AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ. ಸುಲಿಗೆ

ಬೆಂಗಳೂರಿನ 56 ವರ್ಷದ ಉದ್ಯಮಿಯೊಬ್ಬರು ನಕಲಿ ಅಧಿಕಾರಿಗಳಿಂದ 1.32 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಮನಿ ಲಾಂಡರಿಂಗ್ ಮತ್ತು ಅಶ್ಲೀಲ ವಿಡಿಯೋಗಳ ಆರೋಪದಡಿ ತನಿಖೆ ನೆಪದಲ್ಲಿ ಕರೆ ಮಾಡಿದ್ದ ನಕಲಿ ಅಧಿಕಾರಿಗಳು, ಹಣ ವರ್ಗಾಯಿಸಿಕೊಂಡು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆಗೆ ಒಳಗಾದ ಉದ್ಯಮಿ ನೀಡಿರುವ ದೂರಿನ ಅನ್ವಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ.  ಸುಲಿಗೆ
ಸೈಬರ್​ ವಂಚನೆ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 29, 2025 | 12:41 PM

Share

ಬೆಂಗಳೂರು, ಅಕ್ಟೋಬರ್​ 29: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ (Cyber Fraud) ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56 ವರ್ಷದ ಉದ್ಯಮಿ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಬೆಂಬಲ ನೀಡಿರುವ ಮತ್ತು ಉಗ್ರ ಚಟುವಟಿಕೆಗಳಿಗೆ ಹಣ ನೀಡಿರುವ ಆರೋಪ ಇದೆ ಎನ್ನಲಾಗಿದೆ.

ಮುಂಬೈ ಪೊಲೀಸ್‌ನ ಎನ್‌ಫೋರ್ಸ್ ಡಿಪಾರ್ಟ್‌ಮೆಂಟ್ ಹೆಸರು ಹೇಳಿ ಉದ್ಯಮಿಗೆ ಕರೆ ಮಾಡಿರುವ ಆರೋಪಿ, ಮನಿ ಲಾಂಡರಿಂಗ್​ ಮತ್ತು ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮ್ಮ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಓಂ ಅಬ್ದುಲ್ ಸಲಾಂ ಎಂಬ ವ್ಯಕ್ತಿಯ ಮನೆಯಲ್ಲಿ ದಾಳಿ ನಡೆಸಿದಾಗ ನಿಮ್ಮ ಹೆಸರಿನ ಕೆನರಾ ಬ್ಯಾಂಕ್ ಡೆಬಿಟ್ ಕಾರ್ಡ್ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದಿಂದ ನೀವು ಹೊರಬರಬೇಕು ಎಂದರೆ ಹೇಳಿದ ಖಾತೆಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಪರಿಶೀಲನೆ ಬಳಿಕ ಅದನ್ನು ಹಿಂತಿರುಗಿಸುವ ಭರವಸೆ ನೀಡಿದ್ದು, ಹಣ ನೀಡದೆ ಹೋದರೆ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಹೆಜ್ಜೆಯಿಟ್ಟ ಸರ್ಕಾರ: ಸೈಬರ್ ಕಮಾಂಡ್ ಸೆಂಟರ್ ಆರಂಭ

ಇಷ್ಟೇ ಅಲ್ಲದೆ ಇದು ರಹಸ್ಯ ವಿಚಾರವಾಗಿದ್ದು, ಇದನ್ನು ಪತ್ನಿಗೂ ಸೇರಿ ಯಾರ ಜೊತೆಯೂ ಹಂಚಿಕೊಳ್ಳಬಾರದು. ಒಂದೊಮ್ಮೆ ವಿಷಯ ಹೊರಗಡೆ ಹೋದರೆ ನಿಮ್ಮನ್ನು ಬಂಧಿಸಲಾಗುವುದು ಎಂದುಹೆದರಿಸಲಾಗಿದೆ. ಇದರಿಂದಾಗಿ ಗಾಬರಿಗೊಂಡ ಉದ್ಯಮಿ, ಯಾರಿಗೂ ವಿಷಯ ತಿಳಿಸಿಲ್ಲ. ಜೊತೆಗೆ ತನ್ನ ಬ್ಯಾಂಕ್​ ಖಾತೆಯಲ್ಲಿದ್ದ ಹಣವನ್ನು ಆರ್‌ಟಿಜಿಎಸ್ ಮೂಲಕ ಆರೋಪಿ ಹೇಳಿದ್ದ ಅಕೌಂಟ್​ಗೆ ವರ್ಗಾಯಿಸಿದ್ದಾರೆ. ಅಕ್ಟೋಬರ್ 8ರಿಂದ 16ರ ನಡುವೆ ಒಟ್ಟು ಆರು ಬಾರಿ ಆರೋಪಿಗೆ ಉದ್ಯಮಿ ಹಣ ವರ್ಗಾಯಿಸಿದ್ದು, ಒಟ್ಟು 1.32 ಕೋಟಿ ರೂ. ನೀಡಿದ್ದಾರೆ. ಹಣ ಪಡೆದ ವಂಚಕ ಮತ್ತೆ ಸಂಪರ್ಕಕ್ಕೆ ಸಿಗದ ಕಾರಣ ಉದ್ಯಮಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ