AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್, ರ್‍ಯಾಪಿಡೊ ಕಂಪನಿಗಳಿಗೆ ಕಡಿವಾಣ ಹಾಕಿ: ಕಾನೂನು ಪ್ರಾಧಿಕಾರಕ್ಕೆ ಆಟೊ ಚಾಲಕರ ಮನವಿ

ಕಾನೂನುಬಾಹಿರವಾಗಿ ಓಡಿಸುತ್ತಿರುವ ಇಂಥ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಆಟೊ ಯೂನಿಯನ್ ಕೋರಿದೆ.

ಓಲಾ, ಊಬರ್, ರ್‍ಯಾಪಿಡೊ ಕಂಪನಿಗಳಿಗೆ ಕಡಿವಾಣ ಹಾಕಿ: ಕಾನೂನು ಪ್ರಾಧಿಕಾರಕ್ಕೆ ಆಟೊ ಚಾಲಕರ ಮನವಿ
ಆಟೊ ಚಾಲಕರು (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 02, 2022 | 10:20 AM

Share

ಬೆಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಓಲಾ (Ola), ಊಬರ್ (Uber), ರ್‍ಯಾಪಿಡೊದಂಥ (Rapido) ಅಗ್ರಿಗೇಟರ್​ಗಳಿಗೆ ಕಡಿವಾಣ ಹಾಕಬೇಕು ಎಂದು ಆಟೊ ಚಾಲಕರ ಸಂಘಟನೆಯು ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರಕ್ಕೆ ಮನವಿ ಮಾಡಿದೆ. ಈ ಕುರಿತು ಲಿಖಿತ ದೂರು ನೀಡಿರುವ ಆದರ್ಶ ಆಟೋ ಯೂನಿಯನ್, ಓಲಾ, ಊಬರ್ ಹಾಗೂ ರ್‍ಯಾಪಿಡೊ ಕಂಪನಿಗಳು ವೈಟ್ ಬೋರ್ಡ್ ಇರುವ ಆಟೊ, ಬೈಕ್ ಹಾಗೂ ಕ್ಯಾಬ್ ಓಡಿಸಲು ಅವಕಾಶ ನೀಡುತ್ತಿವೆ. ಇದರಿಂದ ಸರ್ಕಾರಕ್ಕೆ ಟ್ಯಾಕ್ಸ್ ಕಟ್ಟಿ ಚಾಲನೆ ಮಾಡುತ್ತಿರುವ ಯೆಲ್ಲೋ ಬೋರ್ಡ್ ಆಟೊ ಚಾಲಕರಿಗೆ ನಷ್ಟವಾಗುತ್ತಿದೆ ಎಂದು ವಿನಂತಿಸಿದೆ.

ಕಾನೂನುಬಾಹಿರವಾಗಿ ಓಡಿಸುತ್ತಿರುವ ಇಂಥ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಆಟೊ ಯೂನಿಯನ್ ಕೋರಿದೆ. ಈ ದೂರು ಆಧರಿಸಿ, ಕ್ರಮ ಜರುಗಿಸುವಂತೆ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸೂಚನೆ ನೀಡಿದೆ.

ಇದನ್ನೂ ಓದಿ: ಓಲಾ, ಓಬರ್ ಆಟೊ ರೈಡ್​ಗೆ ಶೇ 5 ತೆರಿಗೆ: ಸಾರಿಗೆ ಇಲಾಖೆ ನಿರ್ಧಾರದ ಬಗ್ಗೆ ಆಟೊ ಚಾಲಕರ ಅಸಮಾಧಾನ

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ

ಓಲಾ, ಊಬರ್ ಆಟೊಗಳಿಗೆ ಸಾರಿಗೆ ಇಲಾಖೆಯು ಕನಿಷ್ಠ ದರ ನಿಗದಿಪಡಿಸಿದೆ. ಅಸ್ತಿತ್ವದಲ್ಲಿರುವ ಕನಿಷ್ಠ ದರಕ್ಕೆ ಶೇ 5ರಷ್ಟು ದರ ಹೆಚ್ಚಿಸಲು ಹಾಗೂ ಹೆಚ್ಚುವರಿಯಾಗಿ ಶೇ 5ರಷ್ಟು ಜಿಎಸ್​ಟಿ ವಸೂಲು ಮಾಡಲು ಸಾರಿಗೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ಈ ಮೊದಲು ಅಸ್ತಿತ್ವದಲ್ಲಿರುವ ದರಗಳ ಮೇಲೆ ಈ ಹೆಚ್ಚಳವು ಚಾಲ್ತಿಗೆ ಬರಲಿದೆ ಎಂದು ಸಾರಿಗೆ ಇಲಾಖೆ ಹೇಳಿದೆ. ಹೈಕೋರ್ಟ್​ಗೆ ಸಾರಿಗೆ ಇಲಾಖೆಯು ಈ ಕುರಿತು ಮಾಹಿತಿ ನೀಡಿದ್ದು, ಅಂತಿಮ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಮೂರೂ ಕಂಪನಿಗಳು, ಆಟೋ ಸಂಘಟನೆಗಳು ‌ಹಾಗೂ ಪ್ರಯಾಣಿಕರ ಜೊತೆ ಸಭೆ ನಡೆಸಿ ನ್ಯಾಯಯುತ ದರ ನಿಗದಿ ಪಡಿಸಬೇಕು. ನಂತರ ಈ ಕುರಿತ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದರು. ಆದರೆ ಸಾರಿಗೆ ಇಲಾಖೆಯು ಸಮರ್ಪಕವಾಗಿ ಸಭೆ ನಡೆಸಿರಲಿಲ್ಲ ಎಂದು ಆಟೊ ಚಾಲಕರು ಮತ್ತು ಮಾಲೀಕರ ಸಂಘಟನೆಗಳು, ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಾರಿಗೆ ಇಲಾಖೆಯು ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದೂ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಹೈಕೋರ್ಟ್ ಸೂಚನೆಯಂತೆ ಈ ಕಂಪನಿಗಳು ಕನಿಷ್ಠ ಪ್ರಯಾಣ ದರ ಪಡೆಯುತ್ತಿವೆ. ಹೈಕೋರ್ಟ್ ಆಂತಿಮ ಆದೇಶವನ್ನು ಎಲ್ಲರೂ ಕಾತರದಿಂದ ನಿರೀಕ್ಷಿಸುತ್ತಿದ್ದಾರೆ.

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 2 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ