AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ. ಸುಲಿಗೆ

ಬೆಂಗಳೂರಿನ 56 ವರ್ಷದ ಉದ್ಯಮಿಯೊಬ್ಬರು ನಕಲಿ ಅಧಿಕಾರಿಗಳಿಂದ 1.32 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಮನಿ ಲಾಂಡರಿಂಗ್ ಮತ್ತು ಅಶ್ಲೀಲ ವಿಡಿಯೋಗಳ ಆರೋಪದಡಿ ತನಿಖೆ ನೆಪದಲ್ಲಿ ಕರೆ ಮಾಡಿದ್ದ ನಕಲಿ ಅಧಿಕಾರಿಗಳು, ಹಣ ವರ್ಗಾಯಿಸಿಕೊಂಡು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆಗೆ ಒಳಗಾದ ಉದ್ಯಮಿ ನೀಡಿರುವ ದೂರಿನ ಅನ್ವಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ.  ಸುಲಿಗೆ
ಸೈಬರ್​ ವಂಚನೆ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 29, 2025 | 12:41 PM

Share

ಬೆಂಗಳೂರು, ಅಕ್ಟೋಬರ್​ 29: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ (Cyber Fraud) ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56 ವರ್ಷದ ಉದ್ಯಮಿ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಬೆಂಬಲ ನೀಡಿರುವ ಮತ್ತು ಉಗ್ರ ಚಟುವಟಿಕೆಗಳಿಗೆ ಹಣ ನೀಡಿರುವ ಆರೋಪ ಇದೆ ಎನ್ನಲಾಗಿದೆ.

ಮುಂಬೈ ಪೊಲೀಸ್‌ನ ಎನ್‌ಫೋರ್ಸ್ ಡಿಪಾರ್ಟ್‌ಮೆಂಟ್ ಹೆಸರು ಹೇಳಿ ಉದ್ಯಮಿಗೆ ಕರೆ ಮಾಡಿರುವ ಆರೋಪಿ, ಮನಿ ಲಾಂಡರಿಂಗ್​ ಮತ್ತು ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮ್ಮ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಓಂ ಅಬ್ದುಲ್ ಸಲಾಂ ಎಂಬ ವ್ಯಕ್ತಿಯ ಮನೆಯಲ್ಲಿ ದಾಳಿ ನಡೆಸಿದಾಗ ನಿಮ್ಮ ಹೆಸರಿನ ಕೆನರಾ ಬ್ಯಾಂಕ್ ಡೆಬಿಟ್ ಕಾರ್ಡ್ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದಿಂದ ನೀವು ಹೊರಬರಬೇಕು ಎಂದರೆ ಹೇಳಿದ ಖಾತೆಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಪರಿಶೀಲನೆ ಬಳಿಕ ಅದನ್ನು ಹಿಂತಿರುಗಿಸುವ ಭರವಸೆ ನೀಡಿದ್ದು, ಹಣ ನೀಡದೆ ಹೋದರೆ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಹೆಜ್ಜೆಯಿಟ್ಟ ಸರ್ಕಾರ: ಸೈಬರ್ ಕಮಾಂಡ್ ಸೆಂಟರ್ ಆರಂಭ

ಇಷ್ಟೇ ಅಲ್ಲದೆ ಇದು ರಹಸ್ಯ ವಿಚಾರವಾಗಿದ್ದು, ಇದನ್ನು ಪತ್ನಿಗೂ ಸೇರಿ ಯಾರ ಜೊತೆಯೂ ಹಂಚಿಕೊಳ್ಳಬಾರದು. ಒಂದೊಮ್ಮೆ ವಿಷಯ ಹೊರಗಡೆ ಹೋದರೆ ನಿಮ್ಮನ್ನು ಬಂಧಿಸಲಾಗುವುದು ಎಂದುಹೆದರಿಸಲಾಗಿದೆ. ಇದರಿಂದಾಗಿ ಗಾಬರಿಗೊಂಡ ಉದ್ಯಮಿ, ಯಾರಿಗೂ ವಿಷಯ ತಿಳಿಸಿಲ್ಲ. ಜೊತೆಗೆ ತನ್ನ ಬ್ಯಾಂಕ್​ ಖಾತೆಯಲ್ಲಿದ್ದ ಹಣವನ್ನು ಆರ್‌ಟಿಜಿಎಸ್ ಮೂಲಕ ಆರೋಪಿ ಹೇಳಿದ್ದ ಅಕೌಂಟ್​ಗೆ ವರ್ಗಾಯಿಸಿದ್ದಾರೆ. ಅಕ್ಟೋಬರ್ 8ರಿಂದ 16ರ ನಡುವೆ ಒಟ್ಟು ಆರು ಬಾರಿ ಆರೋಪಿಗೆ ಉದ್ಯಮಿ ಹಣ ವರ್ಗಾಯಿಸಿದ್ದು, ಒಟ್ಟು 1.32 ಕೋಟಿ ರೂ. ನೀಡಿದ್ದಾರೆ. ಹಣ ಪಡೆದ ವಂಚಕ ಮತ್ತೆ ಸಂಪರ್ಕಕ್ಕೆ ಸಿಗದ ಕಾರಣ ಉದ್ಯಮಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್