AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ 3.46 ಲಕ್ಷ ಹೆಕ್ಟೇರ್​ನಲ್ಲಿದ್ದ ಬೆಳೆ ಹಾನಿ; ಕೃಷಿ ಸಚಿವ ಬಿಸಿ ಪಾಟೀಲ್

ಸಿಎಂ ಈಗಾಗಲೇ ಕೆಲವು ಕಡೆ ಭೇಟಿ ಮಾಡಿದ್ದಾರೆ. ನಾವು ಭೇಟಿ ಮಾಡುತ್ತೇವೆ. ಪ್ರತಿಪಕ್ಷಗಳ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ. ಜನಸ್ವರಾಜ್ ಯಾತ್ರೆ ಹಳೆಯದಾಯ್ತು. ಅದಕ್ಕಾಗಿ ನಾವು ಕೆಲಸ ಬಿಟ್ಟು ಪ್ರಚಾರ ಮಾಡುತ್ತಿಲ್ಲ ಅಂತ ತಿರುಗೇಟು ನೀಡಿದ್ದಾರೆ.

ನವೆಂಬರ್​ನಲ್ಲಿ 3.46 ಲಕ್ಷ ಹೆಕ್ಟೇರ್​ನಲ್ಲಿದ್ದ ಬೆಳೆ ಹಾನಿ; ಕೃಷಿ ಸಚಿವ ಬಿಸಿ ಪಾಟೀಲ್
ಬಿಸಿ ಪಾಟೀಲ್
TV9 Web
| Edited By: |

Updated on:Nov 24, 2021 | 4:09 PM

Share

ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದಾದ ನಷ್ಟ ಅಷ್ಟಿಷ್ಟಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅನ್ನದಾತನ ಪರಿಸ್ಥಿತಿ. ಕಂಗಾಲಾಗಿರುವ ರೈತರು ಪರಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೃಷಿ ಸಚಿವ ಬಿಸಿ ಪಾಟೀಲ್ (BC Patil), ಅಕಾಲಿಕ ಮಳೆಯಿಂದ ರೈತರ ಬೆಳೆ ಹಾಳಾಗಿದೆ. ನವೆಂಬರ್ನಲ್ಲಿ 3.46 ಲಕ್ಷ ಲಕ್ಷ ಹೆಕ್ಟೇರ್​ನಲ್ಲಿದ್ದ ಬೆಳೆ ಹಾನಿಯಾಗಿದೆ. ಜುಲೈನಿಂದ ಈವರೆಗೆ ಸುಮಾರು 10.76 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಶೀಘ್ರವೇ ಬೆಳೆ ಹಾನಿ ಬಗ್ಗೆ ವರದಿ ತಯಾರಿಸಲಾಗುವುದು. ವರದಿಯನ್ನು ಕೇಂದ್ರಕ್ಕೆ ಕಳಿಸಿ ಪರಿಹಾರಕ್ಕೆ ಮನವಿ ಮಾಡಲಾಗುತ್ತದೆ ಅಂತ ತಿಳಿಸಿದ್ದಾರೆ.

ನಾಳೆ (ನ.25) ಶಿಗ್ಗಾಂವ್, ಸವಣೂರಿಗೆ ಭೇಟಿ ನೀಡುತ್ತೇವೆ. ಈಗಾಗಲೇ ಹಾವೇರಿ ಜಿಲ್ಲೆಗೆ ಭೇಟಿ ಮಾಡಿದ್ದೇನೆ. ಉಳಿದ ಜಿಲ್ಲೆಗಳಿಗೆ ಭೇಟಿ ಮಾಡುತ್ತೇನೆ. ವರದಿ ಬಂದ ನಂತರ ಒಟ್ಟು ಎಷ್ಟು ಹಾನಿಯಾಗಿದೆ ಅಂತ ಹೇಳಬಹುದು ಎಂದು ತಿಳಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರು ಭೇಟಿ ನೀಡುತ್ತಿಲ್ಲವೆಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಪಕ್ಷ ಆರೋಪ ಮಾಡುವುದಕ್ಕೆ ಇರುವುದು. ಅದನ್ನು ಬಿಟ್ಟು ಬೇರೇನಿದೆ. ನಾವು ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ ಎಂದು ತಿಳಿಸಿದರು.

ಸಿಎಂ ಈಗಾಗಲೇ ಕೆಲವು ಕಡೆ ಭೇಟಿ ಮಾಡಿದ್ದಾರೆ. ನಾವು ಭೇಟಿ ಮಾಡುತ್ತೇವೆ. ಪ್ರತಿಪಕ್ಷಗಳ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ. ಜನಸ್ವರಾಜ್ ಯಾತ್ರೆ ಹಳೆಯದಾಯ್ತು. ಅದಕ್ಕಾಗಿ ನಾವು ಕೆಲಸ ಬಿಟ್ಟು ಪ್ರಚಾರ ಮಾಡುತ್ತಿಲ್ಲ ಅಂತ ತಿರುಗೇಟು ನೀಡಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಳೆಯಿಂದ ಬೆಳೆಹಾನಿಯಾಗಿದೆ. ಇದಕ್ಕೆ ನಾವು ಸಹಕರಿಸುತ್ತೇವೆ ಎಂದಿದ್ದಾರೆ. ಶೀಘ್ರದಲ್ಲೇ ನಾವು ವರದಿ ಕಳಿಸುತ್ತೇವೆ. ಕೇಂದ್ರದಿಂದ ಏನು ಪರಿಹಾರ ಬರಬೇಕು ಬರುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ ಸ್ಪರ್ಧೆ ವಿಚಾರದ ಕುರಿತು ಹೇಳಿಕೆ ನೀಡಿರುವ ಬಿಸಿ ಪಾಟೀಲ್, ಬಿಜೆಪಿ ಎಲ್ಲ ಅಳೆದು ತೂಗಿ ಅಭ್ಯರ್ಥಿ ಹಾಕಿರುತ್ತೇವೆ. ಪಕ್ಷ ಬಹಳ ಬಲಿಷ್ಠವಾಗಿದೆ. ಗ್ರಾಮ ಪಂಚಾಯತಿ ಬಹುತೇಕ ನಮ್ಮವೇ ಇವೆ. ಹೀಗಾಗಿ ಅಲ್ಲಿ ನಮಗೇನು ಸಮಸ್ಯೆಯಾಗಲ್ಲ ಅಂತ ತಿಳಿಸಿದರು.

ಇದನ್ನೂ ಓದಿ

ಹುಡುಗಿಯ ಬ್ರಾ ಸೈಜ್​, ಸೊಂಟದ ಅಳತೆ, ವಯಸ್ಸು ಇಷ್ಟೇ ಇರಬೇಕು! ವಧುವಿಗಾಗಿ ಹುಡುಕುತ್ತಿರುವ ಹುಡುಗನ ಬೇಡಿಕೆಯ ಮೆಟ್ರಿಮೊನಿಯಲ್ ಜಾಹಿರಾತು

Aadhaar Authentication: ಆಧಾರ್​ ಸಾರ್ವತ್ರಿಕ ದೃಢೀಕರಣಕ್ಕೆ ಸ್ಮಾರ್ಟ್​ಫೋನ್ ಬಳಕೆ ಬಗ್ಗೆ ಸುಳಿವು

Published On - 4:09 pm, Wed, 24 November 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ