AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ. ಸುಲಿಗೆ

ಬೆಂಗಳೂರಿನ 56 ವರ್ಷದ ಉದ್ಯಮಿಯೊಬ್ಬರು ನಕಲಿ ಅಧಿಕಾರಿಗಳಿಂದ 1.32 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಮನಿ ಲಾಂಡರಿಂಗ್ ಮತ್ತು ಅಶ್ಲೀಲ ವಿಡಿಯೋಗಳ ಆರೋಪದಡಿ ತನಿಖೆ ನೆಪದಲ್ಲಿ ಕರೆ ಮಾಡಿದ್ದ ನಕಲಿ ಅಧಿಕಾರಿಗಳು, ಹಣ ವರ್ಗಾಯಿಸಿಕೊಂಡು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆಗೆ ಒಳಗಾದ ಉದ್ಯಮಿ ನೀಡಿರುವ ದೂರಿನ ಅನ್ವಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ.  ಸುಲಿಗೆ
ಸೈಬರ್​ ವಂಚನೆ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 29, 2025 | 12:41 PM

Share

ಬೆಂಗಳೂರು, ಅಕ್ಟೋಬರ್​ 29: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ (Cyber Fraud) ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56 ವರ್ಷದ ಉದ್ಯಮಿ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಬೆಂಬಲ ನೀಡಿರುವ ಮತ್ತು ಉಗ್ರ ಚಟುವಟಿಕೆಗಳಿಗೆ ಹಣ ನೀಡಿರುವ ಆರೋಪ ಇದೆ ಎನ್ನಲಾಗಿದೆ.

ಮುಂಬೈ ಪೊಲೀಸ್‌ನ ಎನ್‌ಫೋರ್ಸ್ ಡಿಪಾರ್ಟ್‌ಮೆಂಟ್ ಹೆಸರು ಹೇಳಿ ಉದ್ಯಮಿಗೆ ಕರೆ ಮಾಡಿರುವ ಆರೋಪಿ, ಮನಿ ಲಾಂಡರಿಂಗ್​ ಮತ್ತು ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮ್ಮ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಓಂ ಅಬ್ದುಲ್ ಸಲಾಂ ಎಂಬ ವ್ಯಕ್ತಿಯ ಮನೆಯಲ್ಲಿ ದಾಳಿ ನಡೆಸಿದಾಗ ನಿಮ್ಮ ಹೆಸರಿನ ಕೆನರಾ ಬ್ಯಾಂಕ್ ಡೆಬಿಟ್ ಕಾರ್ಡ್ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದಿಂದ ನೀವು ಹೊರಬರಬೇಕು ಎಂದರೆ ಹೇಳಿದ ಖಾತೆಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಪರಿಶೀಲನೆ ಬಳಿಕ ಅದನ್ನು ಹಿಂತಿರುಗಿಸುವ ಭರವಸೆ ನೀಡಿದ್ದು, ಹಣ ನೀಡದೆ ಹೋದರೆ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಹೆಜ್ಜೆಯಿಟ್ಟ ಸರ್ಕಾರ: ಸೈಬರ್ ಕಮಾಂಡ್ ಸೆಂಟರ್ ಆರಂಭ

ಇಷ್ಟೇ ಅಲ್ಲದೆ ಇದು ರಹಸ್ಯ ವಿಚಾರವಾಗಿದ್ದು, ಇದನ್ನು ಪತ್ನಿಗೂ ಸೇರಿ ಯಾರ ಜೊತೆಯೂ ಹಂಚಿಕೊಳ್ಳಬಾರದು. ಒಂದೊಮ್ಮೆ ವಿಷಯ ಹೊರಗಡೆ ಹೋದರೆ ನಿಮ್ಮನ್ನು ಬಂಧಿಸಲಾಗುವುದು ಎಂದುಹೆದರಿಸಲಾಗಿದೆ. ಇದರಿಂದಾಗಿ ಗಾಬರಿಗೊಂಡ ಉದ್ಯಮಿ, ಯಾರಿಗೂ ವಿಷಯ ತಿಳಿಸಿಲ್ಲ. ಜೊತೆಗೆ ತನ್ನ ಬ್ಯಾಂಕ್​ ಖಾತೆಯಲ್ಲಿದ್ದ ಹಣವನ್ನು ಆರ್‌ಟಿಜಿಎಸ್ ಮೂಲಕ ಆರೋಪಿ ಹೇಳಿದ್ದ ಅಕೌಂಟ್​ಗೆ ವರ್ಗಾಯಿಸಿದ್ದಾರೆ. ಅಕ್ಟೋಬರ್ 8ರಿಂದ 16ರ ನಡುವೆ ಒಟ್ಟು ಆರು ಬಾರಿ ಆರೋಪಿಗೆ ಉದ್ಯಮಿ ಹಣ ವರ್ಗಾಯಿಸಿದ್ದು, ಒಟ್ಟು 1.32 ಕೋಟಿ ರೂ. ನೀಡಿದ್ದಾರೆ. ಹಣ ಪಡೆದ ವಂಚಕ ಮತ್ತೆ ಸಂಪರ್ಕಕ್ಕೆ ಸಿಗದ ಕಾರಣ ಉದ್ಯಮಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ