AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಅತಿ ದೊಡ್ಡ ಕಬ್ಬನ್ ಪಾರ್ಕ್ ಸೆಂಟ್ರಲ್ ಲೈಬ್ರರಿಗೆ ಅನುದಾನ ಕೊರತೆ; ನಿರ್ವಹಣೆಗೆ ಪರದಾಡುತ್ತಿರುವ ಅಧಿಕಾರಿಗಳು

ರಾಜ್ಯದ ಅತಿ ದೊಡ್ಡ ಗ್ರಂಥಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಸೆಂಟ್ರಲ್ ಲೈಬ್ರೆರಿಗೆ ಅನುದಾನದ ಕೊರತೆ ಎದುರಾಗಿದೆ. ಗ್ರಂಥಾಲಯ ನಿರ್ವಹಣೆಗೆಂದೇ ರಾಜ್ಯ ಗ್ರಂಥಾಲಯ ಇಲಾಖೆಯಿಂದ 24 ಕೋಟಿಯಷ್ಟು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.‌ ಆದರೆ ಸರ್ಕಾರದಿಂದ ಕೇವಲ 10 ಕೋಟಿಯಷ್ಟು ಹಣವನ್ನ ಮಾತ್ರ ಘೋಷಣೆ ಮಾಡಿದ್ದು, ಅದ್ರಲ್ಲಿ 7ಕೋಟಿಯಷ್ಟು ಹಣ ಮಾತ್ರ ಬಿಡುಗಡೆಯಾಗಿದೆ.‌

ರಾಜ್ಯದ ಅತಿ ದೊಡ್ಡ ಕಬ್ಬನ್ ಪಾರ್ಕ್ ಸೆಂಟ್ರಲ್ ಲೈಬ್ರರಿಗೆ ಅನುದಾನ ಕೊರತೆ; ನಿರ್ವಹಣೆಗೆ ಪರದಾಡುತ್ತಿರುವ ಅಧಿಕಾರಿಗಳು
ಕಬ್ಬನ್ ಪಾರ್ಕ್ ಸೆಂಟ್ರಲ್ ಲೈಬ್ರರಿ
Poornima Agali Nagaraj
| Updated By: ಆಯೇಷಾ ಬಾನು|

Updated on: Feb 06, 2024 | 11:42 AM

Share

ಬೆಂಗಳೂರು, ಫೆ.06: ಕಬ್ಬನ್ ಪಾರ್ಕ್ ನಲ್ಲಿರುವ ಸೆಂಟ್ರಲ್ ಲೈಬ್ರೆರಿಗೆ (Cubbon Park Central Library) ಲಕ್ಷಾಂತರ ಮಂದಿ ಭೇಟಿ ನೀಡಿ ಜ್ಞಾನ ವೃದ್ಧಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಲೈಬ್ರೆರಿಗೆ ಸರ್ಕಾರ ಅನುಧಾನ ಕಡಿಮೆ ಬಿಡುಗಡೆ ಮಾಡಿದೆ. ಈ ಕಾರಣದಿಂದ ನಿಗಧಿತ ಪುಸ್ತಕಗಳನ್ನ ಖರೀದಿ ಮಾಡಲು ಸಮಸ್ಯೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌ ರಾಜಧಾನಿ ಬೆಂಗಳೂರಿನಲ್ಲಿ ಸೆಂಟ್ರಲ್ ಲೈಬ್ರೆರಿ ಅಂದ್ರೆ ತುಂಬಾ ಫೇಮಸ್. ಯಾಕಂದ್ರೆ ಇಲ್ಲಿ ಭಾರತ ರಚನೆಯಾದ ಸಂದರ್ಭದಲ್ಲಿದ್ದ ಲೇಖಕರಿಂದ ಹಿಡಿದು, ಲೇಟೆಸ್ಟ್ ಯುವ ಲೇಖಕರ ಪುಸ್ತಕಗಳು ಇಲ್ಲಿ ಸಿಗುತ್ತವೆ.‌ ಅಲ್ಲದೇ ಯಾವುದೇ ಪುಸ್ತಕಗಳು ಹೊಸದಾಗಿ ಬಂದ್ರೆ ಮೊದಲ ಪ್ರತಿಗಳು ಈ ಲೈಬ್ರೆರಿಯಲ್ಲಿಯೇ ಸಿಗುತ್ವೆ. ಆದರೆ ಇತ್ತೀಚೆಗೆ ಈ ಗ್ರಂಥಾಲಯಕ್ಕೆ ಹಣ ಬಿಡುಗಡೆ ಮಾಡದ ಹಿನ್ನೆಲೆ ಗ್ರಂಥಾಲಯಗಳ ನಿರ್ವಹಣೆಯೇ ಕಷ್ಟವಾಗಿ ಹೋಗಿದೆ.

ಗ್ರಂಥಾಲಯ ನಿರ್ವಹಣೆಗೆಂದೇ ರಾಜ್ಯ ಗ್ರಂಥಾಲಯ ಇಲಾಖೆಯಿಂದ 24 ಕೋಟಿಯಷ್ಟು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.‌ ಆದರೆ ಸರ್ಕಾರದಿಂದ ಕೇವಲ 10 ಕೋಟಿಯಷ್ಟು ಹಣವನ್ನ ಮಾತ್ರ ಘೋಷಣೆ ಮಾಡಿದ್ದು, ಅದ್ರಲ್ಲಿ 7ಕೋಟಿಯಷ್ಟು ಹಣ ಮಾತ್ರ ಬಿಡುಗಡೆಯಾಗಿದೆ.‌ ಹೀಗಾಗಿ ಮೂರು ವರ್ಷಗಳಿಂದ ಗ್ರಂಥಾಲಯದಲ್ಲಿ ಯಾವುದೇ ಹೊಸ ಪುಸ್ತಕಗಳನ್ನ ಖರೀದಿಸುವಲ್ಲಿ ತಡವಾಗುತ್ತಿದೆ. ಇದರ ಜೊತೆಗೆ ಗ್ರಂಥಾಲಯಕ್ಕೆ ಬರಬೇಕಾದ ಕರವನ್ನ ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದು, ಅದು ಕೂಡ ಸಮಸ್ಯೆಯಾಗುತ್ತಿದೆ. ಇದರಿಂದ ಓದುಗರಿಗೆ ಅಗತ್ಯ ಪುಸ್ತಕಗಳು ತಕ್ಷಣಕ್ಕೆ ಸಿಗುತ್ತಿಲ್ಲ.

ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರಿಗಾಗಿ ವಾರ್ಷಿಕ ಬಜೆಟ್‌ ಮಂಡನೆ: ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ ಬಿಬಿಎಂಪಿ

ಇನ್ನು, ಸೆಸ್ ವಿಚಾರ ಸಂಬಂಧ ಬಿಬಿಎಂಪಿ ಅಧಿಕಾರಿಗಳನ್ನ ಪ್ರಶ್ನಿಸಿದ್ದಕ್ಕೆ ಗ್ರಂಥಾಲಯಕ್ಕೆ 638 ಕೋಟಿ ರೂ ಬಾಕಿ ಉಳಿದಿದ್ದು, ಈ ವರ್ಷ 64 ಕೋಟಿ ಹಣವನ್ನ ಸಧ್ಯ ಪಾವತಿಸಿದ್ದೇವೆ.‌ ಮುಂದಿನ ದಿನಗಳಲ್ಲಿ ಈ ಹಣವನ್ನ ಪಾವತಿಮಾಡಲಾಗುತ್ತೆ ಅಂತ ಮಾಹಿತಿ ನೀಡಿದ್ದಾರೆ.ಒಟ್ನಲ್ಲಿ, ಸಾರ್ವಜನಿಕ ಗ್ರಂಥಾಲಯದಲ್ಲಿ ಓದುಗರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸರ್ಕಾರ ಹೆಚ್ಚಿನ ಅನುಧಾನ ಹಾಗೂ ಬಿಬಿಎಂಪಿ ನಿಗದಿನ ಸೆಸ್ ನೀಡಿದ್ದೇ ಆಗಿದ್ದಲ್ಲಿ ಓದುಗರಿಗೆ ಹೆಚ್ಚು ಉಪಯೋಗವಾಗುವುದು ಮಾತ್ರ ಸತ್ಯ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!