AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

One8 Commune Pub: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್, ಕಾರಣವೇನು?

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲಿಕತ್ವದ ಒನ್ 8 ಕಮ್ಯೂನ್ ಪಬ್​​ ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿದೆ. ಒನ್ 8 ಕಮ್ಯೂನ್ ಒಂದೇ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೂ ಪ್ರಕರಣ ದಾಖಲಾಗಿದೆ.

One8 Commune Pub: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್, ಕಾರಣವೇನು?
ಒನ್ 8 ಕಮ್ಯೂನ್ ಪಬ್
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Jul 09, 2024 | 9:18 AM

Share

ಬೆಂಗಳೂರು, ಜುಲೈ.09: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ (One8 Commune Pub) ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿದೆ.

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ 27 ವೈದ್ಯಕೀಯ ಕಾಲೇಜುಗಳಲ್ಲಿಲ್ಲ ಮೂಲಸೌಕರ್ಯ: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಬಿತ್ತು ಭಾರಿ ದಂಡ

ಇನ್ನು ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಪಬ್​​ನಲ್ಲಿ ಗ್ರಾಹಕರು ಇದ್ದರು. ನಿಯಮ ಉಲ್ಲಂಘಿಸಿ ರಾತ್ರಿ ಅವಧಿಗೂ ಮೀರಿ ಪಬ್ ಓಪನ್​​​ ಮಾಡಿದ ಹಿನ್ನೆಲೆ ಎಫ್​ಐಆರ್ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ‌ ಶೇಖರ್ ಹೆಚ್.ಟಿ. ಪ್ರತಿಕ್ರಿಯೆ ನೀಡಿದ್ದು ಸರ್ಕಾರ ನಿಗದಿ ಪಡಿಸಿದ ಅವಧಿ ಉಲ್ಲಂಘಿಸಿ ಗ್ರಾಹಕರಿಗೆ ಅವಕಾಶ ಮಾಡಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಒನ್ 8 ಕಮ್ಯೂನ್ ಮಾತ್ರವಲ್ಲದೆ ಅವಧಿ ಮೀರಿ ವಹಿವಾಟು ನಡೆಸುತ್ತಿದ್ದ ಕೇಂದ್ರ ವಿಭಾಗದ ಇನ್ನೂ ಕೆಲ ರೆಸ್ಟೋರೆಂಟ್ ಹಾಗೂ ಪಬ್ ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD