ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ, ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ

ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದೆ. ಈ ಹಿನ್ನೆಲೆ ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಸಿ.ಟಿ.ರವಿ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ. ಜಿಎಸ್​ಟಿ ಜೊತೆ YST ತಂದ್ರಿ, ಜೊತೆಗೆ ಡಿಕೆ ಟ್ಯಾಕ್ಸ್​ ಕೂಡ ಇದೆ.

ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ, ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ
ಸಿ.ಟಿ.ರವಿ
Follow us
| Updated By: ಆಯೇಷಾ ಬಾನು

Updated on: Jun 17, 2024 | 12:41 PM

ಬೆಂಗಳೂರು, ಜೂನ್.17: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ (Petrol Diesel Rate) ವಿಚಾರಕ್ಕೆ ಸಂಬಂಧಿಸಿ ಬಕ್ರೀದ್ (Bakrid) ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ತೈಲ ಬೆಲೆ ಹೆಚ್ಚಿಸಿದ ಸರ್ಕಾರದ ನಡೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಕ್ತದ ರುಚಿ ನೋಡಿದ ಹುಲಿ ಮತ್ತೆ ಮತ್ತೆ ಅದನ್ನೇ ಬಯಸುತ್ತದೆ. ಆಡಳಿತಕ್ಕೆ ಬಂದ ಕೂಡಲೇ ಗೋಸುಂಬೆ ಕೂಡ ನಾಚುವ ರೀತಿ ಬೆಲೆ ಏರಿಸಿ ಕೇಂದ್ರ ಕಡೆ ಬೊಟ್ಟು ಮಾಡಿದ್ದೀರಿ ಮುಖ್ಯಮಂತ್ರಿಗಳೇ? ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ. ಜಿಎಸ್​ಟಿ ಜೊತೆ YST ತಂದ್ರಿ, ಜೊತೆಗೆ ಡಿಕೆ ಟ್ಯಾಕ್ಸ್​ ಕೂಡ ಇದೆ. ನಿಮ್ಮದು ನಾಲಗೆಯಾ ಏನೂ ಅಂತಾ ಪ್ರಶ್ನೆ ಮಾಡಬೇಕಾಗುತ್ತೆ. ನಿಮ್ಮದು ನಾಲಿಗೆ ಅಲ್ಲ ಎಕ್ಕಡಕ್ಕಿಂತ ಕಡೆ ಅಂತಾ ಜನ ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್​ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್ ಗಾಂಧಿಗೆ ಹೋಗುತ್ತಿದೆ

ಕಾಂಗ್ರೆಸ್​ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ತಾರೆ ಅಂದುಕೊಂಡಿದ್ವಿ. ಆದ್ರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ. ಚೊಂಬು ಆದರೂ ಯಾವುದಕ್ಕಾದರೂ ಉಪಯೋಗಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್ ನಾಯಕರು ಕೊಡುವುದು ಹಳೆಯ ಚಿಪ್ಪು. ಚಿಪ್ಪು ಕೂಡ ಮೂರು ತೂತು, ಇವರ ಸರ್ಕಾರವೂ ತೂತು. ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್ ಗಾಂಧಿಗೆ ಹೋಗುತ್ತಿದೆ. ಬೆಲೆ ಇಳಿಸಬೇಕು ಇಲ್ಲಾ ಅವರೇ ಇಳಿಯಬೇಕು. ಇಳಿಯದಿದ್ದರೆ ಹೇಗೆ ಇಳಿಸಬೇಕು ಅಂತಾ ನಮಗೆ ಗೊತ್ತಿದೆ. ನುಂಗಣ್ಣ, ನುಂಗಣ್ಣ ಅಂತಾ ನುಂಗುವ ಕೆಲಸ ಒಂದೇ ಮಾಡ್ತಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದರು.

ಇದನ್ನೂ ಓದಿ: ‘ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಆಗಲಿ’; ಉಪೇಂದ್ರ ಮನವಿ

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅದಕ್ಕೂ ಮುನ್ನ ವಿಪಕ್ಷ ನಾಯಕ ಆರ್. ಎತ್ತಿನ ಬಂಡಿಯಲ್ಲಿ ಮೆರವಣಿಗೆ ನಡೆಸಿದ್ರು. ಸರ್ಕಾರ ನಿಗದಿ ಮಾಡಿರೋ ದರಕ್ಕೆ ವಾಹನಗಳನ್ನ ಬಳಸೋಕೆ ಆಗಲ್ಲ ಎಂಬ ಸಂದೇಶವನ್ನ ಘಂಟಾಘೋಷವಾಗಿ ಕೊಟ್ಟುಬಿಟ್ರು. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಕೇಸರಿ ಕಲಿಗಳು ಹೋರಾಟ ನಡೆಸಿದ್ರೆ.. ಇದೇ ಫ್ರೀಡಂ ಪಾರ್ಕ್​ನಲ್ಲಿ ಅಣಕು ಶವಯಾತ್ರೆಯನ್ನೂ ಮಾಡಲಾಯ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ