AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಬೆಂಗಳೂರಿನ ವ್ಯಕ್ತಿಗೆ ಲಕ್ಷ ಲಕ್ಷ ಹಣ ಪಂಗನಾಮ

ಬೆಂಗಳೂರಿನ ವ್ಯಕ್ತಿಯೊಬ್ಬರು ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಇನ್‌ಸ್ಟಾಗ್ರಾಂ ಮತ್ತು ಟೆಲಿಗ್ರಾಂ ಮೂಲಕ ಪರಿಚಯವಾದ ಖದೀಮರು ಅಧಿಕ ಲಾಭದ ಆಮಿಷವೊಡ್ಡಿ ಹಣ ಹೂಡಿಸುವಂತೆ ಪ್ರೇರೇಪಿಸಿದ್ದರು. ಲಾಭಾಂಶ ನೀಡುವ ನೆಪದಲ್ಲಿ ಹೆಚ್ಚು ಹಣ ಹಾಕಿಸಿಕೊಂಡು, ಕೊನೆಗೆ ವಿವಿಧ ಶುಲ್ಕಗಳ ಹೆಸರಿನಲ್ಲಿ ವಂಚಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಬೆಂಗಳೂರಿನ ವ್ಯಕ್ತಿಗೆ ಲಕ್ಷ ಲಕ್ಷ ಹಣ ಪಂಗನಾಮ
ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ
ಪ್ರಸನ್ನ ಹೆಗಡೆ
|

Updated on: Nov 19, 2025 | 7:37 AM

Share

ಬೆಂಗಳೂರು, ನವೆಂಬರ್​ 19: ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಸೈಬರ್​ ವಂಚಕರು ಬೆಂಗಳೂರಿನ ವ್ಯಕ್ತಿಗೆ ಬರೋಬ್ಬರಿ 42 ಲಕ್ಷ ಪಂಗನಾಮ ಹಾಕಿದ್ದಾರೆ. ಅಧಿಕ ಲಾಭ ಸಿಗುವ ಆಸೆಯಿಂದ ಅಪರಿಚಿತ ವ್ಯಕ್ತಿ ನೀಡಿದ ಆಮಿಷ ನಂಬಿ ಹಣ ಹೂಡಿಕೆ ಮಾಡಿದ್ದಾತ ಈಗ ಇರುವ ಹಣವನ್ನೂ ಕಳೆದುಕೊಂಡಿದ್ದಾನೆ. ತಾನು ವಂಚನೆಗೆ ಒಳಗಾಗಿರುವ ಬಗ್ಗೆ ಅರಿವಾಗುತ್ತಿದ್ದಂತೆ ಆತ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

45 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಇನ್​​ಸ್ಟಾಗ್ರಾಂ ಮೂಲಕ ದೊರೆತಿದ್ದು, ಅಶುತೋಷ್ ಶರ್ಮಾ ಎಂಬ ವ್ಯಕ್ತಿ ಕ್ರಿಪ್ಟೋ ಹೂಡಿಕೆಗಳ ಕುರಿತು ಮಾರ್ಗದರ್ಶನ ನೀಡುತ್ತಿದ್ದ. ಬಳಿಕ ಇದಕ್ಕೆ ಸಂಬಂಧಿಸಿದ ಟೆಲಿಗ್ರಾಂ ಗುಂಪನ್ನೂ ವ್ಯಕ್ತಿಗೆ ಪರಿಚಯಿಸಿದ್ದ. ಹೂಡಿಕೆ ಹಣಕ್ಕೆ ಶೇ. 15ರಷ್ಟು ಲಾಭ ನೀಡುವ ಭರವಸೆ ಸಿಕ್ಕ ಹಿನ್ನಲೆ ಸ್ವಲ್ಪ ಹಣವನ್ನ ಸಂತ್ರಸ್ತ ಹೂಡಿಕೆ ಮಾಡಿದ್ದ. ಈ ವೇಳೆ ಲಾಭ ತನ್ನ ಖಾತೆಗೆ ಜಮಾ ಆಗುತ್ತಿದ್ದ ಕಾರಣ ಆತ ಸೈಬರ್​ ಖದೀಮರನ್ನು ಮತ್ತಷ್ಟು ನಂಬಿದ್ದ. ಇನ್ನೂ ಹಣ ಹೂಡಿಕೆ ಮಾಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳೂ ವಶಕ್ಕೆ

ವ್ಯಕ್ತಿಯ ಟ್ರೇಡಿಂಗ್​ ಖಾತೆಯಲ್ಲಿ 138,687.22 USDT ಬ್ಯಾಲೆನ್ಸ್​ ತೋರಿಸುತ್ತಿತ್ತು. ಆದರೆ ಆ ಹಣವನ್ನು ಪಡೆಯಲು ಪ್ರಯತ್ನಿಸಿದಾಗ, ಆಪರೇಟರ್‌ಗಳು ಬ್ಯಾಂಕ್ ವಿವರಗಳು ತಪ್ಪಾಗಿದೆ ಎಂದು ಹೇಳಿದ್ದರು. ಅಲ್ಲದೆ ಅದನ್ನು ಸರಿಪಡಿಸಲು 4 ಲಕ್ಷ ಪಾವತಿಸಬೇಕೆಂದು ತಿಳಿಸಿದ್ದರು. ಬಳಿಕ ತಡ ಪಾವತಿ ದಂಡ, ಕರೆನ್ಸಿ ಪರಿವರ್ತನೆ ಶುಲ್ಕ ಮತ್ತು RBI ತೆರಿಗೆ ಹೆಸರಿನಲ್ಲಿ ಇನ್ನಷ್ಟು ಹಣ ಬೇಡಿಕೆ ಇಟ್ಟಿದರು. ಹೀಗಾಗಿ ತಾನು ಗಳಿಸಿದ್ದೇನೆಂದು ನಂಬಿದ್ದ ಹಣವನ್ನು ಪಡೆಯಲು ಹಾತೊರೆಯುತ್ತಿದ್ದ ವ್ಯಕ್ತಿ, ಡಿಜಿಟಲ್ ಸಾಲದಾತರಿಂದ ಹಾಗೂ ಸ್ನೇಹಿತರಿಂದ ಹಣ ಪಡೆದು ಅನೇಕ ಬಾರಿ ಆರೋಪಿಗಳ ವಿವಿಧ ಖಾತೆಗಳಿಗೆ ಹಣ ವರ್ಗಾಯಿಸಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಜುಲೈ 3ರಿಂದ ಆಗಸ್ಟ್ 1ರವರೆಗೆ ಒಟ್ಟು 42.62 ಲಕ್ಷ ರೂ. ಹಣವನ್ನು ದೂರುದಾರ ವ್ಯಕ್ತಿ ಪಾವತಿಸಿದ್ದರೂ ಆತ ಗಳಿಸಿದ್ದಾನೆ ಎನ್ನಲಾದ ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ಈ ವೇಳೆಗೆ ಇದು ವಂಚನೆ ಎಂದು ಆತನಿಗೆ ಜ್ಞಾನೋದಯವಾಗಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ಹಣ ವಾಪಸ್​​ ಕೊಡಿಸಿ ಎಂದು ಪೊಲೀಸರ ಮೊರೆ ಹೋಗಿದ್ದಾನೆ. ಸಂತ್ರಸ್ತ ನೀಡಿದ ದೂರಿನ ಅನ್​ವಯ ಕ್ರಿಪ್ಟೋ ವಾಲೆಟ್ ವಿವರಗಳು, ಫೋನ್ ಸಂಖ್ಯೆಗಳು ಹಾಗೂ ಅನುಮಾನಾಸ್ಪದ ವೆಬ್ ಡೊಮೇನ್​​ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ಹಿಂದೂಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್