AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ. ಸುಲಿಗೆ

ಬೆಂಗಳೂರಿನ 56 ವರ್ಷದ ಉದ್ಯಮಿಯೊಬ್ಬರು ನಕಲಿ ಅಧಿಕಾರಿಗಳಿಂದ 1.32 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಮನಿ ಲಾಂಡರಿಂಗ್ ಮತ್ತು ಅಶ್ಲೀಲ ವಿಡಿಯೋಗಳ ಆರೋಪದಡಿ ತನಿಖೆ ನೆಪದಲ್ಲಿ ಕರೆ ಮಾಡಿದ್ದ ನಕಲಿ ಅಧಿಕಾರಿಗಳು, ಹಣ ವರ್ಗಾಯಿಸಿಕೊಂಡು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆಗೆ ಒಳಗಾದ ಉದ್ಯಮಿ ನೀಡಿರುವ ದೂರಿನ ಅನ್ವಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಸೋಗಲ್ಲಿ ಉದ್ಯಮಿಗೆ ಕರೆ: ಭಯಗೊಂಡ ಉದ್ಯಮಿಯಿಂದ 1.32 ಕೋಟಿ ರೂ.  ಸುಲಿಗೆ
ಸೈಬರ್​ ವಂಚನೆ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 29, 2025 | 12:41 PM

Share

ಬೆಂಗಳೂರು, ಅಕ್ಟೋಬರ್​ 29: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ (Cyber Fraud) ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56 ವರ್ಷದ ಉದ್ಯಮಿ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಬೆಂಬಲ ನೀಡಿರುವ ಮತ್ತು ಉಗ್ರ ಚಟುವಟಿಕೆಗಳಿಗೆ ಹಣ ನೀಡಿರುವ ಆರೋಪ ಇದೆ ಎನ್ನಲಾಗಿದೆ.

ಮುಂಬೈ ಪೊಲೀಸ್‌ನ ಎನ್‌ಫೋರ್ಸ್ ಡಿಪಾರ್ಟ್‌ಮೆಂಟ್ ಹೆಸರು ಹೇಳಿ ಉದ್ಯಮಿಗೆ ಕರೆ ಮಾಡಿರುವ ಆರೋಪಿ, ಮನಿ ಲಾಂಡರಿಂಗ್​ ಮತ್ತು ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮ್ಮ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಓಂ ಅಬ್ದುಲ್ ಸಲಾಂ ಎಂಬ ವ್ಯಕ್ತಿಯ ಮನೆಯಲ್ಲಿ ದಾಳಿ ನಡೆಸಿದಾಗ ನಿಮ್ಮ ಹೆಸರಿನ ಕೆನರಾ ಬ್ಯಾಂಕ್ ಡೆಬಿಟ್ ಕಾರ್ಡ್ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದಿಂದ ನೀವು ಹೊರಬರಬೇಕು ಎಂದರೆ ಹೇಳಿದ ಖಾತೆಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಪರಿಶೀಲನೆ ಬಳಿಕ ಅದನ್ನು ಹಿಂತಿರುಗಿಸುವ ಭರವಸೆ ನೀಡಿದ್ದು, ಹಣ ನೀಡದೆ ಹೋದರೆ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಹೆಜ್ಜೆಯಿಟ್ಟ ಸರ್ಕಾರ: ಸೈಬರ್ ಕಮಾಂಡ್ ಸೆಂಟರ್ ಆರಂಭ

ಇಷ್ಟೇ ಅಲ್ಲದೆ ಇದು ರಹಸ್ಯ ವಿಚಾರವಾಗಿದ್ದು, ಇದನ್ನು ಪತ್ನಿಗೂ ಸೇರಿ ಯಾರ ಜೊತೆಯೂ ಹಂಚಿಕೊಳ್ಳಬಾರದು. ಒಂದೊಮ್ಮೆ ವಿಷಯ ಹೊರಗಡೆ ಹೋದರೆ ನಿಮ್ಮನ್ನು ಬಂಧಿಸಲಾಗುವುದು ಎಂದುಹೆದರಿಸಲಾಗಿದೆ. ಇದರಿಂದಾಗಿ ಗಾಬರಿಗೊಂಡ ಉದ್ಯಮಿ, ಯಾರಿಗೂ ವಿಷಯ ತಿಳಿಸಿಲ್ಲ. ಜೊತೆಗೆ ತನ್ನ ಬ್ಯಾಂಕ್​ ಖಾತೆಯಲ್ಲಿದ್ದ ಹಣವನ್ನು ಆರ್‌ಟಿಜಿಎಸ್ ಮೂಲಕ ಆರೋಪಿ ಹೇಳಿದ್ದ ಅಕೌಂಟ್​ಗೆ ವರ್ಗಾಯಿಸಿದ್ದಾರೆ. ಅಕ್ಟೋಬರ್ 8ರಿಂದ 16ರ ನಡುವೆ ಒಟ್ಟು ಆರು ಬಾರಿ ಆರೋಪಿಗೆ ಉದ್ಯಮಿ ಹಣ ವರ್ಗಾಯಿಸಿದ್ದು, ಒಟ್ಟು 1.32 ಕೋಟಿ ರೂ. ನೀಡಿದ್ದಾರೆ. ಹಣ ಪಡೆದ ವಂಚಕ ಮತ್ತೆ ಸಂಪರ್ಕಕ್ಕೆ ಸಿಗದ ಕಾರಣ ಉದ್ಯಮಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ