ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ

ಟ್ವೀಟ್ ಮೂಲಕ ಮನವಿ ಮಾಡಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ’ ಕ್ಯಾಂಟೀನ್ ಎಂದು ಬದಲಿಸಲು ತಿಳಿಸಿದ್ದಾರೆ. ಶೀಘ್ರದಲ್ಲೇ ಕ್ಯಾಂಟೀನ್ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ
ಸಿಟಿ ರವಿ
Edited By: sandhya thejappa

Updated on: Aug 07, 2021 | 12:41 PM

ಬೆಂಗಳೂರು: ಬಡವರ ಹಸಿವು ನೀಗಿಸಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ತೆರೆಯಲಾಗಿತ್ತು. ಈ ಕ್ಯಾಂಟೀನ್ ಬಡವರಿಗೆ, ನಿರ್ಗತಕರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಕ್ಯಾಂಟೀನ್​ಗೆ ಇಡಲಾಗಿದೆ. ಆದರೆ ಈ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T Ravi) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಮನವಿ ಮಾಡಿದ್ದಾರೆ.

ಟ್ವೀಟ್ ಮೂಲಕ ಮನವಿ ಮಾಡಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ’ ಕ್ಯಾಂಟೀನ್ ಎಂದು ಬದಲಿಸಲು ತಿಳಿಸಿದ್ದಾರೆ. ಶೀಘ್ರದಲ್ಲೇ ಕ್ಯಾಂಟೀನ್ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿದ್ದಾರೆ.


ಗಂಭೀರ ಆರೋಪ ಮಾಡಿದ್ದ ಸಿ.ಟಿ.ರವಿ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಈ ಹಿಂದೆ ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗುತ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ ಮಾಡಿದ್ದಾರೆ ಅಂತ ಗೊತ್ತಿದೆ ಎಂದು ಕಿಡಿಕಾರಿದ್ದರು.

2019ರಲ್ಲೇ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಸಿ.ಟಿ.ರವಿ ಆಗ್ರಹಿಸಿದ್ದರು. ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗುತ್ತಿದೆ. ಹಾಗಾಗಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತ ಹೆಸರಿಡಲಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ

Karnataka Cabinet: 29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದ್ರೆ ಕಠಿಣ ಕ್ರಮ; ಕಮಲ್ ಪಂತ್ ವಾರ್ನಿಂಗ್

(CT Ravi has appealed to CM Bommai to change the name of Indira Canteen)

Web contact

TV9 Kannada

Read More
Follow Us