ಬಾಡಿಗೆ ಮಾಲೀಕರಿಗೆ ಬಾಡಿಗೆದಾರರ ಮೂಲ ಹುಡುಕುವುದೇ ಕಷ್ಟ ಕಷ್ಟ ಎಂದು ಕೊರಗುತ್ತಿದ್ದಾರೆ.

ಇನ್ನು ಹೆಚ್ಚಿದ ಕ್ರೈಂ ಸಂಖ್ಯೆಯಿಂದ ಫುಲ್ ಟೆನ್ಷನ್ ಆಗಿರುವ ಮನೆ ಮಾಲೀಕರು, ಜಿಲ್ಲೆ ಹಾಗೂ ಹೊರರಾಜ್ಯದವರನ್ನ ಹೇಗೆ ನಂಬಿ ಬಾಡಿಗೆ ಕೊಡುವುದು ಎಂದು ಆಕ್ರೋಶ ಹೊರಹಾಕ್ತಿದ್ದಾರೆ. ಅದಲ್ಲದೇ, ಒಂದಷ್ಟು ಬೇಡಿಕೆಗಳನ್ನೂ ಪಟ್ಟಿ ಮಾಡ್ಕೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಮನೆ ಮಾಲೀಕರ ಬೇಡಿಕೆಗಳು?

01. ಆಧಾರ್ ಕಾರ್ಡ್ ಕೊಡದೇ ಕೆಲವರು ಕಳ್ಳಾಟ, ಕಡ್ಡಾಯ ಆಧಾರ್ ಕೊಡಬೇಕು 02. ಆಧಾರ್ ನಕಲಿಯೋ ಅಸಲಿಯೋ ತಿಳಿಯಲು ಹೆಲ್ಪ್ ಡೆಸ್ಕ್ ತೆರೆಯಲು ಒತ್ತಾಯ 03. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್, ವೋಟರ್ ಐಡಿ ಎಲ್ಲಾ ಕೊಡಬೇಕು 04. ಗಲ್ಲಿ ಗಲ್ಲಿಯಲ್ಲೂ ರೋಡ್ನಲ್ಲಿ ಸ್ಥಳೀಯ ಆಡಳಿತ ಸಿಸಿಟಿವಿ ಅಳವಡಿಸ ಬೇಕು 05. ಮನೆಯಲ್ಲಿ ಆರಂಭದಲ್ಲಿ ಎಷ್ಟು ಜನ ಇರುತ್ತಾರೋ ಅಷ್ಟೇ ಜನರು ಇರಬೇಕು 06. ಬಾಡಿಗೆ ಮನೆಯಲ್ಲಿ ಯಾವುದೇ ರೀತಿ ಪಾರ್ಟಿ ಮಾಡಲು ಅವಕಾಶ ಇರುವುದಿಲ್ಲ

ಒಟ್ಟಿನಲ್ಲಿ ಮಹಾಲಕ್ಷ್ಮೀ ಭೀಕರ ಕೊಲೆ ಬೆಂಗಳೂರಿನಲ್ಲಿ ಬಾಡಿಗೆ ಮನೆ ಕೊಡುವ ಮಾಲೀಕರ ಎದೆ ಬಡಿತ ಹೆಚ್ಚಿಸಿರುವುದಂತೂ ನಿಜಾ. ಆದರೆ, ಇದರಿಂದ ಮನೆ ಹುಡುಕುವ ಬ್ಯಾಚುಲರ್ಸ್​ಗಳಿಗೆ ಸಮಸ್ಯೆ ಆಗುತ್ತಿರುವುದಂತೂ ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್