AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್-ಬಿಜೆಪಿ ಕಿತ್ತಾಟಕ್ಕೆ ಕೋಟ್ಯಾಂತರ ರೂಪಾಯಿ ಪೋಲು; ಪಾಳುಬಿದ್ದ ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ

Puneeth Rajkumar Multispeciality Hospital: ಅದು ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಲೋಕಾರ್ಪಣೆ ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ರು. ಆದರೆ ಒಂದು ವರ್ಷವಾದ್ರು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಮಾತ್ರ ಸಿಗ್ತಿಲ್ಲ. ಕಾರಣ ಬಿಜೆಪಿ V/S ಕಾಂಗ್ರೆಸ್ ಕಿತ್ತಾಟ ಎಂಬ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್-ಬಿಜೆಪಿ ಕಿತ್ತಾಟಕ್ಕೆ ಕೋಟ್ಯಾಂತರ ರೂಪಾಯಿ ಪೋಲು; ಪಾಳುಬಿದ್ದ ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ
ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Jun 03, 2024 | 8:02 AM

Share

ಬೆಂಗಳೂರು, ಜೂನ್.03: ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Puneeth Rajkumar Multispeciality Hospital) ಹೆಸರಿಗಷ್ಟೇ ಆಸ್ಪತ್ರೆಯಾಗಿ ಉಳಿದಿದೆ. ಲೋಕಾರ್ಪಣೆಯಾಗಿ ಒಂದು ವರ್ಷ ಕಳೆದರೂ ಆಸ್ಪತ್ರೆ ಮಾತ್ರ ಇನ್ನೂ ಓಪನ್ ಆಗಿಲ್ಲ. ಬಡ ರೋಗಿಗಳಿಗೆ ಚಿಕಿತ್ಸೆಯೂ ಸಿಗ್ತಿಲ್ಲ. ಬಿಬಿಎಂಪಿಯಿಂದ (BBMP) ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ವಾರ್ಡ್ ನ ಪಂತರಪಾಳ್ಯದಲ್ಲಿ ಸುಮಾರು ಅಂದಾಜು 50 ಕೋಟಿ ರೂಪಾಯಿ ವೆಚ್ಚದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿಲಾಗಿದೆ.

2023 ಮಾರ್ಚ್​ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಯಿ ಮತ್ತು ಅಂದಿನ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ, ವಸತಿ ಸಚಿವ ವಿ.ಸೋಮಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ ಕುಮಾರ್ ಅವರು ಈ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ್ದರು. ಸದ್ಯ ಆಸ್ಪತ್ರೆಯಲ್ಲಿ ಎಸಿ ಫಿಟ್ಟಿಂಗ್ ಕೆಲಸದಿಂದ ಹೊರಭಾಗದಲ್ಲಿ ಆಸ್ಪತ್ರೆಯ ಮೇಲ್ಬಾಗದ ಗೋಡೆಗಳಲ್ಲಿ ಸಂಪೂರ್ಣ ಬಿರುಕು ಬಿಟ್ಟಿದೆ. ಕೂಡಲೇ ಆಸ್ಪತ್ರೆ ಓಪನ್ ಮಾಡಿ ಬಡ ರೋಗಿಗಳಿಗೆ ಸಹಾಯ ಮಾಡಿ ಎಂದು ಪುನೀತ್ ಅಭಿಮಾನಿ ಮುನಿಯಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಂಗಾರು ಮಳೆ ಆರ್ಭಟಕ್ಕೆ ಬೆಂಗಳೂರು ತತ್ತರ; ವರುಣನಿಂದ ಸೃಷ್ಟಿಯಾದ ಅವಾಂತರಗಳು ಒಂದಾ ಎರಡಾ

ಇನ್ನೂ ಆಸ್ಪತ್ರೆಯ ಸುತ್ತಮುತ್ತ ಕಸದ ವಾಸನೆ ಹರಡುತ್ತಿದೆ. ರಾತ್ರಿಯಾದ್ರೆ ಸಾಕು ಅಕ್ರಮದ ಅಡ್ಡೆ ಆಗ್ತಿದೆ ಅನ್ನೋ ಆರೋಪವಿದೆ‌‌. ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತರಾತುರಿಯಲ್ಲಿ ಈ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಕಾಮಗಾರಿ ತಡೆ ಹಿಡಿದಿರುವ ಆರೋಪದಿಂದ ಇನ್ನೂ ಆರರಿಂದ ಏಳು ತಿಂಗಳು ಕಾಮಗಾರಿ ಪೂರ್ಣವಾಗೊಲ್ಲ ಅಂತ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ನಲ್ಲಿ ಪುನೀತ್ ರಾಜ್​ಕುಮಾರ್ ಮಲ್ಟಿ ಆಸ್ಪತ್ರೆಯ ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ‌ಕಾಂಗ್ರೆಸ್ ಈ ಆಸ್ಪತ್ರೆಯನ್ನು ಓಪನ್ ಮಾಡ್ತಿಲ್ಲ ಅನ್ನೋ ಮಾತುಗಳನ್ನು ಸ್ಥಳೀಯ ನಿವಾಸಿಗಳು ಹೇಳ್ತಿದ್ದು ಕೂಡಲೇ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕಿದೆ‌. ಇಲ್ಲಾಂದ್ರೆ ಇಷ್ಟು ದೊಡ್ಡ ಆಸ್ಪತ್ರೆ ಪಾಳುಬಿದ್ದ ಕಟ್ಟಡವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ಆಸ್ಪತ್ರೆ ಯಾವ ಬಡ ರೋಗಿಗೂ ಅನುಕೂಲಕ್ಕೆ ಬರುವುದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ